Homeಮುಖಪುಟರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ:...

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ: ನಳೀನ್‌ಕುಮಾರ್ ಕಟೀಲ್

- Advertisement -
- Advertisement -

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ ಎಂದು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಕಾಂಗ್ರೆಸ್ ಸೇರಿದಂತೆ ಹಲವು ಕಟೀಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

“ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ; ವೇದವ್ಯಾಸ್ ಕೈ ಎತ್ತಿಲ್ಲ, ನಳೀನ್‌ಕುಮಾರ್ ಕಟೀಲ್ ನಕ್ಕಿಲ್ಲ, ನಳೀನ್‌ಕುಮಾರ್ ನಕ್ಕರೆ ನಿಮಗೇನು ಬಂಗಾರ ಸಿಗಲ್ಲ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್… ಅದನ್ನು ನಿಲ್ಲಿಸಬೇಕಿದ್ದರೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರಬೇಕು” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಮುಂದುವರಿದು “2014 ನಂತರ ಈ ದೇಶದಲ್ಲಿ ಎಲ್ಲಿಯೂ ಬಾಂಬ್ ಬ್ಲಾಸ್ಟ್ ಆಗಿಲ್ಲ; ಅದು ನರೇಂದ್ರ ಮೋದಿಯವರ ತಾಕತ್ತು. ನಮ್ಮ ಮಕ್ಕಳು ಶಾಲೆಗೆ ಹೋದವರು ಮತ್ತೆ ಮನೆಗೆ ಬರಬೇಕಲ್ಲವೇ? ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿ ಆತಂಕದಲ್ಲಿದೆ. ಆತಂಕ ನಿವಾರಣೆಗೆ ಒಂದೇ ದಾರಿ; ಅದು ಅಮಿತ್ ಶಾ ಹಾಗೂ ನರೇಂದ್ರ ಮೋದಿ, ಕರ್ನಾಟಕದಲ್ಲಿ ಬೊಮ್ಮಾಯಿ” ಎಂದು ಕಟೀಲ್ ಹೇಳಿದ್ದಾರೆ.

“ನಾವು ನಮ್ಮ ತಾಕತ್ತು ತೋರಿಸುತ್ತಿದ್ದೇವೆ; ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದು ಬೊಮ್ಮಾಯಿ ಸರ್ಕಾರ. ಲವ್ ಜಿಹಾದ್ ಕಾಯ್ದೆಯನ್ನು ನಿಷೇಧಿಸಿ ಕಾನೂನು ತರೋದು ಕೂಡಾ ನಮ್ಮದೇ ಸರ್ಕಾರ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು, “ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳಂತೆ. ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ” ಎಂದು ಟ್ವೀಟ್ ಮಾಡಿದೆ.

ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ಬಿಜೆಪಿಗೆ ದೊಡ್ಡ ವಿಚಾರ ಯಾವುದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ; ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಸಹ್ಯ ಮನುಷ್ಯ ಜನರ ಕ್ಷೇಮ, ಅಭಿವೃದ್ಧಿ, ಬಡತನ ನಿವಾರಣೆ, ನಿರುದ್ಯೋಗ, ಆರೋಗ್ಯ ಮತ್ತು ಶಿಕ್ಷಣ ದಂತಹ ಮುಖ್ಯ ವಿಷಯಗಳ ಬಗ್ಗೆ ಮಾತಾಡೋದು ಬಿಟ್ಟು ವಿಷಯಾಂತರ ಮಾಡಿ ಧರ್ಮ,ಧರ್ಮ ಗಳ ನಡುವೆ ,ಜಾತಿ ಜಾತಿಗಳ ನಡುವೆ ಸಾಮರಸ್ಯ ಕದಡೋ ಬಗ್ಗೆ ಕರೆ ಕೊಡುತ್ತಿದ್ದಾನೆ,love ಜಿಹಾದ್ ಆಗಿದ್ದರೆ ಅಂತವರ ಮೇಲೆ ಕಾನೂನು ಕ್ರಮ ತೊಗೊಳ್ಳದನ್ನ ಬಿಟ್ಟು ನಿಮ್ಮ ಸರ್ಕಾರ ತವು ಡು ಕುಟ್ಟುತ್ತಿದಯೇ? ನೀನು ಒಬ್ಬ ಶಾಸಕ ನಾಚಿಕೆ ಆಗಬೇಕು.

  2. ತಲೆಯಲ್ಲಿ ಸಗಣಿ ತುಂಬುವ ಕೆಲಸ ಚೆನ್ನಾಗಿ ಮಾಡುತ್ತಾರೆ ಈ ಮಹಾನ್ ನಾಯಕರು.. ಜನರಿಗೆ ಇದೇ ಬೇಕಾಗಿತ್ತು..ಈಗ ಸಗಣಿ ತಿನ್ನಿರಿ ಮತ್ತು ತಮ್ಮ ಮಕ್ಕಳಿಗೂ ಸಹ ಸಗಣಿ ತಿನ್ನಿಸಬೇಕು ಭವಿಷ್ಯ ದಲ್ಲಿ ಅಂದರೆ ಇಂತಹ ಮಹಾನುಭಾವ ರಿಗೆ ತಮ್ಮ ಮತವನ್ನು ಕೊಡಿ.. ಸಗಣಿ ಸರ್ಕಾರ ಮತ್ತು ಸಗಣಿ ಭಕ್ತರಿಗೆ ಜೈ..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...