Homeಮುಖಪುಟಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

ಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

- Advertisement -
- Advertisement -

ತಮಿಳು ಚಲನಚಿತ್ರ ನಿರ್ಮಾಪಕರ ಮಂಡಳಿಯು (TFPC) ಚಲನಚಿತ್ರ ವಿಮರ್ಶಕರು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳಿಗೆ ಭಾನುವಾರ ವಿಚಿತ್ರವಾದ ವಿನಂತಿ ಮಾಡಿದ್ದು, ತಮಿಳು ಸಿನಿಮಾಗಳು ಬಿಡುಗಡೆಯಾಗಿ ಕನಿಷ್ಠ ಮೂರು ದಿನಗಳ ವರೆಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಪೋಸ್ಟ್ ಮಾಡಬೇಡಿ ಎಂದು ಹೇಳಿದೆ.

ಸಾಮಾಜಿಕ ಮಾಧ್ಯಮಗಳ ನಕಾರಾತ್ಮಕ ವಿಮರ್ಶೆಗಳು ಚಲನಚಿತ್ರಗಳ ಗಳಿಕೆಗಳನ್ನು ಹಾನಿ ಮಾಡುವುದು ಗಮನಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿಯು ಹೇಳಿಕೊಂಡಿದೆ. ಆದರೆ ವಿಮರ್ಶಕರು ಇದನ್ನು ವಿರೋಧಿಸಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚಿತ್ರ ಬಿಡುಗಡೆಯ ದಿನ ಅದನ್ನು ವೀಕ್ಷಿಸಿದವರು ತಮ್ಮ ಅಭಿಪ್ರಾಯ ಅಥವಾ ವಿಮರ್ಶೆಗಳನ್ನು ಹಂಚಿಕೊಳ್ಳುವುದಕ್ಕೆ ಯಾಕೆ ನಿರ್ಬಂಧಿಸಬೇಕು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ‘ವಿಮರ್ಶೆ ನಿಷೇಧ’ ಜಾರಿಯಾಗುವುದು ಹೇಗೆ ಸಾಧ್ಯ? ಇದು ವ್ಯಕ್ತಿಯೊಬ್ಬನ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಂತೆ ಭಾಸವಾಗುತ್ತಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಚಲನಚಿತ್ರ ವಿಮರ್ಶಕ ಮತ್ತು ಮನರಂಜನಾ ಸಂಪಾದಕ ಸುಧೀರ್ ಶ್ರೀನಿವಾಸನ್ ಹೇಳಿದ್ದಾರೆ.

ಇದನ್ನೂ ಓದಿ: ನಚ್ಚತಿರಂ ನಗರ್ಗಿರದು: ಮನುವಾದಕ್ಕೆ ತಿರುಗೇಟು; ಮನಪರಿವರ್ತನೆಗೆ ಅವಕಾಶ- ಇದು ಪ.ರಂಜಿತ್‌ ಪ್ರೇಮಲೋಕ

ಆದರೆ ಚಿತ್ರ ವಿಮರ್ಶೆಗಳು ಮೂಲಭೂತವಾದ ವಿಷಯಗಳನ್ನು ಅನುಸರಿಸಬೇಕು. ಚಲನಚಿತ್ರದ ಅನುಭವವನ್ನು ಕೊಲ್ಲುವ ಗುರಿಯೊಂದಿಗೆ ವಿಮರ್ಶೆ ಇರಬಾರದು ಎಂದು ತಾನು ಭಾವಿಸುವುದಾಗಿ ಅವರು ಹೇಳಿದ್ದಾರೆ.

“ತಾವು ನೋಡಿದ ಚಲನಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಬೇಡಿ ಎಂದು ಸಾಮಾಜಿಕ ಮಾಧ್ಯಮದ ಯುಗದಲ್ಲಿ ಟ್ವಿಟ್ಟರ್ ಬಳಕೆದಾರರನ್ನು ಕೇಳುವುದು ನಿಜವಾಗಿಯೂ ಕಷ್ಟಕರವಾಗಿರುತ್ತದೆ” ಎಂದು ಚಲನಚಿತ್ರ ವಿಮರ್ಶಕಿ ಮತ್ತು ಸ್ವತಂತ್ರ ಪತ್ರಕರ್ತೆ ಕವಿತಾ ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ.

“ಚಿತ್ರಗಳ ಕಥೆಗಳನ್ನು ಹಾಕಬೇಡಿ ಎಂದು ಅವರು ಜನರನ್ನು ಕೇಳಬಹುದು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಹಾಕದಂತೆ ಜನರಿಗೆ ಹೇಳುವುದು ಅಸಮಂಜಸವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಲಿತರ ಕಥೆಯುಳ್ಳ ‘ಪಾಲಾರ್‌‌’ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಒಪ್ಪದ ಆಡಿಯೊ ಕಂಪನಿಗಳು; ನಿರ್ದೇಶಕರ ಆರೋಪ

ಈ ಮಧ್ಯೆ, ಈ ‘ವಿನಂತಿ’ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದಾದ್ಯಂತ ಎಲ್ಲಾ ವಿಮರ್ಶಕರಿಗೆ ಅನ್ವಯಿಸುತ್ತದೆಯೇ ಅಥವಾ ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಮಾತ್ರ ಅನ್ವಯಿಸುತ್ತದೆಯೇ ಎಂಬುದರ ಕುರಿತು TFPC ಇನ್ನೂ ಸ್ಪಷ್ಟತೆಯನ್ನು ನೀಡಿಲ್ಲ. ಅದರ ಸದಸ್ಯರು ಬೇರೆ ಬೇರೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

“ಚಲನಚಿತ್ರದ ಬಿಡುಗಡೆಯಾದ ತಕ್ಷಣ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಮರ್ಶೆಗಳನ್ನು ಪೋಸ್ಟ್ ಮಾಡುವುದನ್ನು ತಡೆಯಲು ಎಲ್ಲಾ ಚಿತ್ರ ವಿಮರ್ಶಕರಿಗೆ ಕೇಳಿಕೊಳ್ಳುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಘೋಷಿಸಲಾಗುವುದು” ಎಂದು ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿಯ ಅಧ್ಯಕ್ಷ, TFPC ಸದಸ್ಯ ಸಿ. ಕಲ್ಯಾಣ್ ಹೇಳಿದ್ದಾರೆ.

TFPC ಯ ಉಪಾಧ್ಯಕ್ಷ ಆರ್‌.ಕೆ. ಸುರೇಶ್ ಅವರು, ಎಲ್ಲಾ ವಿಮರ್ಶಕರಿಗೆ ಮಾರ್ಗಸೂಚಿ ಅನ್ವಯಿಸುತ್ತದೆ ಎಂದು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಆದರೆ, ಕೌನ್ಸಿಲ್ ಕೇವಲ ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಬಗ್ಗೆ ಮಾತನಾಡುತ್ತಿದೆಯೇ ಹೊರತು ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳ ಬಗ್ಗೆ ಅಲ್ಲ ಎಂದು TFPC ಪ್ರಧಾನ ಕಾರ್ಯದರ್ಶಿ ಆರ್. ರಾಧಾಕೃಷ್ಣನ್ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...