Homeಮುಖಪುಟರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ:...

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ: ನಳೀನ್‌ಕುಮಾರ್ ಕಟೀಲ್

- Advertisement -
- Advertisement -

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ ಎಂದು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಕಾಂಗ್ರೆಸ್ ಸೇರಿದಂತೆ ಹಲವು ಕಟೀಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

“ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ; ವೇದವ್ಯಾಸ್ ಕೈ ಎತ್ತಿಲ್ಲ, ನಳೀನ್‌ಕುಮಾರ್ ಕಟೀಲ್ ನಕ್ಕಿಲ್ಲ, ನಳೀನ್‌ಕುಮಾರ್ ನಕ್ಕರೆ ನಿಮಗೇನು ಬಂಗಾರ ಸಿಗಲ್ಲ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್… ಅದನ್ನು ನಿಲ್ಲಿಸಬೇಕಿದ್ದರೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರಬೇಕು” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಮುಂದುವರಿದು “2014 ನಂತರ ಈ ದೇಶದಲ್ಲಿ ಎಲ್ಲಿಯೂ ಬಾಂಬ್ ಬ್ಲಾಸ್ಟ್ ಆಗಿಲ್ಲ; ಅದು ನರೇಂದ್ರ ಮೋದಿಯವರ ತಾಕತ್ತು. ನಮ್ಮ ಮಕ್ಕಳು ಶಾಲೆಗೆ ಹೋದವರು ಮತ್ತೆ ಮನೆಗೆ ಬರಬೇಕಲ್ಲವೇ? ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿ ಆತಂಕದಲ್ಲಿದೆ. ಆತಂಕ ನಿವಾರಣೆಗೆ ಒಂದೇ ದಾರಿ; ಅದು ಅಮಿತ್ ಶಾ ಹಾಗೂ ನರೇಂದ್ರ ಮೋದಿ, ಕರ್ನಾಟಕದಲ್ಲಿ ಬೊಮ್ಮಾಯಿ” ಎಂದು ಕಟೀಲ್ ಹೇಳಿದ್ದಾರೆ.

“ನಾವು ನಮ್ಮ ತಾಕತ್ತು ತೋರಿಸುತ್ತಿದ್ದೇವೆ; ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದು ಬೊಮ್ಮಾಯಿ ಸರ್ಕಾರ. ಲವ್ ಜಿಹಾದ್ ಕಾಯ್ದೆಯನ್ನು ನಿಷೇಧಿಸಿ ಕಾನೂನು ತರೋದು ಕೂಡಾ ನಮ್ಮದೇ ಸರ್ಕಾರ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು, “ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳಂತೆ. ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ” ಎಂದು ಟ್ವೀಟ್ ಮಾಡಿದೆ.

ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ಬಿಜೆಪಿಗೆ ದೊಡ್ಡ ವಿಚಾರ ಯಾವುದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ; ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಸಹ್ಯ ಮನುಷ್ಯ ಜನರ ಕ್ಷೇಮ, ಅಭಿವೃದ್ಧಿ, ಬಡತನ ನಿವಾರಣೆ, ನಿರುದ್ಯೋಗ, ಆರೋಗ್ಯ ಮತ್ತು ಶಿಕ್ಷಣ ದಂತಹ ಮುಖ್ಯ ವಿಷಯಗಳ ಬಗ್ಗೆ ಮಾತಾಡೋದು ಬಿಟ್ಟು ವಿಷಯಾಂತರ ಮಾಡಿ ಧರ್ಮ,ಧರ್ಮ ಗಳ ನಡುವೆ ,ಜಾತಿ ಜಾತಿಗಳ ನಡುವೆ ಸಾಮರಸ್ಯ ಕದಡೋ ಬಗ್ಗೆ ಕರೆ ಕೊಡುತ್ತಿದ್ದಾನೆ,love ಜಿಹಾದ್ ಆಗಿದ್ದರೆ ಅಂತವರ ಮೇಲೆ ಕಾನೂನು ಕ್ರಮ ತೊಗೊಳ್ಳದನ್ನ ಬಿಟ್ಟು ನಿಮ್ಮ ಸರ್ಕಾರ ತವು ಡು ಕುಟ್ಟುತ್ತಿದಯೇ? ನೀನು ಒಬ್ಬ ಶಾಸಕ ನಾಚಿಕೆ ಆಗಬೇಕು.

  2. ತಲೆಯಲ್ಲಿ ಸಗಣಿ ತುಂಬುವ ಕೆಲಸ ಚೆನ್ನಾಗಿ ಮಾಡುತ್ತಾರೆ ಈ ಮಹಾನ್ ನಾಯಕರು.. ಜನರಿಗೆ ಇದೇ ಬೇಕಾಗಿತ್ತು..ಈಗ ಸಗಣಿ ತಿನ್ನಿರಿ ಮತ್ತು ತಮ್ಮ ಮಕ್ಕಳಿಗೂ ಸಹ ಸಗಣಿ ತಿನ್ನಿಸಬೇಕು ಭವಿಷ್ಯ ದಲ್ಲಿ ಅಂದರೆ ಇಂತಹ ಮಹಾನುಭಾವ ರಿಗೆ ತಮ್ಮ ಮತವನ್ನು ಕೊಡಿ.. ಸಗಣಿ ಸರ್ಕಾರ ಮತ್ತು ಸಗಣಿ ಭಕ್ತರಿಗೆ ಜೈ..

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...