Homeನೂರರ ನೋಟಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

- Advertisement -
- Advertisement -

ಭಾರತೀಯ ಮತದಾರರಲ್ಲಿ ಕೆಲವರು ಜಾತಿಗೆ, ದುಡ್ಡಿಗೆ, ಹೆಂಡಕ್ಕೆ ತಮ್ಮನ್ನು ಮಾರಾಟ ಮಾಡಿಕೊಂಡರೂ, ಒಟ್ಟಿನಲ್ಲಿ ಅವರು ಜಾಣರಾಗಿದ್ದರು. ಒಮ್ಮೆ ಕಾಂಗ್ರೆಸ್ಸಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಿದ್ದರು. ಅವರು ಸರಿಯಾಗಿ ಸರ್ಕಾರ ನಿರ್ವಹಿಸಿಲ್ಲ ಎಂದಾದರೆ ಮುಂದಿನ ಚುನಾವಣೆಯಲ್ಲಿ ಎಲ್ಲ ಮತದಾರರೂ ಕುಳಿತು ಮಾತಾಡಿಕೊಂಡು, ತೀರ್ಮಾನ ಕೈಗೊಂಡಹಾಗೆ ಮುಂದಿನ ಚುನಾವಣೆಯಲ್ಲಿ ಮತ್ತೊಂದು ಪಕ್ಷಕ್ಕೆ ಬಹುಮತ ನೀಡಿ ಹಿಂದಿನ ಸರ್ಕಾರವನ್ನು ಉರುಳಿಸುತ್ತಿದ್ದರು. ಇದು ಸ್ವಾತಂತ್ರ್ಯ ಪ್ರಾಪ್ತವಾದ 30 ವರ್ಷಗಳ ಮೇಲೆ ಮತದಾರರಲ್ಲಿ ಆದ ಬದಲಾವಣೆ. ಮತದಾರರು ಹೆಚ್ಚು ಓದಿಲ್ಲದಿರಬಹುದು. ಆದರೆ ಅವರಿಗೆ ವ್ಯವಹಾರ ಜ್ಞಾನ ಬಹಳಷ್ಟಿತ್ತು. ಯಾವುದು ಒಳ್ಳೆಯ ಆಡಳಿತ, ಕೆಟ್ಟ ಆಡಳಿತ ಯಾವುದು ಎನ್ನುವುದನ್ನು ಗ್ರಹಿಸುವಷ್ಟು ತಿಳಿವಳಿಕೆ ಇತ್ತು. ಆದರೆ ಅವರಿಗಿದ್ದ ಅವಕಾಶ ಸೀಮಿತ. ಸ್ಪರ್ಧಿಸಿರುವ ರಾಜಕೀಯ ಪಕ್ಷಗಳಲ್ಲಿ ಒಂದನ್ನು ಆಯ್ಕೆ ಮಾಡುವ ಹಕ್ಕು ಮಾತ್ರ ಇದ್ದು ಆದ್ದರಿಂದ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಎಲ್ಲಾ ತಲೆಕೆಳಗಾಯಿತು. ಮತದಾರ ತನ್ನ ಆಲೋಚನಾ ಶಕ್ತಿಯನ್ನು ಕಳೆದುಕೊಂಡ. ದೇಶ ಮತ್ತು ತನ್ನ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಮತದಾರ ಈಗ ಮೋದಿ, ಅವರ ಪೊಳ್ಳು ಘೋಷಣೆಗೆ ಬಲಿಯಾಗುತ್ತಿದ್ದಾನೆ. ಸ್ವಂತಿಕೆಯ ಗುಣ ಏಕೆ ಕಳೆದುಕೊಂಡ ಎಲ್ಲದರ ಕುರಿತು ಗಂಭೀರವಾಗಿ ವಿಚಾರ ಮಾಡಬೇಕೆಂದು ಮತದಾರರಲ್ಲಿ ವಿನಂತಿಮಾಡಿಕೊಳ್ಳುತ್ತೇನೆ. ಆವೇಶಕ್ಕೆ ಎಡೆಮಾಡದೆ ಮತದಾರ ದೇಶದ ಪರಿಸ್ಥಿತಿಯ ಬಗೆಗೆ ಗಮನ ಕೊಡಬೇಕು. ಅಬ್ಬರದ ಪ್ರಚಾರ ಭಾಷಣಗಳು, ಪೊಳ್ಳು ಘೋಷಣೆಗಳು, ಯುದ್ಧದ ಮಾತನಾಡಿ ತನ್ನಿಂದಲೇ ಈ ದೇಶದ ರಕ್ಷಣೆ ಸಾಧ್ಯ, ಹಿಂದಿನವರು ಏನೂ ಮಾಡದೆ ನಿಷ್ಕ್ರೀಯರಾಗಿದ್ದರು ನಾನು ದೇವದೂತ ಅವತರಿಸಿ ಬಂದಿದ್ದೇನೆ ಎಂಬ ರೀತಿಯಲ್ಲಿ ಮೋದಿಯವರು ಮಾತನಾಡುತ್ತಾರೆ. ಹಿಂದೆ ಸರ್ಕಾರ ನಡೆಸಿದವರು ಪಾಕಿಸ್ತಾನದ ಮೇಲೆ 2 ಸಾರಿ ಯುದ್ಧದಲ್ಲಿ ಗೆದ್ದಿದ್ದಾರೆ ಎಂಬುದನ್ನು ಮೋದಿ ತಿಳಿಯಬೇಕು. ನೆಹರು ಕಾಲದಲ್ಲಿ ಚೀನೀಯರು ಭಾರತ ಭಾಯಿ ಭಾಯಿ ಎಂದು ಸ್ಲೋಗನ್ ಹಾಕುತ್ತ ಏಮಾರಿಸಿ ಭಾರತದ ಮೇಲೆ ಏಕಾಏಕಿ ಯುದ್ಧ ಹೂಡಿದರು. ಚೀನೀಯರು ನಂಬಿಕೆದ್ರೋಹಿಗಳು ಎಂಬುದನ್ನು ಸಾಬೀತುಮಾಡಿಕೊಟ್ಟರು. ಯುದ್ಧದ ಸುಳಿವು ಕೂಡ ಕೊಡದೆ ಹಠಾತ್ತಾಗಿ ಮೇಲೆ ಏರಗಿದರು. ಭಾರತೀಯ ಸೈನ್ಯ ಯುದ್ಧದ ಮೂಡಿನಲ್ಲೇ ಇರಲಿಲ್ಲ. ಆದರೆ ಮೋದಿಯವರು, ಜವಾಹರ್‌ಲಾಲ್‌ರನ್ನು ಹಂಗಿಸಲು ಚೈನಾದ ವಿಚಾರ ಪ್ರಸ್ತಾಪ ಮಾಡುತ್ತಾರೆ. ಯಾವ ಸರ್ಕಾರ ಬರಲಿ ದೇಶ ರಕ್ಷಣೆ ಮಾಡಬೇಕಾದದ್ದು ಅವರ ಕರ್ತವ್ಯ. ಅದನ್ನು ಅವರು ಮಾಡೇ ಮಾಡುತ್ತಾರೆ. ಭಾರತ ಸೈನ್ಯವನ್ನು ಮೊದಲ ಬಾರಿಗೆ ಮೋದಿ ಬಂದು ಸಂಘಟಿಸಲಿಲ್ಲ ಭಾರತೀಯ ಸೈನ್ಯ ಮೊದಲಿನಿಂದಲೂ ಬಲಿಷ್ಠವಾಗಿದೆ. ಸುಸಂಘಟಿತವಾಗಿದೆ. ಇದನ್ನು ನಮ್ಮ ಮತದಾರರು ತಿಳಿಯಬೇಕು. ಆವೇಶ ತೋರುವವರಿಗೆ ನಮಗೂ ಭಾರತೀಯ ಸೈನ್ಯದ ಬಲದ ಬಗೆಗೆ ಅರಿವಿದೆ, ನೀವು ಉತ್ಪ್ರೇಕ್ಷೆ ಮಾಡಿ ಸುಳ್ಳು ಪ್ರಚಾರ ಮಾಡಬೇಡಿ ಎಂದು ಖಡಕ್ಕಾಗಿ ಹೇಳಬೇಕು.

ಮೋದಿಯವರು ಅಧಿಕಾರಕ್ಕೆ ಬಂದು 6 ವರ್ಷ ಆಯಿತು. ಈ 6 ವರ್ಷದಲ್ಲಿ ಏನೇನು ನಡೆಯಿತು ಎಂಬುದನ್ನು ಮತದಾರರು ಗಮನಿಸಬೇಕು. 1000, 500ರೂಗಳ ಹಳೇ ನೋಟುನ್ನು ರದ್ದು ಮಾಡಿದ್ದರಿಂದ ಕಪ್ಪು ಹಣ ಹೊರಬರಲಿಲ್ಲ, ಭ್ರಷ್ಟಾಚಾರ ಕಡಿಮೆಯಾಗಲಿಲ್ಲ. ಅದರ ಬದಲು ಬ್ಯಾಂಕ್ ಅಧಿಕಾರಿಗಳು, ರಾಜಕಾರಣಿಗಳು ಕೂಡಿಕೊಂಡು ಲಕ್ಷಾಂತರ ಕಪ್ಪುಹಣವನ್ನೆಲ್ಲ ಬಿಳೀದು ಮಾಡಿಕೊಂಡರು. ಪಟ್ಟಭದ್ರರ ಹಿತಕಾಯ್ದರು.

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು
ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

109 ರೈಲು ಮಾರ್ಗಗಳನ್ನು ಖಾಸಗಿಯವರಿಗೆ ವಹಿಸುವ, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಹರಾಜು ಮಾಡುವ ಸರ್ಕಾರದ ಷೇರುಗಳನ್ನು ಮಾರಿಹಾಕುತ್ತ ಇಂತಹ ಎಷ್ಟೋ ಅವಿವೇಕದ ಕೆಲಸಗಳನ್ನು ಮೋದಿ ಕೈಗೆತ್ತಿಕೊಂಡಿದ್ದಾರೆ. ದೊಡ್ಡ ಬಹುಮತ ಇದೆಯೆಂದು ಜನದ್ರೋಹಿ ಕೆಲಸಗಳನ್ನು ಎಗ್ಗಿಲ್ಲದೆ ಮಾಡುತ್ತಿದ್ದಾರೆ. ಕೊರೊನಾದಿಂದ ಜನ ಒಂದೇಸಮನೆ ಸಾಯುತ್ತಿದ್ದರೆ, ಜನಪರ ಕಾಯ್ದೆಗಳಿಗೆ ತಮಗೆ ಬೇಕಾದಂತೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸುವುದರಲ್ಲಿ ಮೋದಿ ಮಗ್ನರಾಗಿದ್ದಾರೆ. ಇದನ್ನು ಪ್ರಶ್ನಿಸಿದರೆ ಅಂಥವರ ಧ್ವನಿಯನ್ನು ಅಡಗಿಸಲಾಗುತ್ತದೆ.

ಕಾಶ್ಮೀರಕ್ಕೆ ಸಂಬಂಧಪಟ್ಟ 371ನೇ ವಿಧಿಯನ್ನು ಸಂವಿಧಾನ ಬದಲಾಯಿಸಿದೆ ರದ್ದುಗೊಳಿಸಲಾಗಿದೆ. ಕಾಶ್ಮೀರದ ಜನತೆಯಲ್ಲಿ ಈ ವಿಚಾರ ಪ್ರಸ್ತಾಪಿಸದೆ ಸರ್ವಾಧಿಕಾರಿ ಮನೋಭಾವದಿಂದ ಈ ವಿಧಿಯನ್ನು ರದ್ದು ಮಾಡಲಾಗಿದೆ. ವಿಶ್ವವಿದ್ಯಾಲಯಗಳ ಕುಲಪತಿಗಳನ್ನಾಗಿ ಹಿಂದುತ್ವ ಪ್ರತಿಪಾದಕರನ್ನೇ ನೇಮಿಸಲಾಗುತ್ತಿದೆ. ನಾಯಕರನ್ನು ಪ್ರಶ್ನಿಸಬಾರದು ಅವರು ಹೇಳಿದಂತೆ ಕೇಳಿಕೊಂಡಿರಬೇಕು ಎಂದು ಆರ್‌ಎಸ್‌ಎಸ್ ಸಿದ್ಧಾಂತ ಹೇಳುತ್ತದೆ. ಅದನ್ನೇ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೂ ಅನ್ವಯಿಸುವ ಕೆಲಸ ಆರಂಭವಾಗಿದೆ. ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನದ ಮೇಲೆ ದಾಳಿ ನಡೆಸಿ ಪೌರತ್ವ(ತಿದ್ದುಪಡಿ) ಶಾಸನವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕಷ್ಟು ಪ್ರತಿಭಟನೆ ನಡೆದಿದೆ. ವೈಚಾರಿಕ ಚಿಂತನೆ ಮಾಡುವವರ ಮೇಲೆ ದಾಳಿ ನಡೆಸಲಾಗಿದೆ. ಈ 6 ವರ್ಷಗಳಲ್ಲಿ 200 ಪತ್ರಕರ್ತರ ಮೇಲೆ ದಾಳಿ ನಡೆದಿದೆ. ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಯಾವುದರ ವಿಚಾರಣೆಯೂ ಆಗಿಲ್ಲ. ಇದೆಲ್ಲವನ್ನೂ ಮತದಾರರು ಪ್ರಶ್ನಿಸದಿದ್ದಲ್ಲಿ ಮುಂದೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ.

  • ಎಚ್.ಎಸ್ ದೊರೆಸ್ವಾಮಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಿಂತಕರು.

ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...