Homeಮುಖಪುಟರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ:...

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ: ನಳೀನ್‌ಕುಮಾರ್ ಕಟೀಲ್

- Advertisement -
- Advertisement -

ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್ ನಿಲ್ಲಿಸಲು ಬಿಜೆಪಿ ಗೆಲ್ಲಿಸಿ ಎಂದು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಕಾಂಗ್ರೆಸ್ ಸೇರಿದಂತೆ ಹಲವು ಕಟೀಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

“ರಸ್ತೆ, ಮೋರಿ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ; ವೇದವ್ಯಾಸ್ ಕೈ ಎತ್ತಿಲ್ಲ, ನಳೀನ್‌ಕುಮಾರ್ ಕಟೀಲ್ ನಕ್ಕಿಲ್ಲ, ನಳೀನ್‌ಕುಮಾರ್ ನಕ್ಕರೆ ನಿಮಗೇನು ಬಂಗಾರ ಸಿಗಲ್ಲ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆ ಲವ್ ಜಿಹಾದ್… ಅದನ್ನು ನಿಲ್ಲಿಸಬೇಕಿದ್ದರೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರಬೇಕು” ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಮುಂದುವರಿದು “2014 ನಂತರ ಈ ದೇಶದಲ್ಲಿ ಎಲ್ಲಿಯೂ ಬಾಂಬ್ ಬ್ಲಾಸ್ಟ್ ಆಗಿಲ್ಲ; ಅದು ನರೇಂದ್ರ ಮೋದಿಯವರ ತಾಕತ್ತು. ನಮ್ಮ ಮಕ್ಕಳು ಶಾಲೆಗೆ ಹೋದವರು ಮತ್ತೆ ಮನೆಗೆ ಬರಬೇಕಲ್ಲವೇ? ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿ ಆತಂಕದಲ್ಲಿದೆ. ಆತಂಕ ನಿವಾರಣೆಗೆ ಒಂದೇ ದಾರಿ; ಅದು ಅಮಿತ್ ಶಾ ಹಾಗೂ ನರೇಂದ್ರ ಮೋದಿ, ಕರ್ನಾಟಕದಲ್ಲಿ ಬೊಮ್ಮಾಯಿ” ಎಂದು ಕಟೀಲ್ ಹೇಳಿದ್ದಾರೆ.

“ನಾವು ನಮ್ಮ ತಾಕತ್ತು ತೋರಿಸುತ್ತಿದ್ದೇವೆ; ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದು ಬೊಮ್ಮಾಯಿ ಸರ್ಕಾರ. ಲವ್ ಜಿಹಾದ್ ಕಾಯ್ದೆಯನ್ನು ನಿಷೇಧಿಸಿ ಕಾನೂನು ತರೋದು ಕೂಡಾ ನಮ್ಮದೇ ಸರ್ಕಾರ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು, “ಬಿಜೆಪಿ ತನ್ನ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು ಮರೆಮಾಚಲು ಬಳಸುವುದು ಕೋಮು ಕಲಹವನ್ನು. ರಾಜ್ಯದ ಅಭಿವೃದ್ಧಿ, ಉದ್ಯೋಗ, ಶಿಕ್ಷಣದ ವಿಷಯಗಳು ಬಿಜೆಪಿಗೆ ಸಣ್ಣ ವಿಷಯಗಳಂತೆ. ಹೇಳಿಕೊಳ್ಳಲು ಅಭಿವೃದ್ಧಿಪರ ಸಾಧನೆಗಳಿಲ್ಲದ ಬಿಜೆಪಿ ಅವುಗಳ ಬಗ್ಗೆ ಮಾತೇ ಆಡಬೇಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ” ಎಂದು ಟ್ವೀಟ್ ಮಾಡಿದೆ.

ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ಬಿಜೆಪಿಗೆ ದೊಡ್ಡ ವಿಚಾರ ಯಾವುದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ; ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಸಹ್ಯ ಮನುಷ್ಯ ಜನರ ಕ್ಷೇಮ, ಅಭಿವೃದ್ಧಿ, ಬಡತನ ನಿವಾರಣೆ, ನಿರುದ್ಯೋಗ, ಆರೋಗ್ಯ ಮತ್ತು ಶಿಕ್ಷಣ ದಂತಹ ಮುಖ್ಯ ವಿಷಯಗಳ ಬಗ್ಗೆ ಮಾತಾಡೋದು ಬಿಟ್ಟು ವಿಷಯಾಂತರ ಮಾಡಿ ಧರ್ಮ,ಧರ್ಮ ಗಳ ನಡುವೆ ,ಜಾತಿ ಜಾತಿಗಳ ನಡುವೆ ಸಾಮರಸ್ಯ ಕದಡೋ ಬಗ್ಗೆ ಕರೆ ಕೊಡುತ್ತಿದ್ದಾನೆ,love ಜಿಹಾದ್ ಆಗಿದ್ದರೆ ಅಂತವರ ಮೇಲೆ ಕಾನೂನು ಕ್ರಮ ತೊಗೊಳ್ಳದನ್ನ ಬಿಟ್ಟು ನಿಮ್ಮ ಸರ್ಕಾರ ತವು ಡು ಕುಟ್ಟುತ್ತಿದಯೇ? ನೀನು ಒಬ್ಬ ಶಾಸಕ ನಾಚಿಕೆ ಆಗಬೇಕು.

  2. ತಲೆಯಲ್ಲಿ ಸಗಣಿ ತುಂಬುವ ಕೆಲಸ ಚೆನ್ನಾಗಿ ಮಾಡುತ್ತಾರೆ ಈ ಮಹಾನ್ ನಾಯಕರು.. ಜನರಿಗೆ ಇದೇ ಬೇಕಾಗಿತ್ತು..ಈಗ ಸಗಣಿ ತಿನ್ನಿರಿ ಮತ್ತು ತಮ್ಮ ಮಕ್ಕಳಿಗೂ ಸಹ ಸಗಣಿ ತಿನ್ನಿಸಬೇಕು ಭವಿಷ್ಯ ದಲ್ಲಿ ಅಂದರೆ ಇಂತಹ ಮಹಾನುಭಾವ ರಿಗೆ ತಮ್ಮ ಮತವನ್ನು ಕೊಡಿ.. ಸಗಣಿ ಸರ್ಕಾರ ಮತ್ತು ಸಗಣಿ ಭಕ್ತರಿಗೆ ಜೈ..

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...