Homeಮುಖಪುಟಅದೊಂದು ದೊಡ್ಡ ವಿಷಯವಲ್ಲ: ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಘಟನೆಗೆ ಶಿಕ್ಷಣ ಸಚಿವ ನಾಗೇಶ್...

ಅದೊಂದು ದೊಡ್ಡ ವಿಷಯವಲ್ಲ: ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಘಟನೆಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಘಟನೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅದೊಂದು ದೊಡ್ಡ ವಿಷಯವಲ್ಲ ಎಂದಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಾಧ್ಯಾಪಕರನ್ನು ಅಮಾನತ್ತು ಮಾಡಲಾಗಿತ್ತು.

ಈ ಪ್ರಕರಣದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಸಿ ನಾಗೇಶ್, “ಈ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಾಧ್ಯಾಪಕ ಆ ಹೆಸರನ್ನು ಬಳಸಬಾರದಿತ್ತು. ಆದರೆ ಇದು ಅಷ್ಟು ಗಂಭೀರವಾದ ವಿಷಯ ಎಂದು ನನಗನಿಸುವುದಿಲ್ಲ. ಏಕೆಂದರೆ ನಾವು ಹಲವು ವಿದ್ಯಾರ್ಥಿಳಿಗೆ ಹಲವಾರು ಬಾರಿ ರಾವಣ, ಶಕುನಿ ಎಂದು ಕರೆಯುತ್ತೇವೆ. ಆದರೆ ಅದು ಸಮಸ್ಯೆಯಾಗುವುದಿಲ್ಲ. ಆದರೆ ಒಂದು ನಿರ್ಧಿಷ್ಟ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗೆ ಹೀಗೆ ಕರೆದರೆ ಏಕೆ ದೊಡ್ಡ ಸಮಸ್ಯೆಯಾಗುತ್ತದೆ ನನಗೆ ಗೊತ್ತಿಲ್ಲ” ಎಂದಿದ್ದಾರೆ.

“ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಆ ಪ್ರಾಧ್ಯಾಪಕನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಮಾಡಲಾಗಿದೆ. ಅದರೆ ಕೆಲ ಹೆಸರುಗಳು ಏಕೆ ರಾಷ್ಟ್ರೀಯ ಇಶ್ಯೂಗಳಾಗುತ್ತವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

ಶುಕ್ರವಾರ ಪ್ರಶ್ನೆ ಕೇಳಲು ಮುಂದಾದ ವಿದ್ಯಾರ್ಥಿ ತನ್ನ ಹೆಸರನ್ನು ಹೇಳಿದಾಕ್ಷಣ ಪ್ರಾಧ್ಯಾಪಕರು ಓಹ್ ನೀನು ಕಸಬ್ ಎಂದ ಪ್ರಾಧ್ಯಾಪಕನನ್ನು ಆ ವಿದ್ಯಾರ್ಥಿ ತರಾಟೆಗೆ ತೆಗೆದುಕೊಂಡಿದ್ದರು. “ಸರ್ ನೀವು ಹೇಗೆ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರು ಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ಹೇಗೆ ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ; ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮಾನ್ಯ ಶಿಕ್ಷಣ ಸಚಿವರನ್ನು ಯಾರು ಏನು ಬೇಕಾದರೂ ಕರೆಯಿರಿ ಅವರು ನೊಂದು ಕೊಳ್ಳುವುದಿಲ್ಲ, ಅವರನ್ನು ರಾವಣ ಅನ್ನಿ, ಶಕುನಿ ಅನ್ನಿ, ಅಥವಾ ಭಯೋತ್ಪಾದಕ ಅನ್ನಿ, ಒಸಮಾ ಬಿನ್ ಲಾಡೆನ್ ಅನ್ನಿ ಅವರು ಬೇಸರ ಪಟ್ಟುಕೊಳ್ಳುವುದಿಲ್ಲ ಏಕೆಂದರೆ ಅದು ಅವರಿಗೆ ದೊಡ್ಡ ವಿಷಯವೇ ಅಲ್ಲ!

  2. ನೀವು ಸಚಿವರಿಗೆ ಸರಿಯಾದ ಪ್ರತಿಕ್ರಿಯೆ ನೀಡಿದ್ದೀರಾ.ಅವರನ್ನ ಮನುವಾದಿ,ಜಾತಿವಾದಿ ,ಪುರೋಹಿತಶಾಹಿ, ನಾಲಾಯಕ್ ಮಂತ್ರಿ ಅಂದರು ಅವರೀಗೆನು ಬೇಸರವಿಲ್ಲಾ ಬಿಡಿ.

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...