Homeಮುಖಪುಟಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

ಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

- Advertisement -
- Advertisement -

ತಮಿಳು ಚಲನಚಿತ್ರ ನಿರ್ಮಾಪಕರ ಮಂಡಳಿಯು (TFPC) ಚಲನಚಿತ್ರ ವಿಮರ್ಶಕರು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳಿಗೆ ಭಾನುವಾರ ವಿಚಿತ್ರವಾದ ವಿನಂತಿ ಮಾಡಿದ್ದು, ತಮಿಳು ಸಿನಿಮಾಗಳು ಬಿಡುಗಡೆಯಾಗಿ ಕನಿಷ್ಠ ಮೂರು ದಿನಗಳ ವರೆಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಪೋಸ್ಟ್ ಮಾಡಬೇಡಿ ಎಂದು ಹೇಳಿದೆ.

ಸಾಮಾಜಿಕ ಮಾಧ್ಯಮಗಳ ನಕಾರಾತ್ಮಕ ವಿಮರ್ಶೆಗಳು ಚಲನಚಿತ್ರಗಳ ಗಳಿಕೆಗಳನ್ನು ಹಾನಿ ಮಾಡುವುದು ಗಮನಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿಯು ಹೇಳಿಕೊಂಡಿದೆ. ಆದರೆ ವಿಮರ್ಶಕರು ಇದನ್ನು ವಿರೋಧಿಸಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚಿತ್ರ ಬಿಡುಗಡೆಯ ದಿನ ಅದನ್ನು ವೀಕ್ಷಿಸಿದವರು ತಮ್ಮ ಅಭಿಪ್ರಾಯ ಅಥವಾ ವಿಮರ್ಶೆಗಳನ್ನು ಹಂಚಿಕೊಳ್ಳುವುದಕ್ಕೆ ಯಾಕೆ ನಿರ್ಬಂಧಿಸಬೇಕು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ‘ವಿಮರ್ಶೆ ನಿಷೇಧ’ ಜಾರಿಯಾಗುವುದು ಹೇಗೆ ಸಾಧ್ಯ? ಇದು ವ್ಯಕ್ತಿಯೊಬ್ಬನ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಂತೆ ಭಾಸವಾಗುತ್ತಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಚಲನಚಿತ್ರ ವಿಮರ್ಶಕ ಮತ್ತು ಮನರಂಜನಾ ಸಂಪಾದಕ ಸುಧೀರ್ ಶ್ರೀನಿವಾಸನ್ ಹೇಳಿದ್ದಾರೆ.

ಇದನ್ನೂ ಓದಿ: ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ಆದರೆ ಚಿತ್ರ ವಿಮರ್ಶೆಗಳು ಮೂಲಭೂತವಾದ ವಿಷಯಗಳನ್ನು ಅನುಸರಿಸಬೇಕು. ಚಲನಚಿತ್ರದ ಅನುಭವವನ್ನು ಕೊಲ್ಲುವ ಗುರಿಯೊಂದಿಗೆ ವಿಮರ್ಶೆ ಇರಬಾರದು ಎಂದು ತಾನು ಭಾವಿಸುವುದಾಗಿ ಅವರು ಹೇಳಿದ್ದಾರೆ.

“ತಾವು ನೋಡಿದ ಚಲನಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಬೇಡಿ ಎಂದು ಸಾಮಾಜಿಕ ಮಾಧ್ಯಮದ ಯುಗದಲ್ಲಿ ಟ್ವಿಟ್ಟರ್ ಬಳಕೆದಾರರನ್ನು ಕೇಳುವುದು ನಿಜವಾಗಿಯೂ ಕಷ್ಟಕರವಾಗಿರುತ್ತದೆ” ಎಂದು ಚಲನಚಿತ್ರ ವಿಮರ್ಶಕಿ ಮತ್ತು ಸ್ವತಂತ್ರ ಪತ್ರಕರ್ತೆ ಕವಿತಾ ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ.

“ಚಿತ್ರಗಳ ಕಥೆಗಳನ್ನು ಹಾಕಬೇಡಿ ಎಂದು ಅವರು ಜನರನ್ನು ಕೇಳಬಹುದು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಹಾಕದಂತೆ ಜನರಿಗೆ ಹೇಳುವುದು ಅಸಮಂಜಸವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ಈ ಮಧ್ಯೆ, ಈ ‘ವಿನಂತಿ’ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದಾದ್ಯಂತ ಎಲ್ಲಾ ವಿಮರ್ಶಕರಿಗೆ ಅನ್ವಯಿಸುತ್ತದೆಯೇ ಅಥವಾ ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಮಾತ್ರ ಅನ್ವಯಿಸುತ್ತದೆಯೇ ಎಂಬುದರ ಕುರಿತು TFPC ಇನ್ನೂ ಸ್ಪಷ್ಟತೆಯನ್ನು ನೀಡಿಲ್ಲ. ಅದರ ಸದಸ್ಯರು ಬೇರೆ ಬೇರೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

“ಚಲನಚಿತ್ರದ ಬಿಡುಗಡೆಯಾದ ತಕ್ಷಣ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಪೋಸ್ಟ್ ಮಾಡುವುದನ್ನು ತಡೆಯಲು ಎಲ್ಲಾ ಚಿತ್ರ ವಿಮರ್ಶಕರಿಗೆ ಕೇಳಿಕೊಳ್ಳುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಘೋಷಿಸಲಾಗುವುದು” ಎಂದು ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿಯ ಅಧ್ಯಕ್ಷ, TFPC ಸದಸ್ಯ ಸಿ. ಕಲ್ಯಾಣ್ ಹೇಳಿದ್ದಾರೆ.

TFPC ಯ ಉಪಾಧ್ಯಕ್ಷ ಆರ್‌.ಕೆ. ಸುರೇಶ್ ಅವರು, ಎಲ್ಲಾ ವಿಮರ್ಶಕರಿಗೆ ಮಾರ್ಗಸೂಚಿ ಅನ್ವಯಿಸುತ್ತದೆ ಎಂದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಆದರೆ, ಕೌನ್ಸಿಲ್ ಕೇವಲ ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಬಗ್ಗೆ ಮಾತನಾಡುತ್ತಿದೆಯೇ ಹೊರತು ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳ ಬಗ್ಗೆ ಅಲ್ಲ ಎಂದು TFPC ಪ್ರಧಾನ ಕಾರ್ಯದರ್ಶಿ ಆರ್. ರಾಧಾಕೃಷ್ಣನ್ ಅಭಿಪ್ರಾಯಪಟ್ಟಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...