Homeಮುಖಪುಟ''ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ" | ಆಪರೇಷನ್ ಸಿಂಧೂರ ಹೇಳಿಕೆಗಳ ಬಗ್ಗೆ ಎನ್‌ಡಿಎ ನಾಯಕರಿಗೆ ಪ್ರಧಾನಿ ಸಲಹೆ

”ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ” | ಆಪರೇಷನ್ ಸಿಂಧೂರ ಹೇಳಿಕೆಗಳ ಬಗ್ಗೆ ಎನ್‌ಡಿಎ ನಾಯಕರಿಗೆ ಪ್ರಧಾನಿ ಸಲಹೆ

- Advertisement -
- Advertisement -

ಸಾರ್ವಜನಿಕ ಹೇಳಿಕೆಗಳಲ್ಲಿ ಸಂಯಮ ಕಾಯ್ದುಕೊಳ್ಳುವಂತೆ ಎನ್‌ಡಿಎ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಭಾನುವಾರ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತಮ ಆಡಳಿತದ ಮೇಲೆ ಕೇಂದ್ರೀಕರಿಸಿ ನಡೆದ ಸಭೆಯಲ್ಲಿ ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು. ”ಎಲ್ಲೆಂದರಲ್ಲಿ

ಪಕ್ಷದ ನಾಯಕರು ಮಾಡಿದ ಅನಗತ್ಯ ಹೇಳಿಕೆಗಳ ಬಗ್ಗೆ ಪ್ರಧಾನಿ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ ವಿವೇಚನಾರಹಿತ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ” ಎಂದು ಅವರು ಹೇಳಿದ್ದಾಗಿ ವರದಿಯಾಗಿದ್ದು, ಶಿಸ್ತುಬದ್ಧ ಸಂವಹನದ ಅಗತ್ಯವನ್ನು ಈ ವೇಳೆ ಅವರು ಒತ್ತಿ ಹೇಳಿದ್ದಾರೆ ಎಂದು ಅದು ತಿಳಿಸಿದೆ.

ಆಪರೇಷನ್ ಸಿಂಧೂರ ಬಗ್ಗೆ ಮಧ್ಯಪ್ರದೇಶ ಮತ್ತು ಹರಿಯಾಣದ ಬಿಜೆಪಿ ನಾಯಕರು ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ಸಲಹೆ ಬಂದಿದೆ ಎಂದು ವರದಿ ಉಲ್ಲೇಖಿಸಿದೆ. ಈ ನಾಯಕರ ಈ ಹೇಳಿಕೆಯು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ ಎಂದು ವರದಿಯಾಗಿದೆ.

“ಆಪರೇಷನ್ ಸಿಂಧೂರ” ವಿಷಯದ ಕುರಿತು ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿಯ ಭಾಗವಹಿಸುವಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಪಾಕಿಸ್ತಾನದ ಕೋರಿಕೆಯ ಮೇರೆಗೆ ಕದನ ವಿರಾಮದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಈ ಹಿಂದೆ ಬಿಜೆಪಿ ನಾಯಕರು ಆಪರೇಷನ್ ಸಿಂಧೂರ ಮತ್ತು ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಇದು ಪಕ್ಷವನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.

ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ, ಆಪರೇಷನ್ ಸಿಂಧೂರ್ ಕುರಿತಾದ ಪತ್ರಿಕಾಗೋಷ್ಠಿಯ ಸಮಯದಲ್ಲಿ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುವ ಅಧಿಕಾರಿಗಳಲ್ಲೊಬ್ಬರಾದ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಮಾನಕರ ಹೇಳಿಕೆಗಳನ್ನು ನೀಡಿದ್ದು, ಭಾರೀ ಕೋಲಾಹಲಕ್ಕೆ ಕಾರಣವಾಯಿತ್ತು.

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಹೇಳಿದ್ದರು. ಅದೇ ರೀತಿ, ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ಸಶಸ್ತ್ರ ಪಡೆಗಳು ಪ್ರಧಾನಿ ನರೇಂದ್ರ ಮೋದಿಗೆ ತಲೆಬಾಗಬೇಕು ಎಂದು ಸೂಚಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದರು. ಹಿರಿಯ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಶಾ ಅವರ ಹೇಳಿಕೆಗಳಿಂದ ದೂರವಿದ್ದು, ಅವರನ್ನು “ನಗುವ ವಸ್ತು” ಎಂದು ಕರೆದಿದ್ದರು.

ಬಿಜೆಪಿ ಸಚಿವರ ಈ ಹೇಳಿಕೆಗಳು ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದವು. ಕಾಂಗ್ರೆಸ್ ಈ ಹೇಳಿಕೆಗಳನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಘೋಷಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...