Homeಮುಖಪುಟನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

- Advertisement -
- Advertisement -

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ಚೌಧರಿ ಸಂಸತ್ತಿನ ಮೊದಲ ದಿನದ ಅಧಿವೇಶನದಲ್ಲಿ ಹೇಳಿದ್ದು, ವಿಶೇಷ ಅಧಿವೇಶನದ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇವೆ ಮತ್ತು ಅಧಿವೇಶನ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆಯಲಾಗುತ್ತಿದೆ ಆದರೆ ಎಂಟು ಮಸೂದೆಗಳನ್ನು ಚರ್ಚಿಸಲು ಪಟ್ಟಿಮಾಡಲಾಗಿದೆ. ಇದು ವಿಶೇಷ ಅಧಿವೇಶನವೋ ಅಥವಾ ಸಾಮಾನ್ಯವೋ ನಮಗೆ ಅರ್ಥವಾಗುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಶೂನ್ಯ ವೇಳೆಯಿಲ್ಲ, ಪ್ರಶ್ನೋತ್ತರ ವೇಳೆಯಿಲ್ಲ. ಇದು ಯಾವ ರೀತಿಯ ಅಧಿವೇಶನ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಸದನದಲ್ಲಿ ನೆಹರು ಬಗ್ಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸದನದಲ್ಲಿ ತಮ್ಮ ಭಾಷಣದ ವೇಳೆ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಹೇಗೆ ಗಂಟೆ ಬಾರಿಸುತ್ತಿದ್ದರು ಎಂಬುದನ್ನು ಚೌಧರಿ ನೆನಪಿಸಿಕೊಂಡರು. ಭಾರತ-ಪಾಕಿಸ್ತಾನ ವಿಭಜನೆ, ಬಡತನ ಮತ್ತು ಇತರ ಸವಾಲುಗಳಿಂದ ದೇಶವು ತತ್ತರಿಸುತ್ತಿರುವ ಸಮಯದಲ್ಲಿ ಭಾರತಕ್ಕೆ ನೆಹರೂ ಅವರ ಕೊಡುಗೆಯನ್ನು ಅವರು  ನೆನಪಿಸಿಕೊಂಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವವು ಹಲವು ಸದ್ಗುಣಗಳನ್ನು ಬಯಸುತ್ತದೆ ಎಂದು ಪಂಡಿತ್ ನೆಹರು ಹೇಳಿದ್ದರು.  ಪಂಡಿತ್ ನೆಹರು ಸಂಸತ್ತಿನಲ್ಲಿ ಭಾರಿ ಬಹುಮತವನ್ನು ಪಡೆದಿದ್ದರೂ, ವಿರೋಧ ಪಕ್ಷದ ಧ್ವನಿಯನ್ನು ಆಲಿಸುವಲ್ಲಿ ಅವರು ದಣಿವರಿಯಲಿಲ್ಲ. ಪ್ರಶ್ನೆಗಳಿಗೆ ಉತ್ತರಿಸುವಾಗ ಎಂದಿಗೂ ಅಪಹಾಸ್ಯ ಅಥವಾ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಸಂಸತ್ತಿನಲ್ಲಿ ಭಾಷಣ ಮಾಡುವಾಗ ಜವಾಹರಲಾಲ್ ನೆಹರು ಅವರು ತಮ್ಮ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಬೆಲ್ ಕೂಡ ಬಾರಿಸುತ್ತಿದ್ದರು ಎಂದು ಚೌದರಿ ಅವರು ತಮ್ಮ ಮಾತಿನಲ್ಲಿ ನೆನಪಿಸಿಕೊಂಡಿದ್ದಾರೆ.

ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರು ಸಂಸದೀಯ ಪ್ರಜಾಪ್ರಭುತ್ವವು ಅನೇಕ ಸದ್ಗುಣಗಳನ್ನು ಬಯಸುತ್ತದೆ, ಅದರಲ್ಲಿ ಸಾಮರ್ಥ್ಯ, ಕೆಲಸ ಮಾಡುವ ನಿರ್ದಿಷ್ಟ ಶ್ರದ್ಧೆ  ಮತ್ತು ಸ್ವಯಂ-ಶಿಸ್ತು ಮತ್ತು ಸಂಯಮವನ್ನು ಹೇಳಿದ್ದರು ಎಂದು ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿಗಳ ಆಡಳಿತದಲ್ಲಿ ಭಾರತದ ಪರಮಾಣು ಶಕ್ತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪನೆಯ ಬಗ್ಗೆ ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಸದನ ನೆಹರೂ ಅವರ ಕೊಡುಗೆಯನ್ನು ಚರ್ಚಿಸಲಾಗಿದೆ ಮತ್ತು ಶ್ಲಾಘಿಸಲಾಗಿದೆ ಎಂಬುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಪ್ರಧಾನಿ ನೆಹರು ಅವರು ಕಠಿಣ ಸಮಯದಲ್ಲಿ ಭಾರತವನ್ನು ಮುನ್ನಡೆಸಿದರು ಮತ್ತು ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಅವರು ಹೇಳಿದ್ದಾರೆ.

ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಕಟ್ಟಡದ ಮೌಲ್ಯಗಳು ಮತ್ತು ಪಾಠಗಳನ್ನು ಮರೆಯಬಾರದು ಎಂದು ಚೌಧರಿ ಹೇಳಿದರು. ನಮ್ಮ ಹಳೆಯ ಕಟ್ಟಡಕ್ಕೆ ವಿದಾಯ ಹೇಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇಂದು ಈ ಸಂಸತ್ ಕಟ್ಟಡದಿಂದ ಹೊರಬರುವುದು ಎಂಬುವುದು ನಮಗೆಲ್ಲರಿಗೂ ಇದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಅಧಿಕಾರಿಗಳ ನೇಮಕ ಸಂಬಂಧಿತ ಮಸೂದೆ ಕೈಬಿಟ್ಟ ಕೇಂದ್ರ: ಪ್ರತಿಪಕ್ಷಗಳ ಪ್ರತಿಭಟನೆಗೆ ಹೆದರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...