Homeರಾಜಕೀಯ‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

‘ನನ್ನೊಂದಿಗೆ ನೀವು ಮಾತನಾಡಬೇಡಿ’: ಮಾತಿನ ನಡುವೆ ತೊಂದರೆ ನೀಡಿದ ಸ್ಮೃತಿ ಇರಾನಿಗೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು “ರಾಷ್ಟ್ರಪತ್ನಿ” ಎಂದು ಕರೆದಿದ್ದಕ್ಕಾಗಿ ಗುರುವಾರ ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿವೇಶನ ಮುಂದೂಡಿದ ನಂತರ ಬಿಜೆಪಿ ಸಂಸದೆಯೊಬ್ಬರ ಜೊತೆಗೆ ಮಾತನಾಡುತ್ತಿದ್ದಾಗ ಮಧ್ಯೆ ಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿಯವರೊಂದಿಗೆ “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಸಚಿವೆ ಸ್ಮೃತಿ ಇರಾನಿ ಮತ್ತು ಇತರ ಬಿಜೆಪಿ ಸಂಸದರು ಸೋನಿಯಾ ಗಾಂಧಿಯನ್ನು ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸಂಸದರು ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೋಕಸಭೆಯ ಅಧಿವೇಶನವನ್ನು ಮುಂದೂಡಲಾಗಿತ್ತು. ಈ ನಡುವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಸಂಸದರು ‘‘ಸೋನಿಯಾ ಗಾಂಧಿ ಕ್ಷಮೆಯಾಚಿಸಿ’’ ಎಂದು ಆಗ್ರಹಿಸಿದ್ದರು. “ಸೋನಿಯಾ ಗಾಂಧಿ ಅವರೇ ನೀವು ದ್ರೌಪದಿ ಮುರ್ಮು ಅವರಿಗೆ ಆಗಿರುವ ಅವಮಾನವನ್ನು ಅನುಮೋದಿಸಿದ್ದೀರಿ” ಎಂದು ಸ್ಮೃತಿ ಇರಾನಿ ಹೇಳಿದ್ದರು.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ED ನೋಟಿಸ್

ಪ್ರತಿಭಟನೆಯ ಕಾರಣಕ್ಕೆ ಸದನವನ್ನು ಮುಂದೂಡಿದ ನಂತರ, ಸೋನಿಯಾ ಗಾಂಧಿ ಅವರು ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ ಮಾತನಾಡಲು ನಿರ್ಧರಿಸಿ, ಇಬ್ಬರು ಕಾಂಗ್ರೆಸ್ ಸಂಸದರು ತೆರಳಿದರು. ಸದನದ ಮಹಡಿಯನ್ನು ದಾಟಿ ಬಿಜೆಪಿ ಸಂಸದೆ ರಮಾ ದೇವಿ ಅವರೊಂದಿಗೆ, “ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನನ್ನ ತಪ್ಪೇನು?” ಎಂದು ಕೇಳಿದ್ದಾರೆ.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವೆ ಸ್ಮೃತಿ ಇರಾನಿ, “ಮೇಡಂ, ನಾನು ನಿಮಗೆ ಸಹಾಯ ಮಾಡಬಹುದೇ? ನಿಮ್ಮ ಹೆಸರನ್ನು ತೆಗೆದುಕೊಂಡಿದ್ದು ನಾನು” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಗಾಂಧಿ, “ನನ್ನೊಂದಿಗೆ ನೀವು ಮಾತನಾಡಬೇಡಿ” ಎಂದು ತಿರುಗೇಟು ನೀಡಿದ್ದಾರೆ.

ಸ್ಮೃತಿ ಇರಾನಿ ಅವರು ‘ಬೆರಳು’ ಮಾಡುತ್ತಾ ರಮಾದೇವಿ ಬಳಿ ಬಂದಾಗ ಸೋನಿಯಾ ಗಾಂಧಿ ಅವರು ಸಭ್ಯ ರೀತಿಯಲ್ಲಿ ಸಂಭಾಷಣೆ ನಡೆಸುತ್ತಿದ್ದರು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ಅವರು, “ನಿಮಗೆ ಎಷ್ಟು ಧೈರ್ಯ, ಈ ರೀತಿ ವರ್ತಿಸಬೇಡಿ, ಇದು ನಿಮ್ಮ ಪಕ್ಷದ ಕಚೇರಿಯಲ್ಲ…” ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ಕಾಂಗ್ರೆಸ್ ನಾಯಕರೊಬ್ಬರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

“ಸೋನಿಯಾ ಗಾಂಧಿ ಅವರು ಸ್ಮೃತಿ ಇರಾನಿ ಅವರಿಗೆ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎಂದು ಎರಡು ಬಾರಿ ಹೇಳಿದ್ದಾರೆ. ಆದರೂ ಅವರು ಸೋನಿಯಾ ಗಾಂಧಿ ಅವರನ್ನು ಸುತ್ತುವರೆದಿದ್ದರು ಮತ್ತು ಅಲ್ಲಿನ ಪರಿಸ್ಥಿತಿ ಗಂಭೀರವಾಯಿತು” ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದರಾದ ಮಹುವಾ ಮೊಯಿತ್ರಾ ಮತ್ತು ಅಪರೂಪಾ ಪೊದ್ದಾರ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಅವರು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಸದಸ್ಯರ ನಡುವಿನಿಂದ ಸೋನಿಯಾ ಗಾಂಧಿಯವರನ್ನು ದೂರ ಸೆಳೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದರ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು ಎಂದು ಅದು ಹೇಳಿದೆ.

ರಮಾ ದೇವಿ ಅವರು ತನಗೆ ತಿಳಿದಿರುವುದರಿಂದ ಅವರೊಂದಿಗೆ ಮಾತನಾಡುತ್ತಿದ್ದೆ ಎಂದು ಸೋನಿಯಾ ಗಾಂಧಿ ಅವರು ನಂತರ ಹೇಳಿದ್ದಾರೆ. ‘‘ನಾನು ಭಯ ಪಟ್ಟುಕೊಂಡಿಲ್ಲ. ನನಗೆ ರಮಾದೇವಿಯ ಪರಿಚಯವಿದೆ, ಹಾಗಾಗಿ ನಾನು ‘ಅಧೀರ್ ಕ್ಷಮೆಯಾಚಿಸಿದ್ದಾರೆ ಆದರೆ ನೀವು ಯಾಕೆ ನನ್ನ ಮೇಲೆ ದಾಳಿ ಮಾಡುತ್ತಿದ್ದೀರಿ?’ ಎಂದು ಅವರೊಂದಿಗೆ ಹೇಳಲು ಹೋದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಇಡಿಯಿಂದ ಸೋನಿಯಾಗಾಂಧಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಬಿದ್ದ ಡಿಕೆಶಿ, ಶಾಂತಿನಗರದಲ್ಲಿ ಕಾರ್‌ಗೆ ಬೆಂಕಿ

ಸಂಸದೆ ಮಹುವಾ ಮೊಯಿತ್ರಾ ಅವರು ಘಟನೆಯನ್ನು, “ಸೋನಿಯಾ ಗಾಂಧಿಯವರ ಮೇಲೆ ನಡೆದ ಸಂಯೋಜಿತ ದಾಳಿ” ಎಂದು ಕರೆದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಪಕ್ಷದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

“ಒಕ್ಕೂಟ ಸರ್ಕಾರದ ಸಚಿವೆ ಸ್ಮೃತಿ ಇರಾನಿ ಇಂದು ಲೋಕಸಭೆಯಲ್ಲಿ ಅಸಭ್ಯವಾಗಿ ಮತ್ತು ನಿಂದನಾತ್ಮಕವಾಗಿ ವರ್ತಿಸಿದ್ದಾರೆ! ಆದರೆ ಸ್ಪೀಕರ್ ಇದನ್ನು ಖಂಡಿಸುತ್ತಾರೆಯೇ? ನಿಯಮಗಳು ವಿರೋಧ ಪಕ್ಷಕ್ಕೆ ಮಾತ್ರ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘಟನೆಯ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ, “ಸೋನಿಯಾ ಗಾಂಧಿ ನಮ್ಮ ಹಿರಿಯ ನಾಯಕಿ ರಮಾದೇವಿ ಬಳಿಗೆ ಬಂದಾಗ, ಅಲ್ಲಿ ಏನಾಗುತ್ತಿದೆ ಎಂದು ತಿಳಿಯಲು ನಮ್ಮ ಕೆಲವು ಸಂಸದರು ಹೋಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು, ನೀವು ನನ್ನೊಂದಿಗೆ ಮಾತನಾಡಬೇಡಿ ಎಂದು ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಸಚಿವೆ ಸ್ಮೃತಿ ಇರಾನಿ ಮತ್ತು ಕೆಲವು ಪುರುಷ ಬಿಜೆಪಿ ಸಂಸದರು ಸಹ ಸೋನಿಯಾ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದರಾದ ಗೀತಾ ಕೋರಾ ಮತ್ತು ಜ್ಯೋತ್ಸ್ನಾ ಮಹಂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....