Homeರಾಜಕೀಯ‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು “ರಾಷ್ಟ್ರಪತ್ನಿ” ಎಂದು ಕರೆದಿದ್ದಕ್ಕಾಗಿ ಗುರುವಾರ ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿವೇಶನ ಮುಂದೂಡಿದ ನಂತರ ಬಿಜೆಪಿ ಸಂಸದೆಯೊಬ್ಬರ ಜೊತೆಗೆ ಮಾತನಾಡುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿಯವರೊಂದಿಗೆ “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ಸಂಸದರು ಸೋನಿಯಾ ಗಾಂಧಿಯನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸಂಸದರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೋಕಸಭೆಯ ಅಧಿವೇಶನವನ್ನು ಮುಂದೂಡಲಾಗಿತ್ತು. ಈ ನಡುವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಸಂಸದರು ‘‘ಸೋನಿಯಾ ಗಾಂಧಿ ಕ್ಷಮೆಯಾಚಿಸಿ’’ ಎಂದು ಆಗ್ರಹಿಸಿದ್ದರು. “ಸೋನಿಯಾ ಗಾಂಧಿ ಅವರೇ ನೀವು ದ್ರೌಪದಿ ಮುರ್ಮು ಅವರಿಗೆ ಆಗಿರುವ ಅವಮಾನವನ್ನು ಅನುಮೋದಿಸಿದ್ದೀರಿ” ಎಂದು ಸ್ಮೃತಿ ಇರಾನಿ ಹೇಳಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ಪ್ರತಿಭಟನೆಯ ಕಾರಣಕ್ಕೆ ಸದನವನ್ನು ಮುಂದೂಡಿದ ನಂತರ, ಸೋನಿಯಾ ಗಾಂಧಿ ಅವರು ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ ಮಾತನಾಡಲು ನಿರ್ಧರಿಸಿ, ಇಬ್ಬರು ಕಾಂಗ್ರೆಸ್ ಸಂಸದರು ತೆರಳಿದರು. ಸದನದ ಮಹಡಿಯನ್ನು ದಾಟಿ ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ, “ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನನ್ನ ತಪ್ಪೇನು?” ಎಂದು ಕೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿ, “ಮೇಡಂ, ನಾನು ನಿಮಗೆ ಸಹಾಯ ಮಾಡಬಹುದೇ? ನಿಮ್ಮ ಹೆಸರನ್ನು ತೆಗೆದುಕೊಂಡಿದ್ದು ನಾನು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

ಸ್ಮೃತಿ ಇರಾನಿ ಅವರು ‘ಬೆರಳು’ ಮಾಡುತ್ತಾ ರಮಾದೇವಿ ಬಳಿ ಬಂದಾಗ ಸೋನಿಯಾ ಗಾಂಧಿ ಅವರು ಸಭ್ಯ ರೀತಿಯಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ಅವರು, “ನಿಮಗೆ ಎಷ್ಟು ಧೈರ್ಯ, ಈ ರೀತಿ ವರ್ತಿಸಬೇಡಿ, ಇದು ನಿಮ್ಮ ಪಕ್ಷದ ಕಚೇರಿಯಲ್ಲ…” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ಕಾಂಗ್ರೆಸ್ ನಾಯಕರೊಬ್ಬರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

“ಸೋನಿಯಾ ಗಾಂಧಿ ಅವರು ಸ್ಮೃತಿ ಇರಾನಿ ಅವರಿಗೆ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎಂದು ಎರಡು ಬಾರಿ ಹೇಳಿದ್ದಾರೆ. ಆದರೂ ಅವರು ಸೋನಿಯಾ ಗಾಂಧಿ ಅವರನ್ನು ಸುತ್ತುವರೆದಿದ್ದರು ಮತ್ತು ಅಲ್ಲಿನ ಪರಿಸ್ಥಿತಿ ಗಂಭೀರವಾಯಿತು” ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಅಪರೂಪಾ ಪೊದ್ದಾರ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಸದಸ್ಯರ ನಡುವಿನಿಂದ ಸೋನಿಯಾ ಗಾಂಧಿಯವರನ್ನು ದೂರ ಸೆಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು ಎಂದು ಅದು ಹೇಳಿದೆ.

ರಮಾ ದೇವಿ ಅವರು ತನಗೆ ತಿಳಿದಿರುವುದರಿಂದ ಅವರೊಂದಿಗೆ ಮಾತನಾಡುತ್ತಿದ್ದೆ ಎಂದು ಸೋನಿಯಾ ಗಾಂಧಿ ಅವರು ನಂತರ ಹೇಳಿದ್ದಾರೆ. ‘‘ನಾನು ಭಯ ಪಟ್ಟುಕೊಂಡಿಲ್ಲ. ನನಗೆ ರಮಾದೇವಿಯ ಪರಿಚಯವಿದೆ, ಹಾಗಾಗಿ ನಾನು ‘ಅಧೀರ್ ಕ್ಷಮೆಯಾಚಿಸಿದ್ದಾರೆ ಆದರೆ ನೀವು ಯಾಕೆ ನನ್ನ ಮೇಲೆ ದಾಳಿ ಮಾಡುತ್ತಿದ್ದೀರಿ?’ ಎಂದು ಅವರೊಂದಿಗೆ ಹೇಳಲು ಹೋದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

ಸಂಸದೆ ಮಹುವಾ ಮೊಯಿತ್ರಾ ಅವರು ಘಟನೆಯನ್ನು, “ಸೋನಿಯಾ ಗಾಂಧಿಯವರ ಮೇಲೆ ನಡೆದ ಸಂಯೋಜಿತ ದಾಳಿ” ಎಂದು ಕರೆದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಪಕ್ಷದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

“ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಅಸಭ್ಯವಾಗಿ ಮತ್ತು ನಿಂದನಾತ್ಮಕವಾಗಿ ವರ್ತಿಸಿದ್ದಾರೆ! ಆದರೆ ಸ್ಪೀಕರ್ ಇದನ್ನು ಖಂಡಿಸುತ್ತಾರೆಯೇ? ನಿಯಮಗಳು ವಿರೋಧ ಪಕ್ಷಕ್ಕೆ ಮಾತ್ರ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘಟನೆಯ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ, “ಸೋನಿಯಾ ಗಾಂಧಿ ನಮ್ಮ ಹಿರಿಯ ನಾಯಕಿ ರಮಾದೇವಿ ಬಳಿಗೆ ಬಂದಾಗ, ಅಲ್ಲಿ ಏನಾಗುತ್ತಿದೆ ಎಂದು ತಿಳಿಯಲು ನಮ್ಮ ಕೆಲವು ಸಂಸದರು ಹೋಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು, ನೀವು ನನ್ನೊಂದಿಗೆ ಮಾತನಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಮತ್ತು ಕೆಲವು ಪುರುಷ ಬಿಜೆಪಿ ಸಂಸದರು ಸಹ ಸೋನಿಯಾ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರಾದ ಗೀತಾ ಕೋರಾ ಮತ್ತು ಜ್ಯೋತ್ಸ್ನಾ ಮಹಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...