Homeಮುಖಪುಟನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

- Advertisement -
- Advertisement -

ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ಚೌಧರಿ ಸಂಸತ್ತಿನ ಮೊದಲ ದಿನದ ಅಧಿವೇಶನದಲ್ಲಿ ಹೇಳಿದ್ದು, ವಿಶೇಷ ಅಧಿವೇಶನದ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇವೆ ಮತ್ತು ಅಧಿವೇಶನ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ.

ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆಯಲಾಗುತ್ತಿದೆ ಆದರೆ ಎಂಟು ಮಸೂದೆಗಳನ್ನು ಚರ್ಚಿಸಲು ಪಟ್ಟಿಮಾಡಲಾಗಿದೆ. ಇದು ವಿಶೇಷ ಅಧಿವೇಶನವೋ ಅಥವಾ ಸಾಮಾನ್ಯವೋ ನಮಗೆ ಅರ್ಥವಾಗುತ್ತಿಲ್ಲ ಎಂದು ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಶೂನ್ಯ ವೇಳೆಯಿಲ್ಲ, ಪ್ರಶ್ನೋತ್ತರ ವೇಳೆಯಿಲ್ಲ. ಇದು ಯಾವ ರೀತಿಯ ಅಧಿವೇಶನ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದರು.

ಸದನದಲ್ಲಿ ನೆಹರು ಬಗ್ಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸದನದಲ್ಲಿ ತಮ್ಮ ಭಾಷಣದ ವೇಳೆ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಹೇಗೆ ಗಂಟೆ ಬಾರಿಸುತ್ತಿದ್ದರು ಎಂಬುದನ್ನು ಚೌಧರಿ ನೆನಪಿಸಿಕೊಂಡರು. ಭಾರತ-ಪಾಕಿಸ್ತಾನ ವಿಭಜನೆ, ಬಡತನ ಮತ್ತು ಇತರ ಸವಾಲುಗಳಿಂದ ದೇಶವು ತತ್ತರಿಸುತ್ತಿರುವ ಸಮಯದಲ್ಲಿ ಭಾರತಕ್ಕೆ ನೆಹರೂ ಅವರ ಕೊಡುಗೆಯನ್ನು ಅವರು  ನೆನಪಿಸಿಕೊಂಡಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವವು ಹಲವು ಸದ್ಗುಣಗಳನ್ನು ಬಯಸುತ್ತದೆ ಎಂದು ಪಂಡಿತ್ ನೆಹರು ಹೇಳಿದ್ದರು.  ಪಂಡಿತ್ ನೆಹರು ಸಂಸತ್ತಿನಲ್ಲಿ ಭಾರಿ ಬಹುಮತವನ್ನು ಪಡೆದಿದ್ದರೂ, ವಿರೋಧ ಪಕ್ಷದ ಧ್ವನಿಯನ್ನು ಆಲಿಸುವಲ್ಲಿ ಅವರು ದಣಿವರಿಯಲಿಲ್ಲ. ಪ್ರಶ್ನೆಗಳಿಗೆ ಉತ್ತರಿಸುವಾಗ ಎಂದಿಗೂ ಅಪಹಾಸ್ಯ ಅಥವಾ ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಸಂಸತ್ತಿನಲ್ಲಿ ಭಾಷಣ ಮಾಡುವಾಗ ಜವಾಹರಲಾಲ್ ನೆಹರು ಅವರು ತಮ್ಮ ಸಮಯದ ಮಿತಿಯನ್ನು ಮೀರಿದಾಗ ಸ್ಪೀಕರ್ ಬೆಲ್ ಕೂಡ ಬಾರಿಸುತ್ತಿದ್ದರು ಎಂದು ಚೌದರಿ ಅವರು ತಮ್ಮ ಮಾತಿನಲ್ಲಿ ನೆನಪಿಸಿಕೊಂಡಿದ್ದಾರೆ.

ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರು ಸಂಸದೀಯ ಪ್ರಜಾಪ್ರಭುತ್ವವು ಅನೇಕ ಸದ್ಗುಣಗಳನ್ನು ಬಯಸುತ್ತದೆ, ಅದರಲ್ಲಿ ಸಾಮರ್ಥ್ಯ, ಕೆಲಸ ಮಾಡುವ ನಿರ್ದಿಷ್ಟ ಶ್ರದ್ಧೆ  ಮತ್ತು ಸ್ವಯಂ-ಶಿಸ್ತು ಮತ್ತು ಸಂಯಮವನ್ನು ಹೇಳಿದ್ದರು ಎಂದು ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿಗಳ ಆಡಳಿತದಲ್ಲಿ ಭಾರತದ ಪರಮಾಣು ಶಕ್ತಿ ಆಯೋಗ ಮತ್ತು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪನೆಯ ಬಗ್ಗೆ ಚೌದರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ಸದನ ನೆಹರೂ ಅವರ ಕೊಡುಗೆಯನ್ನು ಚರ್ಚಿಸಲಾಗಿದೆ ಮತ್ತು ಶ್ಲಾಘಿಸಲಾಗಿದೆ ಎಂಬುವುದರಿಂದ ನನಗೆ ಸಂತೋಷವಾಗಿದೆ. ಮಾಜಿ ಪ್ರಧಾನಿ ನೆಹರು ಅವರು ಕಠಿಣ ಸಮಯದಲ್ಲಿ ಭಾರತವನ್ನು ಮುನ್ನಡೆಸಿದರು ಮತ್ತು ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು ಎಂದು ಅವರು ಹೇಳಿದ್ದಾರೆ.

ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಕಟ್ಟಡದ ಮೌಲ್ಯಗಳು ಮತ್ತು ಪಾಠಗಳನ್ನು ಮರೆಯಬಾರದು ಎಂದು ಚೌಧರಿ ಹೇಳಿದರು. ನಮ್ಮ ಹಳೆಯ ಕಟ್ಟಡಕ್ಕೆ ವಿದಾಯ ಹೇಳಲು ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಇಂದು ಈ ಸಂಸತ್ ಕಟ್ಟಡದಿಂದ ಹೊರಬರುವುದು ಎಂಬುವುದು ನಮಗೆಲ್ಲರಿಗೂ ಇದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿದೆ ಎಂದು ಅವರು ಹೇಳಿದರು.

ಇದನ್ನು ಓದಿ: ಚುನಾವಣಾ ಅಧಿಕಾರಿಗಳ ನೇಮಕ ಸಂಬಂಧಿತ ಮಸೂದೆ ಕೈಬಿಟ್ಟ ಕೇಂದ್ರ: ಪ್ರತಿಪಕ್ಷಗಳ ಪ್ರತಿಭಟನೆಗೆ ಹೆದರಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...