Homeಮುಖಪುಟರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ:...

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ: ನಳೀನ್‌ಕುಮಾರ್ ಕಟೀಲ್

- Advertisement -
- Advertisement -

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ ಎಂದು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಕಾಂಗ್ರೆಸ್ ಸೇರಿದಂತೆ ಹಲವು ಕಟೀಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

“ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ; ವೇದವ್ಯಾಸ್ ಕೈ ಎತ್ತಿಲ್ಲ, ನಳೀನ್‌ಕುಮಾರ್ ಕಟೀಲ್ ನಕ್ಕಿಲ್ಲ, ನಳೀನ್‌ಕುಮಾರ್ ನಕ್ಕರೆ ನಿಮಗೇನು ಬಂಗಾರ ಸಿಗಲ್ಲ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್… ಅದನ್ನು ನಿಲ್ಲಿಸಬೇಕಿದ್ದರೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರಬೇಕು” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಮುಂದುವರಿದು “2014 ನಂತರ ಈ ದೇಶದಲ್ಲಿ ಎಲ್ಲಿಯೂ ಬಾಂಬ್ ಬ್ಲಾಸ್ಟ್ ಆಗಿಲ್ಲ; ಅದು ನರೇಂದ್ರ ಮೋದಿಯವರ ತಾಕತ್ತು. ನಮ್ಮ ಮಕ್ಕಳು ಶಾಲೆಗೆ ಹೋದವರು ಮತ್ತೆ ಮನೆಗೆ ಬರಬೇಕಲ್ಲವೇ? ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿ ಆತಂಕದಲ್ಲಿದೆ. ಆತಂಕ ನಿವಾರಣೆಗೆ ಒಂದೇ ದಾರಿ; ಅದು ಅಮಿತ್ ಶಾ ಹಾಗೂ ನರೇಂದ್ರ ಮೋದಿ, ಕರ್ನಾಟಕದಲ್ಲಿ ಬೊಮ್ಮಾಯಿ” ಎಂದು ಕಟೀಲ್ ಹೇಳಿದ್ದಾರೆ.

“ನಾವು ನಮ್ಮ ತಾಕತ್ತು ತೋರಿಸುತ್ತಿದ್ದೇವೆ; ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದು ಬೊಮ್ಮಾಯಿ ಸರ್ಕಾರ. ಲವ್ ಜಿಹಾದ್ ಕಾಯ್ದೆಯನ್ನು ನಿಷೇಧಿಸಿ ಕಾನೂನು ತರೋದು ಕೂಡಾ ನಮ್ಮದೇ ಸರ್ಕಾರ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು, “ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳಂತೆ. ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ” ಎಂದು ಟ್ವೀಟ್ ಮಾಡಿದೆ.

ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ಬಿಜೆಪಿಗೆ ದೊಡ್ಡ ವಿಚಾರ ಯಾವುದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ; ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಸಹ್ಯ ಮನುಷ್ಯ ಜನರ ಕ್ಷೇಮ, ಅಭಿವೃದ್ಧಿ, ಬಡತನ ನಿವಾರಣೆ, ನಿರುದ್ಯೋಗ, ಆರೋಗ್ಯ ಮತ್ತು ಶಿಕ್ಷಣ ದಂತಹ ಮುಖ್ಯ ವಿಷಯಗಳ ಬಗ್ಗೆ ಮಾತಾಡೋದು ಬಿಟ್ಟು ವಿಷಯಾಂತರ ಮಾಡಿ ಧರ್ಮ,ಧರ್ಮ ಗಳ ನಡುವೆ ,ಜಾತಿ ಜಾತಿಗಳ ನಡುವೆ ಸಾಮರಸ್ಯ ಕದಡೋ ಬಗ್ಗೆ ಕರೆ ಕೊಡುತ್ತಿದ್ದಾನೆ,love ಜಿಹಾದ್ ಆಗಿದ್ದರೆ ಅಂತವರ ಮೇಲೆ ಕಾನೂನು ಕ್ರಮ ತೊಗೊಳ್ಳದನ್ನ ಬಿಟ್ಟು ನಿಮ್ಮ ಸರ್ಕಾರ ತವು ಡು ಕುಟ್ಟುತ್ತಿದಯೇ? ನೀನು ಒಬ್ಬ ಶಾಸಕ ನಾಚಿಕೆ ಆಗಬೇಕು.

  2. ತಲೆಯಲ್ಲಿ ಸಗಣಿ ತುಂಬುವ ಕೆಲಸ ಚೆನ್ನಾಗಿ ಮಾಡುತ್ತಾರೆ ಈ ಮಹಾನ್ ನಾಯಕರು.. ಜನರಿಗೆ ಇದೇ ಬೇಕಾಗಿತ್ತು..ಈಗ ಸಗಣಿ ತಿನ್ನಿರಿ ಮತ್ತು ತಮ್ಮ ಮಕ್ಕಳಿಗೂ ಸಹ ಸಗಣಿ ತಿನ್ನಿಸಬೇಕು ಭವಿಷ್ಯ ದಲ್ಲಿ ಅಂದರೆ ಇಂತಹ ಮಹಾನುಭಾವ ರಿಗೆ ತಮ್ಮ ಮತವನ್ನು ಕೊಡಿ.. ಸಗಣಿ ಸರ್ಕಾರ ಮತ್ತು ಸಗಣಿ ಭಕ್ತರಿಗೆ ಜೈ..

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...