Homeಮುಖಪುಟನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

- Advertisement -
- Advertisement -

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ಚೌಧರಿ ಸಂಸತ್ತಿನ ಮೊದಲ ದಿನದ ಅಧಿವೇಶನದಲ್ಲಿ ಹೇಳಿದ್ದು, ವಿಶೇಷ ಅಧಿವೇಶನದ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇವೆ ಮತ್ತು ಅಧಿವೇಶನ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆಯಲಾಗುತ್ತಿದೆ ಆದರೆ ಎಂಟು ಮಸೂದೆಗಳನ್ನು ಚರ್ಚಿಸಲು ಪಟ್ಟಿಮಾಡಲಾಗಿದೆ. ಇದು ವಿಶೇಷ ಅಧಿವೇಶನವೋ ಅಥವಾ ಸಾಮಾನ್ಯವೋ ನಮಗೆ ಅರ್ಥವಾಗುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಶೂನ್ಯ ವೇಳೆಯಿಲ್ಲ, ಪ್ರಶ್ನೋತ್ತರ ವೇಳೆಯಿಲ್ಲ. ಇದು ಯಾವ ರೀತಿಯ ಅಧಿವೇಶನ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಸದನದಲ್ಲಿ ನೆಹರು ಬಗ್ಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸದನದಲ್ಲಿ ತಮ್ಮ ಭಾಷಣದ ವೇಳೆ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಹೇಗೆ ಗಂಟೆ ಬಾರಿಸುತ್ತಿದ್ದರು ಎಂಬುದನ್ನು ಚೌಧರಿ ನೆನಪಿಸಿಕೊಂಡರು. ಭಾರತ-ಪಾಕಿಸ್ತಾನ ವಿಭಜನೆ, ಬಡತನ ಮತ್ತು ಇತರ ಸವಾಲುಗಳಿಂದ ದೇಶವು ತತ್ತರಿಸುತ್ತಿರುವ ಸಮಯದಲ್ಲಿ ಭಾರತಕ್ಕೆ ನೆಹರೂ ಅವರ ಕೊಡುಗೆಯನ್ನು ಅವರು  ನೆನಪಿಸಿಕೊಂಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವವು ಹಲವು ಸದ್ಗುಣಗಳನ್ನು ಬಯಸುತ್ತದೆ ಎಂದು ಪಂಡಿತ್ ನೆಹರು ಹೇಳಿದ್ದರು.  ಪಂಡಿತ್ ನೆಹರು ಸಂಸತ್ತಿನಲ್ಲಿ ಭಾರಿ ಬಹುಮತವನ್ನು ಪಡೆದಿದ್ದರೂ, ವಿರೋಧ ಪಕ್ಷದ ಧ್ವನಿಯನ್ನು ಆಲಿಸುವಲ್ಲಿ ಅವರು ದಣಿವರಿಯಲಿಲ್ಲ. ಪ್ರಶ್ನೆಗಳಿಗೆ ಉತ್ತರಿಸುವಾಗ ಎಂದಿಗೂ ಅಪಹಾಸ್ಯ ಅಥವಾ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಸಂಸತ್ತಿನಲ್ಲಿ ಭಾಷಣ ಮಾಡುವಾಗ ಜವಾಹರಲಾಲ್ ನೆಹರು ಅವರು ತಮ್ಮ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಬೆಲ್ ಕೂಡ ಬಾರಿಸುತ್ತಿದ್ದರು ಎಂದು ಚೌದರಿ ಅವರು ತಮ್ಮ ಮಾತಿನಲ್ಲಿ ನೆನಪಿಸಿಕೊಂಡಿದ್ದಾರೆ.

ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರು ಸಂಸದೀಯ ಪ್ರಜಾಪ್ರಭುತ್ವವು ಅನೇಕ ಸದ್ಗುಣಗಳನ್ನು ಬಯಸುತ್ತದೆ, ಅದರಲ್ಲಿ ಸಾಮರ್ಥ್ಯ, ಕೆಲಸ ಮಾಡುವ ನಿರ್ದಿಷ್ಟ ಶ್ರದ್ಧೆ  ಮತ್ತು ಸ್ವಯಂ-ಶಿಸ್ತು ಮತ್ತು ಸಂಯಮವನ್ನು ಹೇಳಿದ್ದರು ಎಂದು ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿಗಳ ಆಡಳಿತದಲ್ಲಿ ಭಾರತದ ಪರಮಾಣು ಶಕ್ತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪನೆಯ ಬಗ್ಗೆ ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಸದನ ನೆಹರೂ ಅವರ ಕೊಡುಗೆಯನ್ನು ಚರ್ಚಿಸಲಾಗಿದೆ ಮತ್ತು ಶ್ಲಾಘಿಸಲಾಗಿದೆ ಎಂಬುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಪ್ರಧಾನಿ ನೆಹರು ಅವರು ಕಠಿಣ ಸಮಯದಲ್ಲಿ ಭಾರತವನ್ನು ಮುನ್ನಡೆಸಿದರು ಮತ್ತು ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಅವರು ಹೇಳಿದ್ದಾರೆ.

ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಕಟ್ಟಡದ ಮೌಲ್ಯಗಳು ಮತ್ತು ಪಾಠಗಳನ್ನು ಮರೆಯಬಾರದು ಎಂದು ಚೌಧರಿ ಹೇಳಿದರು. ನಮ್ಮ ಹಳೆಯ ಕಟ್ಟಡಕ್ಕೆ ವಿದಾಯ ಹೇಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇಂದು ಈ ಸಂಸತ್ ಕಟ್ಟಡದಿಂದ ಹೊರಬರುವುದು ಎಂಬುವುದು ನಮಗೆಲ್ಲರಿಗೂ ಇದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಅಧಿಕಾರಿಗಳ ನೇಮಕ ಸಂಬಂಧಿತ ಮಸೂದೆ ಕೈಬಿಟ್ಟ ಕೇಂದ್ರ: ಪ್ರತಿಪಕ್ಷಗಳ ಪ್ರತಿಭಟನೆಗೆ ಹೆದರಿದ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...