Homeರಾಷ್ಟ್ರೀಯ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

- Advertisement -
- Advertisement -

ಸೋಮವಾರ ಸಂಜೆಯವರೆಗೆ ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಅಂತರಾಷ್ಟ್ರೀಯ ಖ್ಯಾತಿಯ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಸೋಮವಾರ ಸಂಜೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಎಫ್‌ಐಆರ್‌ನಲ್ಲಿ ದಾಖಲಾಗಿರುವಂತೆ ಹನುಮಾನ್ ಭಕ್ತ್ ಎಂಬ ಹೆಸರಿನ @balajikijaiin ಎಂಬ ಟ್ವಿಟರ್‌ ಹ್ಯಾಂಡಲ್ ಹೊಂದಿರುವ ಬಳಕೆದಾರ ಟ್ವಿಟ್ಟರ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಹಮ್ಮದ್ ಜುಬೇರ್‌ ಅವರು 2018 ರಲ್ಲಿ ಮಾಡಿದ್ದ ಪೋಸ್ಟ್ ಒಂದನ್ನು ಉಲ್ಲೇಖಿಸಿರುವ ಅನಾಮಧೇಯ ‘ಹನುಮಾನ್ ಭಕ್ತ್‌‌’ ಟ್ವೀಟ್‌ಗೆ ಹ್ಯಾಂಡಲ್ಆ ಕ್ಷೇಪಣೆ ವ್ಯಕ್ತಪಡಿಸಿತ್ತು. ಆ ಪೋಸ್ಟ್‌ನ ಚಿತ್ರದಲ್ಲಿ, ‘ಹನಿಮೂನ್ ಹೋಟೆಲ್’ ಎಂಬ ಬೋರ್ಡಿಗೆ ಬಣ್ಣ ಬಳಿದು, ‘ಹನುಮಾನ್ ಹೋಟೆಲ್’ ಎಂದು ಹಿಂದಿಯಲ್ಲಿ ಬರೆದಂತೆ ತೋರಿಸಲಾಗಿದೆ.

ಇದನ್ನೂ ಓದಿ: ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಜುಬೈರ್ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ(ಕನ್ನಡ ಅನುವಾದ: ಯಾರಿಗೂ ಹೇಳಬೇಡಿ)’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಇವೆ.

ಜುಬೇರ್‌ ವಿರುದ್ಧ ದೆಹಲಿ ಪೊಲೀಸರು, “ಪೋಸ್ಟ್‌ನಲ್ಲಿನ ಪದಗಳು ಮತ್ತು ಚಿತ್ರವನ್ನು ಮೊಹಮ್ಮದ್ ಜುಬೇರ್ @zoo_bear ಅವರು ನಿರ್ದಿಷ್ಟ ಧಾರ್ಮಿಕ ಸಮುದಾಯದ ವಿರುದ್ಧ ಬಳಸಿದ್ದಾರೆ. ಇದು ತೀವ್ರ ಪ್ರಚೋದನಕಾರಿ ಮತ್ತು ಜನರ ನಡುವೆ ದ್ವೇಷದ ಭಾವನೆಗಳನ್ನು ಹುಟ್ಟುಹಾಕಲು ಸಾಕಾಗುತ್ತದೆ. ಇದು ಸಮಾಜದಲ್ಲಿ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಹಾನಿಕಾರಕವಾಗಿದೆ” ಎಂದು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಅಷ್ಟಕ್ಕೂ ಈ ಸಿನಿಮಾದ ದೃಶ್ಯವನ್ನು ಮೀಮ್ ಆಗಿ ಬಳಸಿಕೊಂಡವರಲ್ಲಿ ಜುಬೇರ್ ಮೊದಲಿಗರೇನಲ್ಲ. 2018 ರಲ್ಲಿ, ‘ಅವೆಂಜರ್ಸ್: ಇನ್ಫಿನಿಟಿ ವಾರ್’ ಬಗ್ಗೆ ಅಭಿಮಾನಿಗಳು ರಚಿಸಿದ ಮೀಮ್‌ಗಳ ಲೇಖನಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಅದೇ ದೃಶ್ಯವನ್ನು ತನ್ನ ಸುದ್ದಿಯಲ್ಲಿ ಚಿತ್ರವಾಗಿ ಬಳಸಿಕೊಂಡಿದೆ.

ಕಳೆದ ಕೆಲವು ವರ್ಷಗಳಲ್ಲಿ ಈ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಲವಾರು ಇತರ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ಆದರೆ ಅವರ ಯಾವುದೇ ಟ್ವೀಟ್‌ ಅನ್ನು ಜುಬೈರ್ ಅವರ ಪ್ರಕರಣದಂತೆ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ ಎಂದು ಪರಿಗಣಿಸಲಾಗಿಲ್ಲ.

ಜುಬೈರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನಿಂದ ದೂರನ್ನು ಪಡೆದ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಪೋಸ್ಟ್‌ನಲ್ಲಿ ನಿರ್ದಿಷ್ಟ ಧರ್ಮದ ದೇವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸುವ ಉದ್ದೇಶದಿಂದ ಮೊಹಮ್ಮದ್ ಜುಬೇರ್ ಪ್ರಶ್ನಾರ್ಹ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

@balajikijaiin ಅವರು ದೆಹಲಿ ಪೊಲೀಸರನ್ನು ಉದ್ದೇಶಿಸಿ ಮಾಡಿದ ಟ್ವೀಟ್ ಅನ್ನು ಜೂನ್ 19 ರಂದು ಪೋಸ್ಟ್ ಮಾಡಲಾಗಿದೆ. ಹ್ಯಾಂಡಲ್ ಅನ್ನು ಅಕ್ಟೋಬರ್ 2021 ರಲ್ಲಿ ರಚಿಸಲಾಗಿದೆ ಮತ್ತು ಸೋಮವಾರ ಸಂಜೆಯವರೆಗೆ ಒಂದೇ ಒಂದು ಸಂದೇಶವನ್ನು ಪೋಸ್ಟ್ ಮಾಡಲಾಗಿದ್ದು, ಇದು ಜುಬೈರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರನ್ನು ಕೇಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...