Homeಮುಖಪುಟಚರ್ಚ್‌ಗಳಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ ದ್ವೇಷವನ್ನು ಹುಟ್ಟಿಸುವುದರ ಜೊತೆಗೆ ಅದನ್ನು ಮತವಾಗಿ ಪರಿವರ್ತನೆಗೊಳಿಸುವುದು ಹಿಡನ್‌ ಅಜೆಂಡಾವಾಗಿತ್ತು. ಆದರೆ ಇದಕ್ಕೆ ಕ್ರಿಶ್ಚಿಯನ್‌ ಸಮುದಾಯ ಸೊಪ್ಪು ಹಾಕಿಲ್ಲ. ಇದೀಗ ಸ್ವತಃ ಸಿರೋ ಮಲಬಾರ್ ಚರ್ಚ್‌ನ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಹೇಳಿಕೆಯೊಂದನ್ನು ನೀಡಿದ್ದು, ಕೋಮು ಅಜೆಂಡಾಗಳ ಸಾಧನೆಗೆ ಕ್ರಿಶ್ಚಿಯನ್‌ ಮಹಿಳೆಯರನ್ನು ಬಳಕೆ ಮಾಡಬೇಡಿ ಎಂದು ಖಾರವಾಗಿ ಸಂದೇಶವನ್ನು ನೀಡಿದ್ದಾರೆ.

ದೇಶದ ಹಲವು ಕಡೆಗಳಲ್ಲಿ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ನರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಬ್ಬಾಳಿಕೆ ನಡೆಸುತ್ತಿದ್ದಾಗ ಮೌನವನ್ನು ಕಾಯ್ದುಕೊಂಡಿದ್ದ ಪ್ರಧಾನಿ ಮೋದಿ, ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಅದಾದ ಬಳಿಕ ಸಿರೋ ಮಲಬಾರ್ ಚರ್ಚ್ ಇಡುಕ್ಕಿ ಧರ್ಮಪ್ರಾಂತ್ಯದದಲ್ಲಿ ವಿವಾದಿತ ಸುಳ್ಳು ಪ್ರತಿಪಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನ ನಡೆದಿದೆ. ಕ್ರೈಸ್ತ ಮಹಿಳೆಯರಿಗೆ ಈ ಕೋಮುವಾದಿ ಅಜೆಂಡಾ ಹೊಂದಿರುವ ಸಿನಿಮಾ ಪ್ರದರ್ಶಿಸುವ ಮೂಲಕ ಅವರಲ್ಲಿ ಧ್ರವೀಕರಣ ಮನಸ್ಥತಿ ಉಂಟು ಮಾಡುವ ತಂತ್ರದ ಭಾಗ ಎಂದು ಆರೋಪಿಸಲಾಗಿದೆ.

ಕಣ್ಣೂರು ಜಿಲ್ಲೆಯ ಚೆಂಪೇರಿಯಲ್ಲಿ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ, ಕ್ರಿಶ್ಚಿಯನ್ನರಲ್ಲಿ ವಿಭಜನೆ ಮತ್ತು ಕೋಮುವಾದವನ್ನು ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಾರೆ. ಯುವಕರು “ಸಂಕುಚಿತ ಮನೋಭಾವ” ಹೊಂದಿರಬಾರದು. ಲವ್ ಜಿಹಾದ್‌ನಿಂದ ಮಹಿಳೆಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಗಳನ್ನು ಟೀಕಿಸಿದ ಅವರು, ಮುಸ್ಲಿಂ ಪುರುಷರು ಇತರ ಧರ್ಮಗಳ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎನ್ನುವುದು ಇಸ್ಲಾಮೋಫೋಬಿಕ್ ಪಿತೂರಿ ಸಿದ್ಧಾಂತ ಎಂದು ಹೇಳಿದ್ದಾರೆ.

ಕೆಲವರು ನಮ್ಮ ಹೆಣ್ಣುಮಕ್ಕಳ ರಕ್ಷಕರೆಂದು ಹೇಳುತ್ತಿದ್ದಾರೆ. ಆತ್ಮೀಯ ಯುವತಿಯರೇ, ನಾನು ನಿಮಗೆ ಹೇಳಲೇಬೇಕು, ಇಲ್ಲಿನ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಇದ್ದಾರೆ. ಹಾಗಾಗಿ ಪ್ರೀತಿಯ ಹೆಸರಿನಲ್ಲಿ ಯಾರೂ ಅವರನ್ನು ವಂಚಿಸಲು ಸಾಧ್ಯವಿಲ್ಲ. ನಾವು ಪ್ರೀತಿಯ ಕಥೆಯನ್ನು ಮಾತ್ರ ಹೇಳಬೇಕಾಗಿದೆ, ಕ್ರಿಶ್ಚಿಯನ್ನರಿಗೆ ಹಂಚಿಕೊಳ್ಳಲು ಒಂದೇ ಒಂದು ಕಥೆಯಿದೆ, ಅದು ಯೇಸುವಿನ ಕಥೆ, ನಮ್ಮ ನಡುವೆ ವಿಭಜನೆ ಮತ್ತು ಕೋಮುವಾದವನ್ನು ಬಿತ್ತಲು ಅನೇಕ ಜನರು ಇದ್ದಾರೆ ಎಂದು ನಾವು ಅರಿತುಕೊಳ್ಳಬೇಕು. ಯುವಕರು ಕ್ರೈಸ್ತನ ಮಿತಿಯಿಲ್ಲದ ಪ್ರೀತಿ ಮತ್ತು ಮಿತಿಯಿಲ್ಲದ ಮಾನವೀಯತೆಯ ವೈಭವವನ್ನು ಎಂದಿಗೂ ಮರೆಯಬಾರದು. ಯುವಕರು ಸಂಕುಚಿತವಾದರೆ, ಇಡೀ ದೇಶವು ಸಂಕುಚಿತತೆಯ ಕತ್ತಲೆಯಲ್ಲಿ ಬೀಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸಿರೋ ಮಲಬಾರ್ ಚರ್ಚ್‌ನ ಇಡುಕ್ಕಿ ಧರ್ಮಪ್ರಾಂತ್ಯವು ಕೇರಳ ಸ್ಟೋರಿಯನ್ನು ಪ್ರದರ್ಶಿಸುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು, ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಸುದೀಪ್ತೋ ಸೇನ್ ನಿರ್ದೇಶನದ ಕೇರಳ ಸ್ಟೋರಿ ಬಲಪಂಥೀಯ ಅಜೆಂಡಾವನ್ನು ಹೊಂದಿದ್ದು, ಅದರಲ್ಲಿ ಲವ್‌ ಜಿಹಾದ್‌, ಮತಾಂತರದ ಬಗ್ಗೆ ಸುಳ್ಳು ಪ್ರತಿಪಾದನೆಯನ್ನು ಮಾಡಲಾಗಿದೆ.

ತಲಶ್ಶೇರಿ ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕೆಲವು ಚರ್ಚ್‌ಗಳಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಪ್ರಚಾರ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು. ವಿವಾದದ ನಂತರ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಚಲನಚಿತ್ರಗಳನ್ನು ಪ್ರದರ್ಶಿಸುವುದನ್ನು ತಡೆಯುವುದಾಗಿ ಧರ್ಮಪ್ರಾಂತ್ಯ ಮಾಧ್ಯಮಗಳಿಗೆ ತಿಳಿಸಿದೆ. ಯಾವುದೇ ಕೋಮುವಾದಿಗಳು ನಮ್ಮ ಮಹಿಳೆಯರ ಹೆಸರು ಹೇಳಿ ಇಲ್ಲಿ ಕೋಮುವಾದ ಮಾಡುವ ಅಗತ್ಯವಿಲ್ಲ. ನಾವು ಇದನ್ನು ಇನ್ನು ಮುಂದೆ ಅನುಮತಿಸುವುದಿಲ್ಲ. ನಮ್ಮ ಯುವತಿಯರನ್ನು ಹೇಗೆ ರಕ್ಷಿಸಬೇಕು ಎಂದು ನಮ್ಮ ಸಮುದಾಯಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಚ್‌ಬಿಷಪ್ ಅವರು ಕೇರಳದ ಸಂಘಪರಿವಾರದ ಪರ ಕ್ರಿಶ್ಚಿಯನ್ ಸಂಘಟನೆಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ಮತ್ತು ಅಲಯನ್ಸ್ ಫಾರ್ ಸೋಶಿಯಲ್ ಆಕ್ಷನ್ (ಸಿಎಎಸ್‌ಎ)ನನ್ನು ಉದ್ದೇಶಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...