Homeಮುಖಪುಟನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

- Advertisement -
- Advertisement -

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ಚೌಧರಿ ಸಂಸತ್ತಿನ ಮೊದಲ ದಿನದ ಅಧಿವೇಶನದಲ್ಲಿ ಹೇಳಿದ್ದು, ವಿಶೇಷ ಅಧಿವೇಶನದ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇವೆ ಮತ್ತು ಅಧಿವೇಶನ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆಯಲಾಗುತ್ತಿದೆ ಆದರೆ ಎಂಟು ಮಸೂದೆಗಳನ್ನು ಚರ್ಚಿಸಲು ಪಟ್ಟಿಮಾಡಲಾಗಿದೆ. ಇದು ವಿಶೇಷ ಅಧಿವೇಶನವೋ ಅಥವಾ ಸಾಮಾನ್ಯವೋ ನಮಗೆ ಅರ್ಥವಾಗುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಶೂನ್ಯ ವೇಳೆಯಿಲ್ಲ, ಪ್ರಶ್ನೋತ್ತರ ವೇಳೆಯಿಲ್ಲ. ಇದು ಯಾವ ರೀತಿಯ ಅಧಿವೇಶನ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಸದನದಲ್ಲಿ ನೆಹರು ಬಗ್ಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸದನದಲ್ಲಿ ತಮ್ಮ ಭಾಷಣದ ವೇಳೆ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಹೇಗೆ ಗಂಟೆ ಬಾರಿಸುತ್ತಿದ್ದರು ಎಂಬುದನ್ನು ಚೌಧರಿ ನೆನಪಿಸಿಕೊಂಡರು. ಭಾರತ-ಪಾಕಿಸ್ತಾನ ವಿಭಜನೆ, ಬಡತನ ಮತ್ತು ಇತರ ಸವಾಲುಗಳಿಂದ ದೇಶವು ತತ್ತರಿಸುತ್ತಿರುವ ಸಮಯದಲ್ಲಿ ಭಾರತಕ್ಕೆ ನೆಹರೂ ಅವರ ಕೊಡುಗೆಯನ್ನು ಅವರು  ನೆನಪಿಸಿಕೊಂಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವವು ಹಲವು ಸದ್ಗುಣಗಳನ್ನು ಬಯಸುತ್ತದೆ ಎಂದು ಪಂಡಿತ್ ನೆಹರು ಹೇಳಿದ್ದರು.  ಪಂಡಿತ್ ನೆಹರು ಸಂಸತ್ತಿನಲ್ಲಿ ಭಾರಿ ಬಹುಮತವನ್ನು ಪಡೆದಿದ್ದರೂ, ವಿರೋಧ ಪಕ್ಷದ ಧ್ವನಿಯನ್ನು ಆಲಿಸುವಲ್ಲಿ ಅವರು ದಣಿವರಿಯಲಿಲ್ಲ. ಪ್ರಶ್ನೆಗಳಿಗೆ ಉತ್ತರಿಸುವಾಗ ಎಂದಿಗೂ ಅಪಹಾಸ್ಯ ಅಥವಾ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಸಂಸತ್ತಿನಲ್ಲಿ ಭಾಷಣ ಮಾಡುವಾಗ ಜವಾಹರಲಾಲ್ ನೆಹರು ಅವರು ತಮ್ಮ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಬೆಲ್ ಕೂಡ ಬಾರಿಸುತ್ತಿದ್ದರು ಎಂದು ಚೌದರಿ ಅವರು ತಮ್ಮ ಮಾತಿನಲ್ಲಿ ನೆನಪಿಸಿಕೊಂಡಿದ್ದಾರೆ.

ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರು ಸಂಸದೀಯ ಪ್ರಜಾಪ್ರಭುತ್ವವು ಅನೇಕ ಸದ್ಗುಣಗಳನ್ನು ಬಯಸುತ್ತದೆ, ಅದರಲ್ಲಿ ಸಾಮರ್ಥ್ಯ, ಕೆಲಸ ಮಾಡುವ ನಿರ್ದಿಷ್ಟ ಶ್ರದ್ಧೆ  ಮತ್ತು ಸ್ವಯಂ-ಶಿಸ್ತು ಮತ್ತು ಸಂಯಮವನ್ನು ಹೇಳಿದ್ದರು ಎಂದು ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿಗಳ ಆಡಳಿತದಲ್ಲಿ ಭಾರತದ ಪರಮಾಣು ಶಕ್ತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪನೆಯ ಬಗ್ಗೆ ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಸದನ ನೆಹರೂ ಅವರ ಕೊಡುಗೆಯನ್ನು ಚರ್ಚಿಸಲಾಗಿದೆ ಮತ್ತು ಶ್ಲಾಘಿಸಲಾಗಿದೆ ಎಂಬುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಪ್ರಧಾನಿ ನೆಹರು ಅವರು ಕಠಿಣ ಸಮಯದಲ್ಲಿ ಭಾರತವನ್ನು ಮುನ್ನಡೆಸಿದರು ಮತ್ತು ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಅವರು ಹೇಳಿದ್ದಾರೆ.

ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಕಟ್ಟಡದ ಮೌಲ್ಯಗಳು ಮತ್ತು ಪಾಠಗಳನ್ನು ಮರೆಯಬಾರದು ಎಂದು ಚೌಧರಿ ಹೇಳಿದರು. ನಮ್ಮ ಹಳೆಯ ಕಟ್ಟಡಕ್ಕೆ ವಿದಾಯ ಹೇಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇಂದು ಈ ಸಂಸತ್ ಕಟ್ಟಡದಿಂದ ಹೊರಬರುವುದು ಎಂಬುವುದು ನಮಗೆಲ್ಲರಿಗೂ ಇದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಅಧಿಕಾರಿಗಳ ನೇಮಕ ಸಂಬಂಧಿತ ಮಸೂದೆ ಕೈಬಿಟ್ಟ ಕೇಂದ್ರ: ಪ್ರತಿಪಕ್ಷಗಳ ಪ್ರತಿಭಟನೆಗೆ ಹೆದರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...