Homeನೂರರ ನೋಟಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

- Advertisement -
- Advertisement -

ಭಾರತೀಯ ಮತದಾರರಲ್ಲಿ ಕೆಲವರು ಜಾತಿಗೆ, ದುಡ್ಡಿಗೆ, ಹೆಂಡಕ್ಕೆ ತಮ್ಮನ್ನು ಮಾರಾಟ ಮಾಡಿಕೊಂಡರೂ, ಒಟ್ಟಿನಲ್ಲಿ ಅವರು ಜಾಣರಾಗಿದ್ದರು. ಒಮ್ಮೆ ಕಾಂಗ್ರೆಸ್ಸಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಿದ್ದರು. ಅವರು ಸರಿಯಾಗಿ ಸರ್ಕಾರ ನಿರ್ವಹಿಸಿಲ್ಲ ಎಂದಾದರೆ ಮುಂದಿನ ಚುನಾವಣೆಯಲ್ಲಿ ಎಲ್ಲ ಮತದಾರರೂ ಕುಳಿತು ಮಾತಾಡಿಕೊಂಡು, ತೀರ್ಮಾನ ಕೈಗೊಂಡಹಾಗೆ ಮುಂದಿನ ಚುನಾವಣೆಯಲ್ಲಿ ಮತ್ತೊಂದು ಪಕ್ಷಕ್ಕೆ ಬಹುಮತ ನೀಡಿ ಹಿಂದಿನ ಸರ್ಕಾರವನ್ನು ಉರುಳಿಸುತ್ತಿದ್ದರು. ಇದು ಸ್ವಾತಂತ್ರ್ಯ ಪ್ರಾಪ್ತವಾದ 30 ವರ್ಷಗಳ ಮೇಲೆ ಮತದಾರರಲ್ಲಿ ಆದ ಬದಲಾವಣೆ. ಮತದಾರರು ಹೆಚ್ಚು ಓದಿಲ್ಲದಿರಬಹುದು. ಆದರೆ ಅವರಿಗೆ ವ್ಯವಹಾರ ಜ್ಞಾನ ಬಹಳಷ್ಟಿತ್ತು. ಯಾವುದು ಒಳ್ಳೆಯ ಆಡಳಿತ, ಕೆಟ್ಟ ಆಡಳಿತ ಯಾವುದು ಎನ್ನುವುದನ್ನು ಗ್ರಹಿಸುವಷ್ಟು ತಿಳಿವಳಿಕೆ ಇತ್ತು. ಆದರೆ ಅವರಿಗಿದ್ದ ಅವಕಾಶ ಸೀಮಿತ. ಸ್ಪರ್ಧಿಸಿರುವ ರಾಜಕೀಯ ಪಕ್ಷಗಳಲ್ಲಿ ಒಂದನ್ನು ಆಯ್ಕೆ ಮಾಡುವ ಹಕ್ಕು ಮಾತ್ರ ಇದ್ದು ಆದ್ದರಿಂದ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಎಲ್ಲಾ ತಲೆಕೆಳಗಾಯಿತು. ಮತದಾರ ತನ್ನ ಆಲೋಚನಾ ಶಕ್ತಿಯನ್ನು ಕಳೆದುಕೊಂಡ. ದೇಶ ಮತ್ತು ತನ್ನ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಮತದಾರ ಈಗ ಮೋದಿ, ಅವರ ಪೊಳ್ಳು ಘೋಷಣೆಗೆ ಬಲಿಯಾಗುತ್ತಿದ್ದಾನೆ. ಸ್ವಂತಿಕೆಯ ಗುಣ ಏಕೆ ಕಳೆದುಕೊಂಡ ಎಲ್ಲದರ ಕುರಿತು ಗಂಭೀರವಾಗಿ ವಿಚಾರ ಮಾಡಬೇಕೆಂದು ಮತದಾರರಲ್ಲಿ ವಿನಂತಿಮಾಡಿಕೊಳ್ಳುತ್ತೇನೆ. ಆವೇಶಕ್ಕೆ ಎಡೆಮಾಡದೆ ಮತದಾರ ದೇಶದ ಪರಿಸ್ಥಿತಿಯ ಬಗೆಗೆ ಗಮನ ಕೊಡಬೇಕು. ಅಬ್ಬರದ ಪ್ರಚಾರ ಭಾಷಣಗಳು, ಪೊಳ್ಳು ಘೋಷಣೆಗಳು, ಯುದ್ಧದ ಮಾತನಾಡಿ ತನ್ನಿಂದಲೇ ಈ ದೇಶದ ರಕ್ಷಣೆ ಸಾಧ್ಯ, ಹಿಂದಿನವರು ಏನೂ ಮಾಡದೆ ನಿಷ್ಕ್ರೀಯರಾಗಿದ್ದರು ನಾನು ದೇವದೂತ ಅವತರಿಸಿ ಬಂದಿದ್ದೇನೆ ಎಂಬ ರೀತಿಯಲ್ಲಿ ಮೋದಿಯವರು ಮಾತನಾಡುತ್ತಾರೆ. ಹಿಂದೆ ಸರ್ಕಾರ ನಡೆಸಿದವರು ಪಾಕಿಸ್ತಾನದ ಮೇಲೆ 2 ಸಾರಿ ಯುದ್ಧದಲ್ಲಿ ಗೆದ್ದಿದ್ದಾರೆ ಎಂಬುದನ್ನು ಮೋದಿ ತಿಳಿಯಬೇಕು. ನೆಹರು ಕಾಲದಲ್ಲಿ ಚೀನೀಯರು ಭಾರತ ಭಾಯಿ ಭಾಯಿ ಎಂದು ಸ್ಲೋಗನ್ ಹಾಕುತ್ತ ಏಮಾರಿಸಿ ಭಾರತದ ಮೇಲೆ ಏಕಾಏಕಿ ಯುದ್ಧ ಹೂಡಿದರು. ಚೀನೀಯರು ನಂಬಿಕೆದ್ರೋಹಿಗಳು ಎಂಬುದನ್ನು ಸಾಬೀತುಮಾಡಿಕೊಟ್ಟರು. ಯುದ್ಧದ ಸುಳಿವು ಕೂಡ ಕೊಡದೆ ಹಠಾತ್ತಾಗಿ ಮೇಲೆ ಏರಗಿದರು. ಭಾರತೀಯ ಸೈನ್ಯ ಯುದ್ಧದ ಮೂಡಿನಲ್ಲೇ ಇರಲಿಲ್ಲ. ಆದರೆ ಮೋದಿಯವರು, ಜವಾಹರ್‌ಲಾಲ್‌ರನ್ನು ಹಂಗಿಸಲು ಚೈನಾದ ವಿಚಾರ ಪ್ರಸ್ತಾಪ ಮಾಡುತ್ತಾರೆ. ಯಾವ ಸರ್ಕಾರ ಬರಲಿ ದೇಶ ರಕ್ಷಣೆ ಮಾಡಬೇಕಾದದ್ದು ಅವರ ಕರ್ತವ್ಯ. ಅದನ್ನು ಅವರು ಮಾಡೇ ಮಾಡುತ್ತಾರೆ. ಭಾರತ ಸೈನ್ಯವನ್ನು ಮೊದಲ ಬಾರಿಗೆ ಮೋದಿ ಬಂದು ಸಂಘಟಿಸಲಿಲ್ಲ ಭಾರತೀಯ ಸೈನ್ಯ ಮೊದಲಿನಿಂದಲೂ ಬಲಿಷ್ಠವಾಗಿದೆ. ಸುಸಂಘಟಿತವಾಗಿದೆ. ಇದನ್ನು ನಮ್ಮ ಮತದಾರರು ತಿಳಿಯಬೇಕು. ಆವೇಶ ತೋರುವವರಿಗೆ ನಮಗೂ ಭಾರತೀಯ ಸೈನ್ಯದ ಬಲದ ಬಗೆಗೆ ಅರಿವಿದೆ, ನೀವು ಉತ್ಪ್ರೇಕ್ಷೆ ಮಾಡಿ ಸುಳ್ಳು ಪ್ರಚಾರ ಮಾಡಬೇಡಿ ಎಂದು ಖಡಕ್ಕಾಗಿ ಹೇಳಬೇಕು.

ಮೋದಿಯವರು ಅಧಿಕಾರಕ್ಕೆ ಬಂದು 6 ವರ್ಷ ಆಯಿತು. ಈ 6 ವರ್ಷದಲ್ಲಿ ಏನೇನು ನಡೆಯಿತು ಎಂಬುದನ್ನು ಮತದಾರರು ಗಮನಿಸಬೇಕು. 1000, 500ರೂಗಳ ಹಳೇ ನೋಟುನ್ನು ರದ್ದು ಮಾಡಿದ್ದರಿಂದ ಕಪ್ಪು ಹಣ ಹೊರಬರಲಿಲ್ಲ, ಭ್ರಷ್ಟಾಚಾರ ಕಡಿಮೆಯಾಗಲಿಲ್ಲ. ಅದರ ಬದಲು ಬ್ಯಾಂಕ್ ಅಧಿಕಾರಿಗಳು, ರಾಜಕಾರಣಿಗಳು ಕೂಡಿಕೊಂಡು ಲಕ್ಷಾಂತರ ಕಪ್ಪುಹಣವನ್ನೆಲ್ಲ ಬಿಳೀದು ಮಾಡಿಕೊಂಡರು. ಪಟ್ಟಭದ್ರರ ಹಿತಕಾಯ್ದರು.

ಮೋದಿಯ ನೋಟು ಅಮಾನ್ಯೀಕರಣದ ಅಮಾನವೀಯತೆ

ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಓಟು
ಕಿತ್ತುಕೊಂಡರು. ಈಗಲಾದರೂ ಯುವ ಮತದಾರರು ಎಚ್ಚೆತ್ತುಕೊಳ್ಳಬೇಡವೆ?

109 ರೈಲು ಮಾರ್ಗಗಳನ್ನು ಖಾಸಗಿಯವರಿಗೆ ವಹಿಸುವ, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಹರಾಜು ಮಾಡುವ ಸರ್ಕಾರದ ಷೇರುಗಳನ್ನು ಮಾರಿಹಾಕುತ್ತ ಇಂತಹ ಎಷ್ಟೋ ಅವಿವೇಕದ ಕೆಲಸಗಳನ್ನು ಮೋದಿ ಕೈಗೆತ್ತಿಕೊಂಡಿದ್ದಾರೆ. ದೊಡ್ಡ ಬಹುಮತ ಇದೆಯೆಂದು ಜನದ್ರೋಹಿ ಕೆಲಸಗಳನ್ನು ಎಗ್ಗಿಲ್ಲದೆ ಮಾಡುತ್ತಿದ್ದಾರೆ. ಕೊರೊನಾದಿಂದ ಜನ ಒಂದೇಸಮನೆ ಸಾಯುತ್ತಿದ್ದರೆ, ಜನಪರ ಕಾಯ್ದೆಗಳಿಗೆ ತಮಗೆ ಬೇಕಾದಂತೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸುವುದರಲ್ಲಿ ಮೋದಿ ಮಗ್ನರಾಗಿದ್ದಾರೆ. ಇದನ್ನು ಪ್ರಶ್ನಿಸಿದರೆ ಅಂಥವರ ಧ್ವನಿಯನ್ನು ಅಡಗಿಸಲಾಗುತ್ತದೆ.

ಕಾಶ್ಮೀರಕ್ಕೆ ಸಂಬಂಧಪಟ್ಟ 371ನೇ ವಿಧಿಯನ್ನು ಸಂವಿಧಾನ ಬದಲಾಯಿಸಿದೆ ರದ್ದುಗೊಳಿಸಲಾಗಿದೆ. ಕಾಶ್ಮೀರದ ಜನತೆಯಲ್ಲಿ ಈ ವಿಚಾರ ಪ್ರಸ್ತಾಪಿಸದೆ ಸರ್ವಾಧಿಕಾರಿ ಮನೋಭಾವದಿಂದ ಈ ವಿಧಿಯನ್ನು ರದ್ದು ಮಾಡಲಾಗಿದೆ. ವಿಶ್ವವಿದ್ಯಾಲಯಗಳ ಕುಲಪತಿಗಳನ್ನಾಗಿ ಹಿಂದುತ್ವ ಪ್ರತಿಪಾದಕರನ್ನೇ ನೇಮಿಸಲಾಗುತ್ತಿದೆ. ನಾಯಕರನ್ನು ಪ್ರಶ್ನಿಸಬಾರದು ಅವರು ಹೇಳಿದಂತೆ ಕೇಳಿಕೊಂಡಿರಬೇಕು ಎಂದು ಆರ್‌ಎಸ್‌ಎಸ್ ಸಿದ್ಧಾಂತ ಹೇಳುತ್ತದೆ. ಅದನ್ನೇ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೂ ಅನ್ವಯಿಸುವ ಕೆಲಸ ಆರಂಭವಾಗಿದೆ. ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನದ ಮೇಲೆ ದಾಳಿ ನಡೆಸಿ ಪೌರತ್ವ(ತಿದ್ದುಪಡಿ) ಶಾಸನವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದೆ. ಇದಕ್ಕೆ ಸಾಕಷ್ಟು ಪ್ರತಿಭಟನೆ ನಡೆದಿದೆ. ವೈಚಾರಿಕ ಚಿಂತನೆ ಮಾಡುವವರ ಮೇಲೆ ದಾಳಿ ನಡೆಸಲಾಗಿದೆ. ಈ 6 ವರ್ಷಗಳಲ್ಲಿ 200 ಪತ್ರಕರ್ತರ ಮೇಲೆ ದಾಳಿ ನಡೆದಿದೆ. ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಯಾವುದರ ವಿಚಾರಣೆಯೂ ಆಗಿಲ್ಲ. ಇದೆಲ್ಲವನ್ನೂ ಮತದಾರರು ಪ್ರಶ್ನಿಸದಿದ್ದಲ್ಲಿ ಮುಂದೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ.

  • ಎಚ್.ಎಸ್ ದೊರೆಸ್ವಾಮಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಿಂತಕರು.

ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...