Homeಮುಖಪುಟನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

- Advertisement -
- Advertisement -

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ಚೌಧರಿ ಸಂಸತ್ತಿನ ಮೊದಲ ದಿನದ ಅಧಿವೇಶನದಲ್ಲಿ ಹೇಳಿದ್ದು, ವಿಶೇಷ ಅಧಿವೇಶನದ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇವೆ ಮತ್ತು ಅಧಿವೇಶನ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆಯಲಾಗುತ್ತಿದೆ ಆದರೆ ಎಂಟು ಮಸೂದೆಗಳನ್ನು ಚರ್ಚಿಸಲು ಪಟ್ಟಿಮಾಡಲಾಗಿದೆ. ಇದು ವಿಶೇಷ ಅಧಿವೇಶನವೋ ಅಥವಾ ಸಾಮಾನ್ಯವೋ ನಮಗೆ ಅರ್ಥವಾಗುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಶೂನ್ಯ ವೇಳೆಯಿಲ್ಲ, ಪ್ರಶ್ನೋತ್ತರ ವೇಳೆಯಿಲ್ಲ. ಇದು ಯಾವ ರೀತಿಯ ಅಧಿವೇಶನ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಸದನದಲ್ಲಿ ನೆಹರು ಬಗ್ಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸದನದಲ್ಲಿ ತಮ್ಮ ಭಾಷಣದ ವೇಳೆ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಹೇಗೆ ಗಂಟೆ ಬಾರಿಸುತ್ತಿದ್ದರು ಎಂಬುದನ್ನು ಚೌಧರಿ ನೆನಪಿಸಿಕೊಂಡರು. ಭಾರತ-ಪಾಕಿಸ್ತಾನ ವಿಭಜನೆ, ಬಡತನ ಮತ್ತು ಇತರ ಸವಾಲುಗಳಿಂದ ದೇಶವು ತತ್ತರಿಸುತ್ತಿರುವ ಸಮಯದಲ್ಲಿ ಭಾರತಕ್ಕೆ ನೆಹರೂ ಅವರ ಕೊಡುಗೆಯನ್ನು ಅವರು  ನೆನಪಿಸಿಕೊಂಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವವು ಹಲವು ಸದ್ಗುಣಗಳನ್ನು ಬಯಸುತ್ತದೆ ಎಂದು ಪಂಡಿತ್ ನೆಹರು ಹೇಳಿದ್ದರು.  ಪಂಡಿತ್ ನೆಹರು ಸಂಸತ್ತಿನಲ್ಲಿ ಭಾರಿ ಬಹುಮತವನ್ನು ಪಡೆದಿದ್ದರೂ, ವಿರೋಧ ಪಕ್ಷದ ಧ್ವನಿಯನ್ನು ಆಲಿಸುವಲ್ಲಿ ಅವರು ದಣಿವರಿಯಲಿಲ್ಲ. ಪ್ರಶ್ನೆಗಳಿಗೆ ಉತ್ತರಿಸುವಾಗ ಎಂದಿಗೂ ಅಪಹಾಸ್ಯ ಅಥವಾ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಸಂಸತ್ತಿನಲ್ಲಿ ಭಾಷಣ ಮಾಡುವಾಗ ಜವಾಹರಲಾಲ್ ನೆಹರು ಅವರು ತಮ್ಮ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಬೆಲ್ ಕೂಡ ಬಾರಿಸುತ್ತಿದ್ದರು ಎಂದು ಚೌದರಿ ಅವರು ತಮ್ಮ ಮಾತಿನಲ್ಲಿ ನೆನಪಿಸಿಕೊಂಡಿದ್ದಾರೆ.

ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರು ಸಂಸದೀಯ ಪ್ರಜಾಪ್ರಭುತ್ವವು ಅನೇಕ ಸದ್ಗುಣಗಳನ್ನು ಬಯಸುತ್ತದೆ, ಅದರಲ್ಲಿ ಸಾಮರ್ಥ್ಯ, ಕೆಲಸ ಮಾಡುವ ನಿರ್ದಿಷ್ಟ ಶ್ರದ್ಧೆ  ಮತ್ತು ಸ್ವಯಂ-ಶಿಸ್ತು ಮತ್ತು ಸಂಯಮವನ್ನು ಹೇಳಿದ್ದರು ಎಂದು ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿಗಳ ಆಡಳಿತದಲ್ಲಿ ಭಾರತದ ಪರಮಾಣು ಶಕ್ತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪನೆಯ ಬಗ್ಗೆ ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಸದನ ನೆಹರೂ ಅವರ ಕೊಡುಗೆಯನ್ನು ಚರ್ಚಿಸಲಾಗಿದೆ ಮತ್ತು ಶ್ಲಾಘಿಸಲಾಗಿದೆ ಎಂಬುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಪ್ರಧಾನಿ ನೆಹರು ಅವರು ಕಠಿಣ ಸಮಯದಲ್ಲಿ ಭಾರತವನ್ನು ಮುನ್ನಡೆಸಿದರು ಮತ್ತು ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಅವರು ಹೇಳಿದ್ದಾರೆ.

ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಕಟ್ಟಡದ ಮೌಲ್ಯಗಳು ಮತ್ತು ಪಾಠಗಳನ್ನು ಮರೆಯಬಾರದು ಎಂದು ಚೌಧರಿ ಹೇಳಿದರು. ನಮ್ಮ ಹಳೆಯ ಕಟ್ಟಡಕ್ಕೆ ವಿದಾಯ ಹೇಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇಂದು ಈ ಸಂಸತ್ ಕಟ್ಟಡದಿಂದ ಹೊರಬರುವುದು ಎಂಬುವುದು ನಮಗೆಲ್ಲರಿಗೂ ಇದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಅಧಿಕಾರಿಗಳ ನೇಮಕ ಸಂಬಂಧಿತ ಮಸೂದೆ ಕೈಬಿಟ್ಟ ಕೇಂದ್ರ: ಪ್ರತಿಪಕ್ಷಗಳ ಪ್ರತಿಭಟನೆಗೆ ಹೆದರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...