Homeಮುಖಪುಟ'ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’': ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

- Advertisement -
- Advertisement -

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ “ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಪಕ್ಷದ ನಡೆಗೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿರುವ ಛಡ್ಡಾ, ಎಎಪಿ ವಿರುದ್ಧ ವಾಗ್ದಾಳಿ ನಡೆಸಿ, ಸಂಸತ್ತಿನಲ್ಲಿ ಮಾತನಾಡದಂತೆ ತಮ್ಮ ಸ್ವಂತ ಪಕ್ಷವೇ ತಡೆಯಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ

ತಮ್ಮ ಅಧಿಕೃತ X ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊವೊಂದರಲ್ಲಿ ಛಡ್ಡಾ, ಸಂಸತ್ತಿನಲ್ಲಿ ಮಾತನಾಡಲು ಅವಕಾಶ ಸಿಕ್ಕಾಗಲೆಲ್ಲಾ, ಸಾಮಾನ್ಯ ಜನರ ಸಮಸ್ಯೆಗಳನ್ನು ಎತ್ತಲು ಅವಕಾಶವನ್ನು ಬಳಸಿಕೊಂಡೆ ಎಂದು ಹೇಳಿದ್ದಾರೆ.

ಎಎಪಿಯನ್ನು ಗುರಿಯಾಗಿಸಿಕೊಂಡು, ಜನರ ಪರವಾಗಿ ಧ್ವನಿ ಎತ್ತುವುದು ಅಪರಾಧವೇ ಎಂದು ಪ್ರಶ್ನಿಸಿದ್ದಾರೆ. 

“ನನಗೆ ಅವಕಾಶ ಸಿಕ್ಕಾಗಲೆಲ್ಲಾ, ನಾನು ಸಂಸತ್ತಿನಲ್ಲಿ ಜನರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತುತ್ತೇನೆ, ಅದರಲ್ಲಿ ಹೆಚ್ಚಾಗಿ ಕಡೆಗಣಿಸಲ್ಪಡುವ ವಿಷಯಗಳು ಸೇರಿವೆ. ಆದರೆ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಅಪರಾಧವೇ? ನಾನು ಯಾವುದೇ ಅಪರಾಧ ಮಾಡಿದ್ದೇನೆಯೇ?”

ಸಂಸತ್ತಿನಲ್ಲಿ ಮಾತನಾಡದಂತೆ ತಡೆಯಲು ಎಎಪಿ ರಾಜ್ಯಸಭಾ ಸಚಿವಾಲಯಕ್ಕೆ ಮಾಹಿತಿ ನೀಡಿದೆ ಎಂದು ಅವರು ಆರೋಪಿಸಿದರು.

“ನನಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಎಎಪಿ ಸಂಸತ್ತಿಗೆ ತಿಳಿಸಿದೆ. ನಾನು ಅವರಿಗೆ ಹೇಳಲು ಬಯಸುತ್ತೇನೆ – ನನ್ನ ಮೌನವನ್ನು ಸೋಲಿಗೆ ತೆಗೆದುಕೊಳ್ಳಬೇಡಿ” ಎಂದು ಛಡ್ಡಾ ತಮ್ಮದೇ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ. 

“ನಾನು ಆಮ್ ಆದ್ಮಿ (ಸಾಮಾನ್ಯ ಜನರಿಗೆ) ಪ್ರಯೋಜನಕಾರಿಯಾದ ಹಲವಾರು ವಿಷಯಗಳನ್ನು ಎತ್ತಿದ್ದೇನೆ. ಅದು ಆಮ್ ಆದ್ಮಿ ಪಕ್ಷಕ್ಕೆ ಯಾವ ಹಾನಿಯನ್ನುಂಟುಮಾಡಿತು? ಯಾರಾದರೂ ನನ್ನನ್ನು ಮಾತನಾಡದಂತೆ ತಡೆಯಲು ಏಕೆ ಬಯಸುತ್ತಾರೆ?” ಎಂದು ಅವರು ಕೇಳಿದ್ದಾರೆ. 

ಗುರುವಾರ ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದಿರುವ ಎಎಪಿ, ಛಡ್ಡಾ ಅವರನ್ನು ಸದನದಲ್ಲಿ ಪಕ್ಷದ ಉಪ ನಾಯಕ ಸ್ಥಾನದಿಂದ ತೆಗೆದುಹಾಕಬೇಕು ಮತ್ತು ಅವರ ಬದಲಿಯಾಗಿ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ಪ್ರಸ್ತಾಪಿಸಬೇಕು ಎಂದು ಕೋರಿದೆ.

ಪಂಜಾಬ್‌ನ ರಾಜ್ಯಸಭಾ ಸದಸ್ಯರಾಗಿರುವ ಛಡ್ಡಾ ಅವರಿಗೆ ಎಎಪಿ ಕೋಟಾದಿಂದ ಸದನದಲ್ಲಿ ಮಾತನಾಡಲು ಸಮಯ ನೀಡಬಾರದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಒಂದು ಕಾಲದಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತರು ಮತ್ತು ದೇಶದ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದ ಛಡ್ಡಾ, ಪಕ್ಷದ ವ್ಯವಹಾರಗಳಲ್ಲಿ, ವಿಶೇಷವಾಗಿ ಪಂಜಾಬ್‌ನಲ್ಲಿ ಮತ್ತು ದೆಹಲಿಯಲ್ಲಿ ಎಎಪಿಯ ಅಧಿಕಾರಾವಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...