Homeರಾಜಕೀಯ‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು “ರಾಷ್ಟ್ರಪತ್ನಿ” ಎಂದು ಕರೆದಿದ್ದಕ್ಕಾಗಿ ಗುರುವಾರ ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿವೇಶನ ಮುಂದೂಡಿದ ನಂತರ ಬಿಜೆಪಿ ಸಂಸದೆಯೊಬ್ಬರ ಜೊತೆಗೆ ಮಾತನಾಡುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿಯವರೊಂದಿಗೆ “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ಸಂಸದರು ಸೋನಿಯಾ ಗಾಂಧಿಯನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸಂಸದರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೋಕಸಭೆಯ ಅಧಿವೇಶನವನ್ನು ಮುಂದೂಡಲಾಗಿತ್ತು. ಈ ನಡುವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಸಂಸದರು ‘‘ಸೋನಿಯಾ ಗಾಂಧಿ ಕ್ಷಮೆಯಾಚಿಸಿ’’ ಎಂದು ಆಗ್ರಹಿಸಿದ್ದರು. “ಸೋನಿಯಾ ಗಾಂಧಿ ಅವರೇ ನೀವು ದ್ರೌಪದಿ ಮುರ್ಮು ಅವರಿಗೆ ಆಗಿರುವ ಅವಮಾನವನ್ನು ಅನುಮೋದಿಸಿದ್ದೀರಿ” ಎಂದು ಸ್ಮೃತಿ ಇರಾನಿ ಹೇಳಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ಪ್ರತಿಭಟನೆಯ ಕಾರಣಕ್ಕೆ ಸದನವನ್ನು ಮುಂದೂಡಿದ ನಂತರ, ಸೋನಿಯಾ ಗಾಂಧಿ ಅವರು ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ ಮಾತನಾಡಲು ನಿರ್ಧರಿಸಿ, ಇಬ್ಬರು ಕಾಂಗ್ರೆಸ್ ಸಂಸದರು ತೆರಳಿದರು. ಸದನದ ಮಹಡಿಯನ್ನು ದಾಟಿ ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ, “ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನನ್ನ ತಪ್ಪೇನು?” ಎಂದು ಕೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿ, “ಮೇಡಂ, ನಾನು ನಿಮಗೆ ಸಹಾಯ ಮಾಡಬಹುದೇ? ನಿಮ್ಮ ಹೆಸರನ್ನು ತೆಗೆದುಕೊಂಡಿದ್ದು ನಾನು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

ಸ್ಮೃತಿ ಇರಾನಿ ಅವರು ‘ಬೆರಳು’ ಮಾಡುತ್ತಾ ರಮಾದೇವಿ ಬಳಿ ಬಂದಾಗ ಸೋನಿಯಾ ಗಾಂಧಿ ಅವರು ಸಭ್ಯ ರೀತಿಯಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ಅವರು, “ನಿಮಗೆ ಎಷ್ಟು ಧೈರ್ಯ, ಈ ರೀತಿ ವರ್ತಿಸಬೇಡಿ, ಇದು ನಿಮ್ಮ ಪಕ್ಷದ ಕಚೇರಿಯಲ್ಲ…” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ಕಾಂಗ್ರೆಸ್ ನಾಯಕರೊಬ್ಬರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

“ಸೋನಿಯಾ ಗಾಂಧಿ ಅವರು ಸ್ಮೃತಿ ಇರಾನಿ ಅವರಿಗೆ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎಂದು ಎರಡು ಬಾರಿ ಹೇಳಿದ್ದಾರೆ. ಆದರೂ ಅವರು ಸೋನಿಯಾ ಗಾಂಧಿ ಅವರನ್ನು ಸುತ್ತುವರೆದಿದ್ದರು ಮತ್ತು ಅಲ್ಲಿನ ಪರಿಸ್ಥಿತಿ ಗಂಭೀರವಾಯಿತು” ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಅಪರೂಪಾ ಪೊದ್ದಾರ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಸದಸ್ಯರ ನಡುವಿನಿಂದ ಸೋನಿಯಾ ಗಾಂಧಿಯವರನ್ನು ದೂರ ಸೆಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು ಎಂದು ಅದು ಹೇಳಿದೆ.

ರಮಾ ದೇವಿ ಅವರು ತನಗೆ ತಿಳಿದಿರುವುದರಿಂದ ಅವರೊಂದಿಗೆ ಮಾತನಾಡುತ್ತಿದ್ದೆ ಎಂದು ಸೋನಿಯಾ ಗಾಂಧಿ ಅವರು ನಂತರ ಹೇಳಿದ್ದಾರೆ. ‘‘ನಾನು ಭಯ ಪಟ್ಟುಕೊಂಡಿಲ್ಲ. ನನಗೆ ರಮಾದೇವಿಯ ಪರಿಚಯವಿದೆ, ಹಾಗಾಗಿ ನಾನು ‘ಅಧೀರ್ ಕ್ಷಮೆಯಾಚಿಸಿದ್ದಾರೆ ಆದರೆ ನೀವು ಯಾಕೆ ನನ್ನ ಮೇಲೆ ದಾಳಿ ಮಾಡುತ್ತಿದ್ದೀರಿ?’ ಎಂದು ಅವರೊಂದಿಗೆ ಹೇಳಲು ಹೋದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

ಸಂಸದೆ ಮಹುವಾ ಮೊಯಿತ್ರಾ ಅವರು ಘಟನೆಯನ್ನು, “ಸೋನಿಯಾ ಗಾಂಧಿಯವರ ಮೇಲೆ ನಡೆದ ಸಂಯೋಜಿತ ದಾಳಿ” ಎಂದು ಕರೆದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಪಕ್ಷದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

“ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಅಸಭ್ಯವಾಗಿ ಮತ್ತು ನಿಂದನಾತ್ಮಕವಾಗಿ ವರ್ತಿಸಿದ್ದಾರೆ! ಆದರೆ ಸ್ಪೀಕರ್ ಇದನ್ನು ಖಂಡಿಸುತ್ತಾರೆಯೇ? ನಿಯಮಗಳು ವಿರೋಧ ಪಕ್ಷಕ್ಕೆ ಮಾತ್ರ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘಟನೆಯ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ, “ಸೋನಿಯಾ ಗಾಂಧಿ ನಮ್ಮ ಹಿರಿಯ ನಾಯಕಿ ರಮಾದೇವಿ ಬಳಿಗೆ ಬಂದಾಗ, ಅಲ್ಲಿ ಏನಾಗುತ್ತಿದೆ ಎಂದು ತಿಳಿಯಲು ನಮ್ಮ ಕೆಲವು ಸಂಸದರು ಹೋಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು, ನೀವು ನನ್ನೊಂದಿಗೆ ಮಾತನಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಮತ್ತು ಕೆಲವು ಪುರುಷ ಬಿಜೆಪಿ ಸಂಸದರು ಸಹ ಸೋನಿಯಾ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರಾದ ಗೀತಾ ಕೋರಾ ಮತ್ತು ಜ್ಯೋತ್ಸ್ನಾ ಮಹಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...