Homeರಾಜಕೀಯ‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು “ರಾಷ್ಟ್ರಪತ್ನಿ” ಎಂದು ಕರೆದಿದ್ದಕ್ಕಾಗಿ ಗುರುವಾರ ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿವೇಶನ ಮುಂದೂಡಿದ ನಂತರ ಬಿಜೆಪಿ ಸಂಸದೆಯೊಬ್ಬರ ಜೊತೆಗೆ ಮಾತನಾಡುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿಯವರೊಂದಿಗೆ “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ಸಂಸದರು ಸೋನಿಯಾ ಗಾಂಧಿಯನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸಂಸದರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೋಕಸಭೆಯ ಅಧಿವೇಶನವನ್ನು ಮುಂದೂಡಲಾಗಿತ್ತು. ಈ ನಡುವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಸಂಸದರು ‘‘ಸೋನಿಯಾ ಗಾಂಧಿ ಕ್ಷಮೆಯಾಚಿಸಿ’’ ಎಂದು ಆಗ್ರಹಿಸಿದ್ದರು. “ಸೋನಿಯಾ ಗಾಂಧಿ ಅವರೇ ನೀವು ದ್ರೌಪದಿ ಮುರ್ಮು ಅವರಿಗೆ ಆಗಿರುವ ಅವಮಾನವನ್ನು ಅನುಮೋದಿಸಿದ್ದೀರಿ” ಎಂದು ಸ್ಮೃತಿ ಇರಾನಿ ಹೇಳಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ಪ್ರತಿಭಟನೆಯ ಕಾರಣಕ್ಕೆ ಸದನವನ್ನು ಮುಂದೂಡಿದ ನಂತರ, ಸೋನಿಯಾ ಗಾಂಧಿ ಅವರು ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ ಮಾತನಾಡಲು ನಿರ್ಧರಿಸಿ, ಇಬ್ಬರು ಕಾಂಗ್ರೆಸ್ ಸಂಸದರು ತೆರಳಿದರು. ಸದನದ ಮಹಡಿಯನ್ನು ದಾಟಿ ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ, “ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನನ್ನ ತಪ್ಪೇನು?” ಎಂದು ಕೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿ, “ಮೇಡಂ, ನಾನು ನಿಮಗೆ ಸಹಾಯ ಮಾಡಬಹುದೇ? ನಿಮ್ಮ ಹೆಸರನ್ನು ತೆಗೆದುಕೊಂಡಿದ್ದು ನಾನು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

ಸ್ಮೃತಿ ಇರಾನಿ ಅವರು ‘ಬೆರಳು’ ಮಾಡುತ್ತಾ ರಮಾದೇವಿ ಬಳಿ ಬಂದಾಗ ಸೋನಿಯಾ ಗಾಂಧಿ ಅವರು ಸಭ್ಯ ರೀತಿಯಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ಅವರು, “ನಿಮಗೆ ಎಷ್ಟು ಧೈರ್ಯ, ಈ ರೀತಿ ವರ್ತಿಸಬೇಡಿ, ಇದು ನಿಮ್ಮ ಪಕ್ಷದ ಕಚೇರಿಯಲ್ಲ…” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ಕಾಂಗ್ರೆಸ್ ನಾಯಕರೊಬ್ಬರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

“ಸೋನಿಯಾ ಗಾಂಧಿ ಅವರು ಸ್ಮೃತಿ ಇರಾನಿ ಅವರಿಗೆ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎಂದು ಎರಡು ಬಾರಿ ಹೇಳಿದ್ದಾರೆ. ಆದರೂ ಅವರು ಸೋನಿಯಾ ಗಾಂಧಿ ಅವರನ್ನು ಸುತ್ತುವರೆದಿದ್ದರು ಮತ್ತು ಅಲ್ಲಿನ ಪರಿಸ್ಥಿತಿ ಗಂಭೀರವಾಯಿತು” ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಅಪರೂಪಾ ಪೊದ್ದಾರ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಸದಸ್ಯರ ನಡುವಿನಿಂದ ಸೋನಿಯಾ ಗಾಂಧಿಯವರನ್ನು ದೂರ ಸೆಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು ಎಂದು ಅದು ಹೇಳಿದೆ.

ರಮಾ ದೇವಿ ಅವರು ತನಗೆ ತಿಳಿದಿರುವುದರಿಂದ ಅವರೊಂದಿಗೆ ಮಾತನಾಡುತ್ತಿದ್ದೆ ಎಂದು ಸೋನಿಯಾ ಗಾಂಧಿ ಅವರು ನಂತರ ಹೇಳಿದ್ದಾರೆ. ‘‘ನಾನು ಭಯ ಪಟ್ಟುಕೊಂಡಿಲ್ಲ. ನನಗೆ ರಮಾದೇವಿಯ ಪರಿಚಯವಿದೆ, ಹಾಗಾಗಿ ನಾನು ‘ಅಧೀರ್ ಕ್ಷಮೆಯಾಚಿಸಿದ್ದಾರೆ ಆದರೆ ನೀವು ಯಾಕೆ ನನ್ನ ಮೇಲೆ ದಾಳಿ ಮಾಡುತ್ತಿದ್ದೀರಿ?’ ಎಂದು ಅವರೊಂದಿಗೆ ಹೇಳಲು ಹೋದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

ಸಂಸದೆ ಮಹುವಾ ಮೊಯಿತ್ರಾ ಅವರು ಘಟನೆಯನ್ನು, “ಸೋನಿಯಾ ಗಾಂಧಿಯವರ ಮೇಲೆ ನಡೆದ ಸಂಯೋಜಿತ ದಾಳಿ” ಎಂದು ಕರೆದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಪಕ್ಷದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

“ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಅಸಭ್ಯವಾಗಿ ಮತ್ತು ನಿಂದನಾತ್ಮಕವಾಗಿ ವರ್ತಿಸಿದ್ದಾರೆ! ಆದರೆ ಸ್ಪೀಕರ್ ಇದನ್ನು ಖಂಡಿಸುತ್ತಾರೆಯೇ? ನಿಯಮಗಳು ವಿರೋಧ ಪಕ್ಷಕ್ಕೆ ಮಾತ್ರ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘಟನೆಯ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ, “ಸೋನಿಯಾ ಗಾಂಧಿ ನಮ್ಮ ಹಿರಿಯ ನಾಯಕಿ ರಮಾದೇವಿ ಬಳಿಗೆ ಬಂದಾಗ, ಅಲ್ಲಿ ಏನಾಗುತ್ತಿದೆ ಎಂದು ತಿಳಿಯಲು ನಮ್ಮ ಕೆಲವು ಸಂಸದರು ಹೋಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು, ನೀವು ನನ್ನೊಂದಿಗೆ ಮಾತನಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಮತ್ತು ಕೆಲವು ಪುರುಷ ಬಿಜೆಪಿ ಸಂಸದರು ಸಹ ಸೋನಿಯಾ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರಾದ ಗೀತಾ ಕೋರಾ ಮತ್ತು ಜ್ಯೋತ್ಸ್ನಾ ಮಹಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...