Homeನೂರರ ನೋಟಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

- Advertisement -
- Advertisement -

ಭಾರತೀಯ ಮತದಾರರಲ್ಲಿ ಕೆಲವರು ಜಾತಿಗೆ, ದುಡ್ಡಿಗೆ, ಹೆಂಡಕ್ಕೆ ತಮ್ಮನ್ನು ಮಾರಾಟ ಮಾಡಿಕೊಂಡರೂ, ಒಟ್ಟಿನಲ್ಲಿ ಅವರು ಜಾಣರಾಗಿದ್ದರು. ಒಮ್ಮೆ ಕಾಂಗ್ರೆಸ್ಸಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಿದ್ದರು. ಅವರು ಸರಿಯಾಗಿ ಸರ್ಕಾರ ನಿರ್ವಹಿಸಿಲ್ಲ ಎಂದಾದರೆ ಮುಂದಿನ ಚುನಾವಣೆಯಲ್ಲಿ ಎಲ್ಲ ಮತದಾರರೂ ಕುಳಿತು ಮಾತಾಡಿಕೊಂಡು, ತೀರ್ಮಾನ ಕೈಗೊಂಡಹಾಗೆ ಮುಂದಿನ ಚುನಾವಣೆಯಲ್ಲಿ ಮತ್ತೊಂದು ಪಕ್ಷಕ್ಕೆ ಬಹುಮತ ನೀಡಿ ಹಿಂದಿನ ಸರ್ಕಾರವನ್ನು ಉರುಳಿಸುತ್ತಿದ್ದರು. ಇದು ಸ್ವಾತಂತ್ರ್ಯ ಪ್ರಾಪ್ತವಾದ 30 ವರ್ಷಗಳ ಮೇಲೆ ಮತದಾರರಲ್ಲಿ ಆದ ಬದಲಾವಣೆ. ಮತದಾರರು ಹೆಚ್ಚು ಓದಿಲ್ಲದಿರಬಹುದು. ಆದರೆ ಅವರಿಗೆ ವ್ಯವಹಾರ ಜ್ಞಾನ ಬಹಳಷ್ಟಿತ್ತು. ಯಾವುದು ಒಳ್ಳೆಯ ಆಡಳಿತ, ಕೆಟ್ಟ ಆಡಳಿತ ಯಾವುದು ಎನ್ನುವುದನ್ನು ಗ್ರಹಿಸುವಷ್ಟು ತಿಳಿವಳಿಕೆ ಇತ್ತು. ಆದರೆ ಅವರಿಗಿದ್ದ ಅವಕಾಶ ಸೀಮಿತ. ಸ್ಪರ್ಧಿಸಿರುವ ರಾಜಕೀಯ ಪಕ್ಷಗಳಲ್ಲಿ ಒಂದನ್ನು ಆಯ್ಕೆ ಮಾಡುವ ಹಕ್ಕು ಮಾತ್ರ ಇದ್ದು ಆದ್ದರಿಂದ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಎಲ್ಲಾ ತಲೆಕೆಳಗಾಯಿತು. ಮತದಾರ ತನ್ನ ಆಲೋಚನಾ ಶಕ್ತಿಯನ್ನು ಕಳೆದುಕೊಂಡ. ದೇಶ ಮತ್ತು ತನ್ನ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಮತದಾರ ಈಗ ಮೋದಿ, ಅವರ ಪೊಳ್ಳು ಘೋಷಣೆಗೆ ಬಲಿಯಾಗುತ್ತಿದ್ದಾನೆ. ಸ್ವಂತಿಕೆಯ ಗುಣ ಏಕೆ ಕಳೆದುಕೊಂಡ ಎಲ್ಲದರ ಕುರಿತು ಗಂಭೀರವಾಗಿ ವಿಚಾರ ಮಾಡಬೇಕೆಂದು ಮತದಾರರಲ್ಲಿ ವಿನಂತಿಮಾಡಿಕೊಳ್ಳುತ್ತೇನೆ. ಆವೇಶಕ್ಕೆ ಎಡೆಮಾಡದೆ ಮತದಾರ ದೇಶದ ಪರಿಸ್ಥಿತಿಯ ಬಗೆಗೆ ಗಮನ ಕೊಡಬೇಕು. ಅಬ್ಬರದ ಪ್ರಚಾರ ಭಾಷಣಗಳು, ಪೊಳ್ಳು ಘೋಷಣೆಗಳು, ಯುದ್ಧದ ಮಾತನಾಡಿ ತನ್ನಿಂದಲೇ ಈ ದೇಶದ ರಕ್ಷಣೆ ಸಾಧ್ಯ, ಹಿಂದಿನವರು ಏನೂ ಮಾಡದೆ ನಿಷ್ಕ್ರೀಯರಾಗಿದ್ದರು ನಾನು ದೇವದೂತ ಅವತರಿಸಿ ಬಂದಿದ್ದೇನೆ ಎಂಬ ರೀತಿಯಲ್ಲಿ ಮೋದಿಯವರು ಮಾತನಾಡುತ್ತಾರೆ. ಹಿಂದೆ ಸರ್ಕಾರ ನಡೆಸಿದವರು ಪಾಕಿಸ್ತಾನದ ಮೇಲೆ 2 ಸಾರಿ ಯುದ್ಧದಲ್ಲಿ ಗೆದ್ದಿದ್ದಾರೆ ಎಂಬುದನ್ನು ಮೋದಿ ತಿಳಿಯಬೇಕು. ನೆಹರು ಕಾಲದಲ್ಲಿ ಚೀನೀಯರು ಭಾರತ ಭಾಯಿ ಭಾಯಿ ಎಂದು ಸ್ಲೋಗನ್ ಹಾಕುತ್ತ ಏಮಾರಿಸಿ ಭಾರತದ ಮೇಲೆ ಏಕಾಏಕಿ ಯುದ್ಧ ಹೂಡಿದರು. ಚೀನೀಯರು ನಂಬಿಕೆದ್ರೋಹಿಗಳು ಎಂಬುದನ್ನು ಸಾಬೀತುಮಾಡಿಕೊಟ್ಟರು. ಯುದ್ಧದ ಸುಳಿವು ಕೂಡ ಕೊಡದೆ ಹಠಾತ್ತಾಗಿ ಮೇಲೆ ಏರಗಿದರು. ಭಾರತೀಯ ಸೈನ್ಯ ಯುದ್ಧದ ಮೂಡಿನಲ್ಲೇ ಇರಲಿಲ್ಲ. ಆದರೆ ಮೋದಿಯವರು, ಜವಾಹರ್‌ಲಾಲ್‌ರನ್ನು ಹಂಗಿಸಲು ಚೈನಾದ ವಿಚಾರ ಪ್ರಸ್ತಾಪ ಮಾಡುತ್ತಾರೆ. ಯಾವ ಸರ್ಕಾರ ಬರಲಿ ದೇಶ ರಕ್ಷಣೆ ಮಾಡಬೇಕಾದದ್ದು ಅವರ ಕರ್ತವ್ಯ. ಅದನ್ನು ಅವರು ಮಾಡೇ ಮಾಡುತ್ತಾರೆ. ಭಾರತ ಸೈನ್ಯವನ್ನು ಮೊದಲ ಬಾರಿಗೆ ಮೋದಿ ಬಂದು ಸಂಘಟಿಸಲಿಲ್ಲ ಭಾರತೀಯ ಸೈನ್ಯ ಮೊದಲಿನಿಂದಲೂ ಬಲಿಷ್ಠವಾಗಿದೆ. ಸುಸಂಘಟಿತವಾಗಿದೆ. ಇದನ್ನು ನಮ್ಮ ಮತದಾರರು ತಿಳಿಯಬೇಕು. ಆವೇಶ ತೋರುವವರಿಗೆ ನಮಗೂ ಭಾರತೀಯ ಸೈನ್ಯದ ಬಲದ ಬಗೆಗೆ ಅರಿವಿದೆ, ನೀವು ಉತ್ಪ್ರೇಕ್ಷೆ ಮಾಡಿ ಸುಳ್ಳು ಪ್ರಚಾರ ಮಾಡಬೇಡಿ ಎಂದು ಖಡಕ್ಕಾಗಿ ಹೇಳಬೇಕು.

ಮೋದಿಯವರು ಅಧಿಕಾರಕ್ಕೆ ಬಂದು 6 ವರ್ಷ ಆಯಿತು. ಈ 6 ವರ್ಷದಲ್ಲಿ ಏನೇನು ನಡೆಯಿತು ಎಂಬುದನ್ನು ಮತದಾರರು ಗಮನಿಸಬೇಕು. 1000, 500ರೂಗಳ ಹಳೇ ನೋಟುನ್ನು ರದ್ದು ಮಾಡಿದ್ದರಿಂದ ಕಪ್ಪು ಹಣ ಹೊರಬರಲಿಲ್ಲ, ಭ್ರಷ್ಟಾಚಾರ ಕಡಿಮೆಯಾಗಲಿಲ್ಲ. ಅದರ ಬದಲು ಬ್ಯಾಂಕ್ ಅಧಿಕಾರಿಗಳು, ರಾಜಕಾರಣಿಗಳು ಕೂಡಿಕೊಂಡು ಲಕ್ಷಾಂತರ ಕಪ್ಪುಹಣವನ್ನೆಲ್ಲ ಬಿಳೀದು ಮಾಡಿಕೊಂಡರು. ಪಟ್ಟಭದ್ರರ ಹಿತಕಾಯ್ದರು.

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು
ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

109 ರೈಲು ಮಾರ್ಗಗಳನ್ನು ಖಾಸಗಿಯವರಿಗೆ ವಹಿಸುವ, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಹರಾಜು ಮಾಡುವ ಸರ್ಕಾರದ ಷೇರುಗಳನ್ನು ಮಾರಿಹಾಕುತ್ತ ಇಂತಹ ಎಷ್ಟೋ ಅವಿವೇಕದ ಕೆಲಸಗಳನ್ನು ಮೋದಿ ಕೈಗೆತ್ತಿಕೊಂಡಿದ್ದಾರೆ. ದೊಡ್ಡ ಬಹುಮತ ಇದೆಯೆಂದು ಜನದ್ರೋಹಿ ಕೆಲಸಗಳನ್ನು ಎಗ್ಗಿಲ್ಲದೆ ಮಾಡುತ್ತಿದ್ದಾರೆ. ಕೊರೊನಾದಿಂದ ಜನ ಒಂದೇಸಮನೆ ಸಾಯುತ್ತಿದ್ದರೆ, ಜನಪರ ಕಾಯ್ದೆಗಳಿಗೆ ತಮಗೆ ಬೇಕಾದಂತೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸುವುದರಲ್ಲಿ ಮೋದಿ ಮಗ್ನರಾಗಿದ್ದಾರೆ. ಇದನ್ನು ಪ್ರಶ್ನಿಸಿದರೆ ಅಂಥವರ ಧ್ವನಿಯನ್ನು ಅಡಗಿಸಲಾಗುತ್ತದೆ.

ಕಾಶ್ಮೀರಕ್ಕೆ ಸಂಬಂಧಪಟ್ಟ 371ನೇ ವಿಧಿಯನ್ನು ಸಂವಿಧಾನ ಬದಲಾಯಿಸಿದೆ ರದ್ದುಗೊಳಿಸಲಾಗಿದೆ. ಕಾಶ್ಮೀರದ ಜನತೆಯಲ್ಲಿ ಈ ವಿಚಾರ ಪ್ರಸ್ತಾಪಿಸದೆ ಸರ್ವಾಧಿಕಾರಿ ಮನೋಭಾವದಿಂದ ಈ ವಿಧಿಯನ್ನು ರದ್ದು ಮಾಡಲಾಗಿದೆ. ವಿಶ್ವವಿದ್ಯಾಲಯಗಳ ಕುಲಪತಿಗಳನ್ನಾಗಿ ಹಿಂದುತ್ವ ಪ್ರತಿಪಾದಕರನ್ನೇ ನೇಮಿಸಲಾಗುತ್ತಿದೆ. ನಾಯಕರನ್ನು ಪ್ರಶ್ನಿಸಬಾರದು ಅವರು ಹೇಳಿದಂತೆ ಕೇಳಿಕೊಂಡಿರಬೇಕು ಎಂದು ಆರ್‌ಎಸ್‌ಎಸ್ ಸಿದ್ಧಾಂತ ಹೇಳುತ್ತದೆ. ಅದನ್ನೇ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೂ ಅನ್ವಯಿಸುವ ಕೆಲಸ ಆರಂಭವಾಗಿದೆ. ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನದ ಮೇಲೆ ದಾಳಿ ನಡೆಸಿ ಪೌರತ್ವ(ತಿದ್ದುಪಡಿ) ಶಾಸನವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕಷ್ಟು ಪ್ರತಿಭಟನೆ ನಡೆದಿದೆ. ವೈಚಾರಿಕ ಚಿಂತನೆ ಮಾಡುವವರ ಮೇಲೆ ದಾಳಿ ನಡೆಸಲಾಗಿದೆ. ಈ 6 ವರ್ಷಗಳಲ್ಲಿ 200 ಪತ್ರಕರ್ತರ ಮೇಲೆ ದಾಳಿ ನಡೆದಿದೆ. ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಯಾವುದರ ವಿಚಾರಣೆಯೂ ಆಗಿಲ್ಲ. ಇದೆಲ್ಲವನ್ನೂ ಮತದಾರರು ಪ್ರಶ್ನಿಸದಿದ್ದಲ್ಲಿ ಮುಂದೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ.

  • ಎಚ್.ಎಸ್ ದೊರೆಸ್ವಾಮಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಿಂತಕರು.

ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...