Homeಮುಖಪುಟಅದೊಂದು ದೊಡ್ಡ ವಿಷಯವಲ್ಲ: ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಘಟನೆಗೆ ಶಿಕ್ಷಣ ಸಚಿವ ನಾಗೇಶ್...

ಅದೊಂದು ದೊಡ್ಡ ವಿಷಯವಲ್ಲ: ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದ ಘಟನೆಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಘಟನೆ ಕುರಿತು ಪ್ರತಿಕ್ರಿಯಿಸಿರುವ ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅದೊಂದು ದೊಡ್ಡ ವಿಷಯವಲ್ಲ ಎಂದಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಾಧ್ಯಾಪಕರನ್ನು ಅಮಾನತ್ತು ಮಾಡಲಾಗಿತ್ತು.

ಈ ಪ್ರಕರಣದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಸಿ ನಾಗೇಶ್, “ಈ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಾಧ್ಯಾಪಕ ಆ ಹೆಸರನ್ನು ಬಳಸಬಾರದಿತ್ತು. ಆದರೆ ಇದು ಅಷ್ಟು ಗಂಭೀರವಾದ ವಿಷಯ ಎಂದು ನನಗನಿಸುವುದಿಲ್ಲ. ಏಕೆಂದರೆ ನಾವು ಹಲವು ವಿದ್ಯಾರ್ಥಿಳಿಗೆ ಹಲವಾರು ಬಾರಿ ರಾವಣ, ಶಕುನಿ ಎಂದು ಕರೆಯುತ್ತೇವೆ. ಆದರೆ ಅದು ಸಮಸ್ಯೆಯಾಗುವುದಿಲ್ಲ. ಆದರೆ ಒಂದು ನಿರ್ಧಿಷ್ಟ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗೆ ಹೀಗೆ ಕರೆದರೆ ಏಕೆ ದೊಡ್ಡ ಸಮಸ್ಯೆಯಾಗುತ್ತದೆ ನನಗೆ ಗೊತ್ತಿಲ್ಲ” ಎಂದಿದ್ದಾರೆ.

“ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಆ ಪ್ರಾಧ್ಯಾಪಕನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಮಾಡಲಾಗಿದೆ. ಅದರೆ ಕೆಲ ಹೆಸರುಗಳು ಏಕೆ ರಾಷ್ಟ್ರೀಯ ಇಶ್ಯೂಗಳಾಗುತ್ತವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.

ಶುಕ್ರವಾರ ಪ್ರಶ್ನೆ ಕೇಳಲು ಮುಂದಾದ ವಿದ್ಯಾರ್ಥಿ ತನ್ನ ಹೆಸರನ್ನು ಹೇಳಿದಾಕ್ಷಣ ಪ್ರಾಧ್ಯಾಪಕರು ಓಹ್ ನೀನು ಕಸಬ್ ಎಂದ ಪ್ರಾಧ್ಯಾಪಕನನ್ನು ಆ ವಿದ್ಯಾರ್ಥಿ ತರಾಟೆಗೆ ತೆಗೆದುಕೊಂಡಿದ್ದರು. “ಸರ್ ನೀವು ಹೇಗೆ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರು ಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ಹೇಗೆ ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ; ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮಾನ್ಯ ಶಿಕ್ಷಣ ಸಚಿವರನ್ನು ಯಾರು ಏನು ಬೇಕಾದರೂ ಕರೆಯಿರಿ ಅವರು ನೊಂದು ಕೊಳ್ಳುವುದಿಲ್ಲ, ಅವರನ್ನು ರಾವಣ ಅನ್ನಿ, ಶಕುನಿ ಅನ್ನಿ, ಅಥವಾ ಭಯೋತ್ಪಾದಕ ಅನ್ನಿ, ಒಸಮಾ ಬಿನ್ ಲಾಡೆನ್ ಅನ್ನಿ ಅವರು ಬೇಸರ ಪಟ್ಟುಕೊಳ್ಳುವುದಿಲ್ಲ ಏಕೆಂದರೆ ಅದು ಅವರಿಗೆ ದೊಡ್ಡ ವಿಷಯವೇ ಅಲ್ಲ!

  2. ನೀವು ಸಚಿವರಿಗೆ ಸರಿಯಾದ ಪ್ರತಿಕ್ರಿಯೆ ನೀಡಿದ್ದೀರಾ.ಅವರನ್ನ ಮನುವಾದಿ,ಜಾತಿವಾದಿ ,ಪುರೋಹಿತಶಾಹಿ, ನಾಲಾಯಕ್ ಮಂತ್ರಿ ಅಂದರು ಅವರೀಗೆನು ಬೇಸರವಿಲ್ಲಾ ಬಿಡಿ.

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...