Homeರಾಷ್ಟ್ರೀಯಅಷ್ಟೊಂದು 'ಸೆಂಟಿಮೆಂಟ್' ಬೇಡ: 'ಕಾಕ್ರೋಚ್ ಅಭಿಯಾನ'ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

“ವ್ಯವಸ್ಥೆಯ ಮೇಲೆ ದಾಳಿ ಮಾಡುವವರ” ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು “ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ  ಸೂರ್ಯ ಕಾಂತ್ ಅವರು ವಕೀಲರೊಬ್ಬರಿಗೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ ಸಹ, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತರಲು ದುರುದ್ದೇಶಪೂರಿತ ಅಪಪ್ರಚಾರವನ್ನು ಮುಂದುವರಿಸಲಾಗಿದೆ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ  ಸಲ್ಲಿಸಿದ್ದರು. ಅಲ್ಲದೆ, ನ್ಯಾಯಾಲಯದ ಒಳಗೆ ನಡೆಯುವ ವಾದ-ಪ್ರತಿವಾದಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿಕೊಳ್ಳಬಾರದು ಎಂದು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು. ಇದರೊಂದಿಗೆ, ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಮತ್ತೊಂದು ಪ್ರತ್ಯೇಕ ಪಿಐಎಲ್ ಕೂಡ ಸಲ್ಲಿಕೆಯಾಗಿತ್ತು.

“ಗೌರವಾನ್ವಿತ ಸಿಜೆಐ ಅವರು ಸ್ಪಷ್ಟನೆ ನೀಡಿದ ನಂತರವೂ, ವಿಷಯವನ್ನು ತಿರುಚಿ ದುರುದ್ದೇಶಪೂರಿತವಾಗಿ ಹರಡಲಾಗುತ್ತಿದೆ” ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಾಗ, ಮುಖ್ಯ ನ್ಯಾಯಮೂರ್ತಿಗಳು, “ಇದನ್ನು ಅಷ್ಟೊಂದು ಸೆಂಟಿಮೆಂಟಲ್ ಆಗಿ ತಗೋಬೇಡಿ,” ಎಂದು ಪ್ರತಿಕ್ರಿಯಿಸಿದರು. ಅಷ್ಟೇ ಅಲ್ಲದೆ, ಈ ಅರ್ಜಿಗಳ ತುರ್ತು ವಿಚಾರಣೆಯ ಮನವಿಯನ್ನು ತಿರಸ್ಕರಿಸಿದ ಸಿಜೆಐ, ಸೂಕ್ತ ಸಮಯದಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಿವಾದಕ್ಕೆ ಕಾರಣವೇನು?

ಕಳೆದ ಮೇ 15 ರಂದು ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಆಡಿದ್ದ ಕೆಲವು ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಇದೇ ವಿಷಯವನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನಲ್ಲಿ ಆನ್‌ಲೈನ್ ಅಭಿಯಾನವೊಂದು ಶುರುವಾಗಿತ್ತು.

ಹಿರಿಯ ವಕೀಲರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲರೊಬ್ಬರು, ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಆ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದ ಸಿಜೆಐ, ಈ ಹುದ್ದೆಗಾಗಿ ಹೀಗೆ “ಬೆನ್ನುಬೀಳುವುದು” ಸರಿಯೇ ಎಂದು ಪ್ರಶ್ನಿಸಿದ್ದರು.

ಆ ಸಂದರ್ಭದಲ್ಲಿ ಅವರು, “ಸಮಾಜದಲ್ಲಿ ವ್ಯವಸ್ಥೆಯ ಮೇಲೆ ದಾಳಿ ಮಾಡುವ ಕೆಲವು ಪರಾವಲಂಬಿಗಳು  ಈಗಾಗಲೇ ಇದ್ದಾರೆ, ನೀವು ಅವರೊಂದಿಗೆ ಕೈಜೋಡಿಸಲು ಬಯಸುತ್ತೀರಾ? ಸಮಾಜದಲ್ಲಿ ಯಾವುದೇ ಉದ್ಯೋಗ ಅಥವಾ ವೃತ್ತಿ ಬದುಕಿಲ್ಲದ ಕೆಲವು ಯುವಕರು ಜಿರಳೆಗಳ  ತರಹ ಇದ್ದಾರೆ. ಅಂಥವರು ಮಾಧ್ಯಮ, ಸಾಮಾಜಿಕ ಜಾಲತಾಣ, ಆರ್‌ಟಿಐ  ಕಾರ್ಯಕರ್ತರು ಮತ್ತು ಇತರೆ ಹೋರಾಟಗಾರರ ಸೋಗಿನಲ್ಲಿ ಎಲ್ಲರ ಮೇಲೆಯೂ ದಾಳಿ ಮಾಡಲು ಆರಂಭಿಸುತ್ತಾರೆ,” ಎಂದು ಹೇಳಿದ್ದರು.

ಸಿಜೆಐ ನೀಡಿದ ಸ್ಪಷ್ಟನೆ

ಈ ಹೇಳಿಕೆ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ತಾವು ದೇಶದ ಯುವಕರನ್ನು ಟೀಕಿಸಿಲ್ಲ, ಅದು ಸಂಪೂರ್ಣ ಆಧಾರರಹಿತವಾದದ್ದು ಎಂದು ಅವರು ಸ್ಪಷ್ಟಪಡಿಸಿದ್ದರು.

“ನಕಲಿ ಮತ್ತು ಬೋಗಸ್ ಪದವಿಗಳನ್ನು ಇಟ್ಟುಕೊಂಡು ವಕೀಲಿಕೆ ಸೇರಿದಂತೆ ಇತರೆ ಉದಾತ್ತ ವೃತ್ತಿಗಳಿಗೆ ನುಗ್ಗಿರುವವರನ್ನು ಮಾತ್ರ ನಾನು ನಿರ್ದಿಷ್ಟವಾಗಿ ಟೀಕಿಸಿದ್ದೇನೆ. ಇಂತಹವರೇ ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲೂ ನುಸುಳಿದ್ದಾರೆ. ಇವರು ಸಮಾಜದ ಪರಾವಲಂಬಿಗಳಿದ್ದಂತೆ. ನಾನು ದೇಶದ ಯುವ ಜನತೆಯನ್ನು ಟೀಕಿಸಿದ್ದೇನೆ ಎನ್ನುವುದು ತಪ್ಪು. ನಮ್ಮ ದೇಶದ ಯುವ ಸಂಪತ್ತಿನ ಬಗ್ಗೆ ನನಗೆ ಹೆಮ್ಮೆಯಿದೆ, ಭಾರತದ ಪ್ರತಿಯೊಬ್ಬ ಯುವಕನೂ ನನಗೆ ಸ್ಫೂರ್ತಿ,” ಎಂದು ಸಿಜೆಐ ಹೇಳಿದ್ದರು.

ಮಹಾರಾಷ್ಟ್ರ ಮೂಲದ, ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ 30 ವರ್ಷದ ಅಭಿಜೀತ್ ದಿಪ್ಕೆ ಎಂಬುವವರು ಸಿಜೆಐ ಅವರ “ಜಿರಳೆ” ಹೇಳಿಕೆಗೆ ಕೌಂಟರ್ ಆಗಿ ಯುವಕರಿಗಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ವೇದಿಕೆಯನ್ನು ಘೋಷಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಆಗಿತ್ತು.

ಆದರೆ, “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಮೇರೆಗೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಆದೇಶದಂತೆ ಗುರುವಾರ ಈ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ . ಇದರ ಬೆನ್ನಲ್ಲೇ ಅಭಿಜೀತ್ ದಿಪ್ಕೆ ಅವರು ‘ಕಾಕ್ರಾಚ್ ಈಸ್ ಬ್ಯಾಕ್’  ಎಂಬ ಹೊಸ ಖಾತೆಯನ್ನು ತೆರೆದು, ಜನರನ್ನು ಅದಕ್ಕೆ ಸೇರುವಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...