Homeರಾಷ್ಟ್ರೀಯ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

- Advertisement -
- Advertisement -

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಎಫ್‌ಐಆರ್‌ನಲ್ಲಿ ದಾಖಲಾಗಿರುವಂತೆ ಹನುಮಾನ್ ಭಕ್ತ್ ಎಂಬ ಹೆಸರಿನ @balajikijaiin ಎಂಬ ಟ್ವಿಟರ್‌ ಹ್ಯಾಂಡಲ್ ಹೊಂದಿರುವ ಬಳಕೆದಾರ ಟ್ವಿಟ್ಟರ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿರುವ ಅನಾಮಧೇಯ ‘ಹನುಮಾನ್ ಭಕ್ತ್‌‌’ ಟ್ವೀಟ್‌ಗೆ ಹ್ಯಾಂಡಲ್ಆ ಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೈರ್ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ(ಕನ್ನಡ ಅನುವಾದ: ಯಾರಿಗೂ ಹೇಳಬೇಡಿ)’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಇವೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್ @zoo_bear ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಅಷ್ಟಕ್ಕೂ ಈ ಸಿನಿಮಾದ ದೃಶ್ಯವನ್ನು ಮೀಮ್ ಆಗಿ ಬಳಸಿಕೊಂಡವರಲ್ಲಿ ಜುಬೇರ್ ಮೊದಲಿಗರೇನಲ್ಲ. 2018 ರಲ್ಲಿ, ‘ಅವೆಂಜರ್ಸ್: ಇನ್ಫಿನಿಟಿ ವಾರ್’ ಬಗ್ಗೆ ಅಭಿಮಾನಿಗಳು ರಚಿಸಿದ ಮೀಮ್‌ಗಳ ಲೇಖನಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಅದೇ ದೃಶ್ಯವನ್ನು ತನ್ನ ಸುದ್ದಿಯಲ್ಲಿ ಚಿತ್ರವಾಗಿ ಬಳಸಿಕೊಂಡಿದೆ.

ಕಳೆದ ಕೆಲವು ವರ್ಷಗಳಲ್ಲಿ ಈ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಲವಾರು ಇತರ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ಆದರೆ ಅವರ ಯಾವುದೇ ಟ್ವೀಟ್‌ ಅನ್ನು ಜುಬೈರ್ ಅವರ ಪ್ರಕರಣದಂತೆ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ ಎಂದು ಪರಿಗಣಿಸಲಾಗಿಲ್ಲ.

ಜುಬೈರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನಿಂದ ದೂರನ್ನು ಪಡೆದ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಪೋಸ್ಟ್‌ನಲ್ಲಿ ನಿರ್ದಿಷ್ಟ ಧರ್ಮದ ದೇವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸುವ ಉದ್ದೇಶದಿಂದ ಮೊಹಮ್ಮದ್ ಜುಬೇರ್ ಪ್ರಶ್ನಾರ್ಹ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

@balajikijaiin ಅವರು ದೆಹಲಿ ಪೊಲೀಸರನ್ನು ಉದ್ದೇಶಿಸಿ ಮಾಡಿದ ಟ್ವೀಟ್ ಅನ್ನು ಜೂನ್ 19 ರಂದು ಪೋಸ್ಟ್ ಮಾಡಲಾಗಿದೆ. ಹ್ಯಾಂಡಲ್ ಅನ್ನು ಅಕ್ಟೋಬರ್ 2021 ರಲ್ಲಿ ರಚಿಸಲಾಗಿದೆ ಮತ್ತು ಸೋಮವಾರ ಸಂಜೆಯವರೆಗೆ ಒಂದೇ ಒಂದು ಸಂದೇಶವನ್ನು ಪೋಸ್ಟ್ ಮಾಡಲಾಗಿದ್ದು, ಇದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...