Homeಮುಖಪುಟಚರ್ಚ್‌ಗಳಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ ದ್ವೇಷವನ್ನು ಹುಟ್ಟಿಸುವುದರ ಜೊತೆಗೆ ಅದನ್ನು ಮತವಾಗಿ ಪರಿವರ್ತನೆಗೊಳಿಸುವುದು ಹಿಡನ್‌ ಅಜೆಂಡಾವಾಗಿತ್ತು. ಆದರೆ ಇದಕ್ಕೆ ಕ್ರಿಶ್ಚಿಯನ್‌ ಸಮುದಾಯ ಸೊಪ್ಪು ಹಾಕಿಲ್ಲ. ಇದೀಗ ಸ್ವತಃ ಸಿರೋ ಮಲಬಾರ್ ಚರ್ಚ್‌ನ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಹೇಳಿಕೆಯೊಂದನ್ನು ನೀಡಿದ್ದು, ಕೋಮು ಅಜೆಂಡಾಗಳ ಸಾಧನೆಗೆ ಕ್ರಿಶ್ಚಿಯನ್‌ ಮಹಿಳೆಯರನ್ನು ಬಳಕೆ ಮಾಡಬೇಡಿ ಎಂದು ಖಾರವಾಗಿ ಸಂದೇಶವನ್ನು ನೀಡಿದ್ದಾರೆ.

ದೇಶದ ಹಲವು ಕಡೆಗಳಲ್ಲಿ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ನರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಬ್ಬಾಳಿಕೆ ನಡೆಸುತ್ತಿದ್ದಾಗ ಮೌನವನ್ನು ಕಾಯ್ದುಕೊಂಡಿದ್ದ ಪ್ರಧಾನಿ ಮೋದಿ, ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಅದಾದ ಬಳಿಕ ಸಿರೋ ಮಲಬಾರ್ ಚರ್ಚ್ ಇಡುಕ್ಕಿ ಧರ್ಮಪ್ರಾಂತ್ಯದದಲ್ಲಿ ವಿವಾದಿತ ಸುಳ್ಳು ಪ್ರತಿಪಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನ ನಡೆದಿದೆ. ಕ್ರೈಸ್ತ ಮಹಿಳೆಯರಿಗೆ ಈ ಕೋಮುವಾದಿ ಅಜೆಂಡಾ ಹೊಂದಿರುವ ಸಿನಿಮಾ ಪ್ರದರ್ಶಿಸುವ ಮೂಲಕ ಅವರಲ್ಲಿ ಧ್ರವೀಕರಣ ಮನಸ್ಥತಿ ಉಂಟು ಮಾಡುವ ತಂತ್ರದ ಭಾಗ ಎಂದು ಆರೋಪಿಸಲಾಗಿದೆ.

ಕಣ್ಣೂರು ಜಿಲ್ಲೆಯ ಚೆಂಪೇರಿಯಲ್ಲಿ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ, ಕ್ರಿಶ್ಚಿಯನ್ನರಲ್ಲಿ ವಿಭಜನೆ ಮತ್ತು ಕೋಮುವಾದವನ್ನು ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಾರೆ. ಯುವಕರು “ಸಂಕುಚಿತ ಮನೋಭಾವ” ಹೊಂದಿರಬಾರದು. ಲವ್ ಜಿಹಾದ್‌ನಿಂದ ಮಹಿಳೆಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಗಳನ್ನು ಟೀಕಿಸಿದ ಅವರು, ಮುಸ್ಲಿಂ ಪುರುಷರು ಇತರ ಧರ್ಮಗಳ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎನ್ನುವುದು ಇಸ್ಲಾಮೋಫೋಬಿಕ್ ಪಿತೂರಿ ಸಿದ್ಧಾಂತ ಎಂದು ಹೇಳಿದ್ದಾರೆ.

ಕೆಲವರು ನಮ್ಮ ಹೆಣ್ಣುಮಕ್ಕಳ ರಕ್ಷಕರೆಂದು ಹೇಳುತ್ತಿದ್ದಾರೆ. ಆತ್ಮೀಯ ಯುವತಿಯರೇ, ನಾನು ನಿಮಗೆ ಹೇಳಲೇಬೇಕು, ಇಲ್ಲಿನ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಇದ್ದಾರೆ. ಹಾಗಾಗಿ ಪ್ರೀತಿಯ ಹೆಸರಿನಲ್ಲಿ ಯಾರೂ ಅವರನ್ನು ವಂಚಿಸಲು ಸಾಧ್ಯವಿಲ್ಲ. ನಾವು ಪ್ರೀತಿಯ ಕಥೆಯನ್ನು ಮಾತ್ರ ಹೇಳಬೇಕಾಗಿದೆ, ಕ್ರಿಶ್ಚಿಯನ್ನರಿಗೆ ಹಂಚಿಕೊಳ್ಳಲು ಒಂದೇ ಒಂದು ಕಥೆಯಿದೆ, ಅದು ಯೇಸುವಿನ ಕಥೆ, ನಮ್ಮ ನಡುವೆ ವಿಭಜನೆ ಮತ್ತು ಕೋಮುವಾದವನ್ನು ಬಿತ್ತಲು ಅನೇಕ ಜನರು ಇದ್ದಾರೆ ಎಂದು ನಾವು ಅರಿತುಕೊಳ್ಳಬೇಕು. ಯುವಕರು ಕ್ರೈಸ್ತನ ಮಿತಿಯಿಲ್ಲದ ಪ್ರೀತಿ ಮತ್ತು ಮಿತಿಯಿಲ್ಲದ ಮಾನವೀಯತೆಯ ವೈಭವವನ್ನು ಎಂದಿಗೂ ಮರೆಯಬಾರದು. ಯುವಕರು ಸಂಕುಚಿತವಾದರೆ, ಇಡೀ ದೇಶವು ಸಂಕುಚಿತತೆಯ ಕತ್ತಲೆಯಲ್ಲಿ ಬೀಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸಿರೋ ಮಲಬಾರ್ ಚರ್ಚ್‌ನ ಇಡುಕ್ಕಿ ಧರ್ಮಪ್ರಾಂತ್ಯವು ಕೇರಳ ಸ್ಟೋರಿಯನ್ನು ಪ್ರದರ್ಶಿಸುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು, ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಸುದೀಪ್ತೋ ಸೇನ್ ನಿರ್ದೇಶನದ ಕೇರಳ ಸ್ಟೋರಿ ಬಲಪಂಥೀಯ ಅಜೆಂಡಾವನ್ನು ಹೊಂದಿದ್ದು, ಅದರಲ್ಲಿ ಲವ್‌ ಜಿಹಾದ್‌, ಮತಾಂತರದ ಬಗ್ಗೆ ಸುಳ್ಳು ಪ್ರತಿಪಾದನೆಯನ್ನು ಮಾಡಲಾಗಿದೆ.

ತಲಶ್ಶೇರಿ ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕೆಲವು ಚರ್ಚ್‌ಗಳಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಪ್ರಚಾರ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು. ವಿವಾದದ ನಂತರ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಚಲನಚಿತ್ರಗಳನ್ನು ಪ್ರದರ್ಶಿಸುವುದನ್ನು ತಡೆಯುವುದಾಗಿ ಧರ್ಮಪ್ರಾಂತ್ಯ ಮಾಧ್ಯಮಗಳಿಗೆ ತಿಳಿಸಿದೆ. ಯಾವುದೇ ಕೋಮುವಾದಿಗಳು ನಮ್ಮ ಮಹಿಳೆಯರ ಹೆಸರು ಹೇಳಿ ಇಲ್ಲಿ ಕೋಮುವಾದ ಮಾಡುವ ಅಗತ್ಯವಿಲ್ಲ. ನಾವು ಇದನ್ನು ಇನ್ನು ಮುಂದೆ ಅನುಮತಿಸುವುದಿಲ್ಲ. ನಮ್ಮ ಯುವತಿಯರನ್ನು ಹೇಗೆ ರಕ್ಷಿಸಬೇಕು ಎಂದು ನಮ್ಮ ಸಮುದಾಯಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಚ್‌ಬಿಷಪ್ ಅವರು ಕೇರಳದ ಸಂಘಪರಿವಾರದ ಪರ ಕ್ರಿಶ್ಚಿಯನ್ ಸಂಘಟನೆಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ಮತ್ತು ಅಲಯನ್ಸ್ ಫಾರ್ ಸೋಶಿಯಲ್ ಆಕ್ಷನ್ (ಸಿಎಎಸ್‌ಎ)ನನ್ನು ಉದ್ದೇಶಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...