Homeರಾಷ್ಟ್ರೀಯಅಷ್ಟೊಂದು 'ಸೆಂಟಿಮೆಂಟ್' ಬೇಡ: 'ಕಾಕ್ರೋಚ್ ಅಭಿಯಾನ'ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

“ವ್ಯವಸ್ಥೆಯ ಮೇಲೆ ದಾಳಿ ಮಾಡುವವರ” ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು “ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ  ಸೂರ್ಯ ಕಾಂತ್ ಅವರು ವಕೀಲರೊಬ್ಬರಿಗೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ ಸಹ, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತರಲು ದುರುದ್ದೇಶಪೂರಿತ ಅಪಪ್ರಚಾರವನ್ನು ಮುಂದುವರಿಸಲಾಗಿದೆ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ  ಸಲ್ಲಿಸಿದ್ದರು. ಅಲ್ಲದೆ, ನ್ಯಾಯಾಲಯದ ಒಳಗೆ ನಡೆಯುವ ವಾದ-ಪ್ರತಿವಾದಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿಕೊಳ್ಳಬಾರದು ಎಂದು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು. ಇದರೊಂದಿಗೆ, ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಮತ್ತೊಂದು ಪ್ರತ್ಯೇಕ ಪಿಐಎಲ್ ಕೂಡ ಸಲ್ಲಿಕೆಯಾಗಿತ್ತು.

“ಗೌರವಾನ್ವಿತ ಸಿಜೆಐ ಅವರು ಸ್ಪಷ್ಟನೆ ನೀಡಿದ ನಂತರವೂ, ವಿಷಯವನ್ನು ತಿರುಚಿ ದುರುದ್ದೇಶಪೂರಿತವಾಗಿ ಹರಡಲಾಗುತ್ತಿದೆ” ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಾಗ, ಮುಖ್ಯ ನ್ಯಾಯಮೂರ್ತಿಗಳು, “ಇದನ್ನು ಅಷ್ಟೊಂದು ಸೆಂಟಿಮೆಂಟಲ್ ಆಗಿ ತಗೋಬೇಡಿ,” ಎಂದು ಪ್ರತಿಕ್ರಿಯಿಸಿದರು. ಅಷ್ಟೇ ಅಲ್ಲದೆ, ಈ ಅರ್ಜಿಗಳ ತುರ್ತು ವಿಚಾರಣೆಯ ಮನವಿಯನ್ನು ತಿರಸ್ಕರಿಸಿದ ಸಿಜೆಐ, ಸೂಕ್ತ ಸಮಯದಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ವಿವಾದಕ್ಕೆ ಕಾರಣವೇನು?

ಕಳೆದ ಮೇ 15 ರಂದು ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಆಡಿದ್ದ ಕೆಲವು ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಇದೇ ವಿಷಯವನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನಲ್ಲಿ ಆನ್‌ಲೈನ್ ಅಭಿಯಾನವೊಂದು ಶುರುವಾಗಿತ್ತು.

ಹಿರಿಯ ವಕೀಲರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲರೊಬ್ಬರು, ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಆ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದ ಸಿಜೆಐ, ಈ ಹುದ್ದೆಗಾಗಿ ಹೀಗೆ “ಬೆನ್ನುಬೀಳುವುದು” ಸರಿಯೇ ಎಂದು ಪ್ರಶ್ನಿಸಿದ್ದರು.

ಆ ಸಂದರ್ಭದಲ್ಲಿ ಅವರು, “ಸಮಾಜದಲ್ಲಿ ವ್ಯವಸ್ಥೆಯ ಮೇಲೆ ದಾಳಿ ಮಾಡುವ ಕೆಲವು ಪರಾವಲಂಬಿಗಳು  ಈಗಾಗಲೇ ಇದ್ದಾರೆ, ನೀವು ಅವರೊಂದಿಗೆ ಕೈಜೋಡಿಸಲು ಬಯಸುತ್ತೀರಾ? ಸಮಾಜದಲ್ಲಿ ಯಾವುದೇ ಉದ್ಯೋಗ ಅಥವಾ ವೃತ್ತಿ ಬದುಕಿಲ್ಲದ ಕೆಲವು ಯುವಕರು ಜಿರಳೆಗಳ  ತರಹ ಇದ್ದಾರೆ. ಅಂಥವರು ಮಾಧ್ಯಮ, ಸಾಮಾಜಿಕ ಜಾಲತಾಣ, ಆರ್‌ಟಿಐ  ಕಾರ್ಯಕರ್ತರು ಮತ್ತು ಇತರೆ ಹೋರಾಟಗಾರರ ಸೋಗಿನಲ್ಲಿ ಎಲ್ಲರ ಮೇಲೆಯೂ ದಾಳಿ ಮಾಡಲು ಆರಂಭಿಸುತ್ತಾರೆ,” ಎಂದು ಹೇಳಿದ್ದರು.

ಸಿಜೆಐ ನೀಡಿದ ಸ್ಪಷ್ಟನೆ

ಈ ಹೇಳಿಕೆ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ತಾವು ದೇಶದ ಯುವಕರನ್ನು ಟೀಕಿಸಿಲ್ಲ, ಅದು ಸಂಪೂರ್ಣ ಆಧಾರರಹಿತವಾದದ್ದು ಎಂದು ಅವರು ಸ್ಪಷ್ಟಪಡಿಸಿದ್ದರು.

“ನಕಲಿ ಮತ್ತು ಬೋಗಸ್ ಪದವಿಗಳನ್ನು ಇಟ್ಟುಕೊಂಡು ವಕೀಲಿಕೆ ಸೇರಿದಂತೆ ಇತರೆ ಉದಾತ್ತ ವೃತ್ತಿಗಳಿಗೆ ನುಗ್ಗಿರುವವರನ್ನು ಮಾತ್ರ ನಾನು ನಿರ್ದಿಷ್ಟವಾಗಿ ಟೀಕಿಸಿದ್ದೇನೆ. ಇಂತಹವರೇ ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲೂ ನುಸುಳಿದ್ದಾರೆ. ಇವರು ಸಮಾಜದ ಪರಾವಲಂಬಿಗಳಿದ್ದಂತೆ. ನಾನು ದೇಶದ ಯುವ ಜನತೆಯನ್ನು ಟೀಕಿಸಿದ್ದೇನೆ ಎನ್ನುವುದು ತಪ್ಪು. ನಮ್ಮ ದೇಶದ ಯುವ ಸಂಪತ್ತಿನ ಬಗ್ಗೆ ನನಗೆ ಹೆಮ್ಮೆಯಿದೆ, ಭಾರತದ ಪ್ರತಿಯೊಬ್ಬ ಯುವಕನೂ ನನಗೆ ಸ್ಫೂರ್ತಿ,” ಎಂದು ಸಿಜೆಐ ಹೇಳಿದ್ದರು.

ಮಹಾರಾಷ್ಟ್ರ ಮೂಲದ, ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ 30 ವರ್ಷದ ಅಭಿಜೀತ್ ದಿಪ್ಕೆ ಎಂಬುವವರು ಸಿಜೆಐ ಅವರ “ಜಿರಳೆ” ಹೇಳಿಕೆಗೆ ಕೌಂಟರ್ ಆಗಿ ಯುವಕರಿಗಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ವೇದಿಕೆಯನ್ನು ಘೋಷಿಸಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಆಗಿತ್ತು.

ಆದರೆ, “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಮೇರೆಗೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಆದೇಶದಂತೆ ಗುರುವಾರ ಈ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ . ಇದರ ಬೆನ್ನಲ್ಲೇ ಅಭಿಜೀತ್ ದಿಪ್ಕೆ ಅವರು ‘ಕಾಕ್ರಾಚ್ ಈಸ್ ಬ್ಯಾಕ್’  ಎಂಬ ಹೊಸ ಖಾತೆಯನ್ನು ತೆರೆದು, ಜನರನ್ನು ಅದಕ್ಕೆ ಸೇರುವಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಪರಿಷ್ಕೃತ ವೇತನ ನೀಡುವುದನ್ನು ತಡೆದು ವಿವಿಧ ಇಲಾಖೆಗಳು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...