Homeಕರ್ನಾಟಕಗ್ಯಾರಂಟಿಗಳಿಂದ ಕೊಟ್ಟ ಖುಷಿಯನ್ನು ಮದ್ಯದಂಗಡಿ ಪರವಾಣಿಗೆ ಮೂಲಕ ಕಸಿಯದಿರಿ: ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ

ಗ್ಯಾರಂಟಿಗಳಿಂದ ಕೊಟ್ಟ ಖುಷಿಯನ್ನು ಮದ್ಯದಂಗಡಿ ಪರವಾಣಿಗೆ ಮೂಲಕ ಕಸಿಯದಿರಿ: ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ

- Advertisement -
- Advertisement -

”ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು ಹೊರಟಿರುವುದು ಆಘಾತಕಾರಿ” ಎಂದು ದ.ಕ. ಜಿಲ್ಲೆಯ ಮದ್ಯನಿಷೇಧ ಆಂದೋಲನದಡಿ ಜಿಲ್ಲೆಯ ವಿವಿಧ ಸಂಘಟನೆಗಳ ಮಹಿಳಾ ಪ್ರತಿನಿಧಿಗಳು ರಾಜ್ಯ ಸರಕಾರಕ್ಕೆ  ಭಾವನಾತ್ಮಕ ಮನವಿ ಮಾಡಿದ್ದಾರೆ.

ಮಂಗಳೂರಿನ ಪುರಭವನದ ಸಮೀಪದ ರಾಜಾಜೀ ಪಾರ್ಕ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದ ಸಂದರ್ಭ ಮಹಿಳಾ ಹೋರಾಟಗಾರರ ಗುಂಪೊಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲ್ಲಿಸಿತು.

”ಯಾವುದೇ ಸರಕಾರ ಮದ್ಯ ಮಾರಾಟದಿಂದ ಬರುವ ಆದಾಯವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವುದು ಅಪರಾಧ ಎಂದು ಗಾಂಧೀಜಿ ಹೇಳಿದ್ದರು. ಆದರೆ ಸರಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು 600 ಗ್ರಾಮ ಪಂಚಾಯತ್ ಸೇರಿದಂತೆ 1000 ಹೊಸ ಮದ್ಯದಂಗಡಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿರುವುದು ತಿಳಿದು ಆಘಾತಗೊಂಡಿದ್ದೇವೆ” ಎಂದು ಮದ್ಯ ನಿಷೇಧ ಆಂದೋಲನ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಯುವ ಮುನ್ನಡೆ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ, ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘ (ಸಿಪಿಐಎಂಎಎಲ್)ಗಳನ್ನು ಒಳಗೊಂಡ ಪ್ರತಿನಿಧಿಗಳು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

”ಮದ್ಯ ನಿಷೇಧ ಆಂದೋಲನದ ಮಹಿಳೆಯರು 2015ರಿಂದಲೂ ಹೈಕೋರ್ಟ್‌ನ ಆದೇಶದಂತೆ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಗಾರರ ಮೇಲೆ ಕಠಿಣ ಕ್ರಮ ವಹಿಸಬೇಕು. ಕರ್ನಾಟಕ ಪಂಚಾಯತ್‌ರಾಜ್ ಕಾನೂನಿನ ಅನ್ವಯ (73ನೆ ತಿದ್ದುಪಡಿ) ಗ್ರಾಮಸಭೆಗೆ ಪರಮಾಧಿಕಾರ ನೀಡುವ ಆದೇಶ ಹೊರಡಿಸಬೇಕು. ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಂತೆ ಶೇ. 10ರಷ್ಟು ಮಹಿಳೆಯರು ಆಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ನೀಡಬಾರದು ಎಂಬುದಾಗಿ ಗ್ರಾಮ ಸಭೆಯಲ್ಲಿ ನಿರ್ಧರಿಸಿದ್ದಲ್ಲಿ ಆ ಠರಾವನ್ನು ಸರಕಾರ ಎತ್ತಿ ಹಿಡಿಯಬೇಕು ಎಂಬ ತಮ್ಮ ಹಕ್ಕೊತ್ತಾಯವನ್ನು ಪುನರುಚ್ಚರಿಸುತ್ತಿದ್ದೇವೆ. ಮಾತ್ರವಲ್ಲದೆ ಸರಕಾರ ಹೊರತಾಗಿ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ, ಮಾಲ್ ಸೂಪರ್ ಮಾರುಕಟ್ಟೆಗಳಲ್ಲಿ ಹಾಗೂ ಆನ್‌ಲೈನ್ ಮಾರಾಟ ಮಾಡುವ ಪ್ರಸ್ತಾವನೆ ಕೈಬಿಡಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಬಿ.ಎಂ. ರೋಹಿಣಿ, ವಿಜಯಲಕ್ಷ್ಮಿ ಬಿ. ಶೆಟ್ಟಿ, ಸ್ವರ್ಣ ಭಟ್, ದೇವಿಕಾ, ಆದಿತ್ಯ ಕೊಲ್ಲಾಜೆ ಅವರನ್ನು ಒಳಗೊಂಡ ನಿಯೋಗ ಸರ್ಕಾರಕ್ಕೆ ಈ ಮನವಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...