Homeನೂರರ ನೋಟಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

- Advertisement -
- Advertisement -

ಭಾರತೀಯ ಮತದಾರರಲ್ಲಿ ಕೆಲವರು ಜಾತಿಗೆ, ದುಡ್ಡಿಗೆ, ಹೆಂಡಕ್ಕೆ ತಮ್ಮನ್ನು ಮಾರಾಟ ಮಾಡಿಕೊಂಡರೂ, ಒಟ್ಟಿನಲ್ಲಿ ಅವರು ಜಾಣರಾಗಿದ್ದರು. ಒಮ್ಮೆ ಕಾಂಗ್ರೆಸ್ಸಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಿದ್ದರು. ಅವರು ಸರಿಯಾಗಿ ಸರ್ಕಾರ ನಿರ್ವಹಿಸಿಲ್ಲ ಎಂದಾದರೆ ಮುಂದಿನ ಚುನಾವಣೆಯಲ್ಲಿ ಎಲ್ಲ ಮತದಾರರೂ ಕುಳಿತು ಮಾತಾಡಿಕೊಂಡು, ತೀರ್ಮಾನ ಕೈಗೊಂಡಹಾಗೆ ಮುಂದಿನ ಚುನಾವಣೆಯಲ್ಲಿ ಮತ್ತೊಂದು ಪಕ್ಷಕ್ಕೆ ಬಹುಮತ ನೀಡಿ ಹಿಂದಿನ ಸರ್ಕಾರವನ್ನು ಉರುಳಿಸುತ್ತಿದ್ದರು. ಇದು ಸ್ವಾತಂತ್ರ್ಯ ಪ್ರಾಪ್ತವಾದ 30 ವರ್ಷಗಳ ಮೇಲೆ ಮತದಾರರಲ್ಲಿ ಆದ ಬದಲಾವಣೆ. ಮತದಾರರು ಹೆಚ್ಚು ಓದಿಲ್ಲದಿರಬಹುದು. ಆದರೆ ಅವರಿಗೆ ವ್ಯವಹಾರ ಜ್ಞಾನ ಬಹಳಷ್ಟಿತ್ತು. ಯಾವುದು ಒಳ್ಳೆಯ ಆಡಳಿತ, ಕೆಟ್ಟ ಆಡಳಿತ ಯಾವುದು ಎನ್ನುವುದನ್ನು ಗ್ರಹಿಸುವಷ್ಟು ತಿಳಿವಳಿಕೆ ಇತ್ತು. ಆದರೆ ಅವರಿಗಿದ್ದ ಅವಕಾಶ ಸೀಮಿತ. ಸ್ಪರ್ಧಿಸಿರುವ ರಾಜಕೀಯ ಪಕ್ಷಗಳಲ್ಲಿ ಒಂದನ್ನು ಆಯ್ಕೆ ಮಾಡುವ ಹಕ್ಕು ಮಾತ್ರ ಇದ್ದು ಆದ್ದರಿಂದ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಎಲ್ಲಾ ತಲೆಕೆಳಗಾಯಿತು. ಮತದಾರ ತನ್ನ ಆಲೋಚನಾ ಶಕ್ತಿಯನ್ನು ಕಳೆದುಕೊಂಡ. ದೇಶ ಮತ್ತು ತನ್ನ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಮತದಾರ ಈಗ ಮೋದಿ, ಅವರ ಪೊಳ್ಳು ಘೋಷಣೆಗೆ ಬಲಿಯಾಗುತ್ತಿದ್ದಾನೆ. ಸ್ವಂತಿಕೆಯ ಗುಣ ಏಕೆ ಕಳೆದುಕೊಂಡ ಎಲ್ಲದರ ಕುರಿತು ಗಂಭೀರವಾಗಿ ವಿಚಾರ ಮಾಡಬೇಕೆಂದು ಮತದಾರರಲ್ಲಿ ವಿನಂತಿಮಾಡಿಕೊಳ್ಳುತ್ತೇನೆ. ಆವೇಶಕ್ಕೆ ಎಡೆಮಾಡದೆ ಮತದಾರ ದೇಶದ ಪರಿಸ್ಥಿತಿಯ ಬಗೆಗೆ ಗಮನ ಕೊಡಬೇಕು. ಅಬ್ಬರದ ಪ್ರಚಾರ ಭಾಷಣಗಳು, ಪೊಳ್ಳು ಘೋಷಣೆಗಳು, ಯುದ್ಧದ ಮಾತನಾಡಿ ತನ್ನಿಂದಲೇ ಈ ದೇಶದ ರಕ್ಷಣೆ ಸಾಧ್ಯ, ಹಿಂದಿನವರು ಏನೂ ಮಾಡದೆ ನಿಷ್ಕ್ರೀಯರಾಗಿದ್ದರು ನಾನು ದೇವದೂತ ಅವತರಿಸಿ ಬಂದಿದ್ದೇನೆ ಎಂಬ ರೀತಿಯಲ್ಲಿ ಮೋದಿಯವರು ಮಾತನಾಡುತ್ತಾರೆ. ಹಿಂದೆ ಸರ್ಕಾರ ನಡೆಸಿದವರು ಪಾಕಿಸ್ತಾನದ ಮೇಲೆ 2 ಸಾರಿ ಯುದ್ಧದಲ್ಲಿ ಗೆದ್ದಿದ್ದಾರೆ ಎಂಬುದನ್ನು ಮೋದಿ ತಿಳಿಯಬೇಕು. ನೆಹರು ಕಾಲದಲ್ಲಿ ಚೀನೀಯರು ಭಾರತ ಭಾಯಿ ಭಾಯಿ ಎಂದು ಸ್ಲೋಗನ್ ಹಾಕುತ್ತ ಏಮಾರಿಸಿ ಭಾರತದ ಮೇಲೆ ಏಕಾಏಕಿ ಯುದ್ಧ ಹೂಡಿದರು. ಚೀನೀಯರು ನಂಬಿಕೆದ್ರೋಹಿಗಳು ಎಂಬುದನ್ನು ಸಾಬೀತುಮಾಡಿಕೊಟ್ಟರು. ಯುದ್ಧದ ಸುಳಿವು ಕೂಡ ಕೊಡದೆ ಹಠಾತ್ತಾಗಿ ಮೇಲೆ ಏರಗಿದರು. ಭಾರತೀಯ ಸೈನ್ಯ ಯುದ್ಧದ ಮೂಡಿನಲ್ಲೇ ಇರಲಿಲ್ಲ. ಆದರೆ ಮೋದಿಯವರು, ಜವಾಹರ್‌ಲಾಲ್‌ರನ್ನು ಹಂಗಿಸಲು ಚೈನಾದ ವಿಚಾರ ಪ್ರಸ್ತಾಪ ಮಾಡುತ್ತಾರೆ. ಯಾವ ಸರ್ಕಾರ ಬರಲಿ ದೇಶ ರಕ್ಷಣೆ ಮಾಡಬೇಕಾದದ್ದು ಅವರ ಕರ್ತವ್ಯ. ಅದನ್ನು ಅವರು ಮಾಡೇ ಮಾಡುತ್ತಾರೆ. ಭಾರತ ಸೈನ್ಯವನ್ನು ಮೊದಲ ಬಾರಿಗೆ ಮೋದಿ ಬಂದು ಸಂಘಟಿಸಲಿಲ್ಲ ಭಾರತೀಯ ಸೈನ್ಯ ಮೊದಲಿನಿಂದಲೂ ಬಲಿಷ್ಠವಾಗಿದೆ. ಸುಸಂಘಟಿತವಾಗಿದೆ. ಇದನ್ನು ನಮ್ಮ ಮತದಾರರು ತಿಳಿಯಬೇಕು. ಆವೇಶ ತೋರುವವರಿಗೆ ನಮಗೂ ಭಾರತೀಯ ಸೈನ್ಯದ ಬಲದ ಬಗೆಗೆ ಅರಿವಿದೆ, ನೀವು ಉತ್ಪ್ರೇಕ್ಷೆ ಮಾಡಿ ಸುಳ್ಳು ಪ್ರಚಾರ ಮಾಡಬೇಡಿ ಎಂದು ಖಡಕ್ಕಾಗಿ ಹೇಳಬೇಕು.

ಮೋದಿಯವರು ಅಧಿಕಾರಕ್ಕೆ ಬಂದು 6 ವರ್ಷ ಆಯಿತು. ಈ 6 ವರ್ಷದಲ್ಲಿ ಏನೇನು ನಡೆಯಿತು ಎಂಬುದನ್ನು ಮತದಾರರು ಗಮನಿಸಬೇಕು. 1000, 500ರೂಗಳ ಹಳೇ ನೋಟುನ್ನು ರದ್ದು ಮಾಡಿದ್ದರಿಂದ ಕಪ್ಪು ಹಣ ಹೊರಬರಲಿಲ್ಲ, ಭ್ರಷ್ಟಾಚಾರ ಕಡಿಮೆಯಾಗಲಿಲ್ಲ. ಅದರ ಬದಲು ಬ್ಯಾಂಕ್ ಅಧಿಕಾರಿಗಳು, ರಾಜಕಾರಣಿಗಳು ಕೂಡಿಕೊಂಡು ಲಕ್ಷಾಂತರ ಕಪ್ಪುಹಣವನ್ನೆಲ್ಲ ಬಿಳೀದು ಮಾಡಿಕೊಂಡರು. ಪಟ್ಟಭದ್ರರ ಹಿತಕಾಯ್ದರು.

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು
ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

109 ರೈಲು ಮಾರ್ಗಗಳನ್ನು ಖಾಸಗಿಯವರಿಗೆ ವಹಿಸುವ, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಹರಾಜು ಮಾಡುವ ಸರ್ಕಾರದ ಷೇರುಗಳನ್ನು ಮಾರಿಹಾಕುತ್ತ ಇಂತಹ ಎಷ್ಟೋ ಅವಿವೇಕದ ಕೆಲಸಗಳನ್ನು ಮೋದಿ ಕೈಗೆತ್ತಿಕೊಂಡಿದ್ದಾರೆ. ದೊಡ್ಡ ಬಹುಮತ ಇದೆಯೆಂದು ಜನದ್ರೋಹಿ ಕೆಲಸಗಳನ್ನು ಎಗ್ಗಿಲ್ಲದೆ ಮಾಡುತ್ತಿದ್ದಾರೆ. ಕೊರೊನಾದಿಂದ ಜನ ಒಂದೇಸಮನೆ ಸಾಯುತ್ತಿದ್ದರೆ, ಜನಪರ ಕಾಯ್ದೆಗಳಿಗೆ ತಮಗೆ ಬೇಕಾದಂತೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸುವುದರಲ್ಲಿ ಮೋದಿ ಮಗ್ನರಾಗಿದ್ದಾರೆ. ಇದನ್ನು ಪ್ರಶ್ನಿಸಿದರೆ ಅಂಥವರ ಧ್ವನಿಯನ್ನು ಅಡಗಿಸಲಾಗುತ್ತದೆ.

ಕಾಶ್ಮೀರಕ್ಕೆ ಸಂಬಂಧಪಟ್ಟ 371ನೇ ವಿಧಿಯನ್ನು ಸಂವಿಧಾನ ಬದಲಾಯಿಸಿದೆ ರದ್ದುಗೊಳಿಸಲಾಗಿದೆ. ಕಾಶ್ಮೀರದ ಜನತೆಯಲ್ಲಿ ಈ ವಿಚಾರ ಪ್ರಸ್ತಾಪಿಸದೆ ಸರ್ವಾಧಿಕಾರಿ ಮನೋಭಾವದಿಂದ ಈ ವಿಧಿಯನ್ನು ರದ್ದು ಮಾಡಲಾಗಿದೆ. ವಿಶ್ವವಿದ್ಯಾಲಯಗಳ ಕುಲಪತಿಗಳನ್ನಾಗಿ ಹಿಂದುತ್ವ ಪ್ರತಿಪಾದಕರನ್ನೇ ನೇಮಿಸಲಾಗುತ್ತಿದೆ. ನಾಯಕರನ್ನು ಪ್ರಶ್ನಿಸಬಾರದು ಅವರು ಹೇಳಿದಂತೆ ಕೇಳಿಕೊಂಡಿರಬೇಕು ಎಂದು ಆರ್‌ಎಸ್‌ಎಸ್ ಸಿದ್ಧಾಂತ ಹೇಳುತ್ತದೆ. ಅದನ್ನೇ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೂ ಅನ್ವಯಿಸುವ ಕೆಲಸ ಆರಂಭವಾಗಿದೆ. ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನದ ಮೇಲೆ ದಾಳಿ ನಡೆಸಿ ಪೌರತ್ವ(ತಿದ್ದುಪಡಿ) ಶಾಸನವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕಷ್ಟು ಪ್ರತಿಭಟನೆ ನಡೆದಿದೆ. ವೈಚಾರಿಕ ಚಿಂತನೆ ಮಾಡುವವರ ಮೇಲೆ ದಾಳಿ ನಡೆಸಲಾಗಿದೆ. ಈ 6 ವರ್ಷಗಳಲ್ಲಿ 200 ಪತ್ರಕರ್ತರ ಮೇಲೆ ದಾಳಿ ನಡೆದಿದೆ. ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಯಾವುದರ ವಿಚಾರಣೆಯೂ ಆಗಿಲ್ಲ. ಇದೆಲ್ಲವನ್ನೂ ಮತದಾರರು ಪ್ರಶ್ನಿಸದಿದ್ದಲ್ಲಿ ಮುಂದೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ.

  • ಎಚ್.ಎಸ್ ದೊರೆಸ್ವಾಮಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಿಂತಕರು.

ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...