Homeಮುಖಪುಟ''ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ" | ಆಪರೇಷನ್ ಸಿಂಧೂರ ಹೇಳಿಕೆಗಳ ಬಗ್ಗೆ ಎನ್‌ಡಿಎ ನಾಯಕರಿಗೆ ಪ್ರಧಾನಿ ಸಲಹೆ

”ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ” | ಆಪರೇಷನ್ ಸಿಂಧೂರ ಹೇಳಿಕೆಗಳ ಬಗ್ಗೆ ಎನ್‌ಡಿಎ ನಾಯಕರಿಗೆ ಪ್ರಧಾನಿ ಸಲಹೆ

- Advertisement -
- Advertisement -

ಸಾರ್ವಜನಿಕ ಹೇಳಿಕೆಗಳಲ್ಲಿ ಸಂಯಮ ಕಾಯ್ದುಕೊಳ್ಳುವಂತೆ ಎನ್‌ಡಿಎ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಭಾನುವಾರ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತಮ ಆಡಳಿತದ ಮೇಲೆ ಕೇಂದ್ರೀಕರಿಸಿ ನಡೆದ ಸಭೆಯಲ್ಲಿ ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು. ”ಎಲ್ಲೆಂದರಲ್ಲಿ

ಪಕ್ಷದ ನಾಯಕರು ಮಾಡಿದ ಅನಗತ್ಯ ಹೇಳಿಕೆಗಳ ಬಗ್ಗೆ ಪ್ರಧಾನಿ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ ವಿವೇಚನಾರಹಿತ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ” ಎಂದು ಅವರು ಹೇಳಿದ್ದಾಗಿ ವರದಿಯಾಗಿದ್ದು, ಶಿಸ್ತುಬದ್ಧ ಸಂವಹನದ ಅಗತ್ಯವನ್ನು ಈ ವೇಳೆ ಅವರು ಒತ್ತಿ ಹೇಳಿದ್ದಾರೆ ಎಂದು ಅದು ತಿಳಿಸಿದೆ.

ಆಪರೇಷನ್ ಸಿಂಧೂರ ಬಗ್ಗೆ ಮಧ್ಯಪ್ರದೇಶ ಮತ್ತು ಹರಿಯಾಣದ ಬಿಜೆಪಿ ನಾಯಕರು ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ಸಲಹೆ ಬಂದಿದೆ ಎಂದು ವರದಿ ಉಲ್ಲೇಖಿಸಿದೆ. ಈ ನಾಯಕರ ಈ ಹೇಳಿಕೆಯು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ ಎಂದು ವರದಿಯಾಗಿದೆ.

“ಆಪರೇಷನ್ ಸಿಂಧೂರ” ವಿಷಯದ ಕುರಿತು ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿಯ ಭಾಗವಹಿಸುವಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಪಾಕಿಸ್ತಾನದ ಕೋರಿಕೆಯ ಮೇರೆಗೆ ಕದನ ವಿರಾಮದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಈ ಹಿಂದೆ ಬಿಜೆಪಿ ನಾಯಕರು ಆಪರೇಷನ್ ಸಿಂಧೂರ ಮತ್ತು ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಇದು ಪಕ್ಷವನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.

ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ, ಆಪರೇಷನ್ ಸಿಂಧೂರ್ ಕುರಿತಾದ ಪತ್ರಿಕಾಗೋಷ್ಠಿಯ ಸಮಯದಲ್ಲಿ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುವ ಅಧಿಕಾರಿಗಳಲ್ಲೊಬ್ಬರಾದ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಮಾನಕರ ಹೇಳಿಕೆಗಳನ್ನು ನೀಡಿದ್ದು, ಭಾರೀ ಕೋಲಾಹಲಕ್ಕೆ ಕಾರಣವಾಯಿತ್ತು.

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಹೇಳಿದ್ದರು. ಅದೇ ರೀತಿ, ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ಸಶಸ್ತ್ರ ಪಡೆಗಳು ಪ್ರಧಾನಿ ನರೇಂದ್ರ ಮೋದಿಗೆ ತಲೆಬಾಗಬೇಕು ಎಂದು ಸೂಚಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದರು. ಹಿರಿಯ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಶಾ ಅವರ ಹೇಳಿಕೆಗಳಿಂದ ದೂರವಿದ್ದು, ಅವರನ್ನು “ನಗುವ ವಸ್ತು” ಎಂದು ಕರೆದಿದ್ದರು.

ಬಿಜೆಪಿ ಸಚಿವರ ಈ ಹೇಳಿಕೆಗಳು ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದವು. ಕಾಂಗ್ರೆಸ್ ಈ ಹೇಳಿಕೆಗಳನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಘೋಷಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...