Homeಮುಖಪುಟಚರ್ಚ್‌ಗಳಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ ದ್ವೇಷವನ್ನು ಹುಟ್ಟಿಸುವುದರ ಜೊತೆಗೆ ಅದನ್ನು ಮತವಾಗಿ ಪರಿವರ್ತನೆಗೊಳಿಸುವುದು ಹಿಡನ್‌ ಅಜೆಂಡಾವಾಗಿತ್ತು. ಆದರೆ ಇದಕ್ಕೆ ಕ್ರಿಶ್ಚಿಯನ್‌ ಸಮುದಾಯ ಸೊಪ್ಪು ಹಾಕಿಲ್ಲ. ಇದೀಗ ಸ್ವತಃ ಸಿರೋ ಮಲಬಾರ್ ಚರ್ಚ್‌ನ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಹೇಳಿಕೆಯೊಂದನ್ನು ನೀಡಿದ್ದು, ಕೋಮು ಅಜೆಂಡಾಗಳ ಸಾಧನೆಗೆ ಕ್ರಿಶ್ಚಿಯನ್‌ ಮಹಿಳೆಯರನ್ನು ಬಳಕೆ ಮಾಡಬೇಡಿ ಎಂದು ಖಾರವಾಗಿ ಸಂದೇಶವನ್ನು ನೀಡಿದ್ದಾರೆ.

ದೇಶದ ಹಲವು ಕಡೆಗಳಲ್ಲಿ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ನರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಬ್ಬಾಳಿಕೆ ನಡೆಸುತ್ತಿದ್ದಾಗ ಮೌನವನ್ನು ಕಾಯ್ದುಕೊಂಡಿದ್ದ ಪ್ರಧಾನಿ ಮೋದಿ, ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಅದಾದ ಬಳಿಕ ಸಿರೋ ಮಲಬಾರ್ ಚರ್ಚ್ ಇಡುಕ್ಕಿ ಧರ್ಮಪ್ರಾಂತ್ಯದದಲ್ಲಿ ವಿವಾದಿತ ಸುಳ್ಳು ಪ್ರತಿಪಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನ ನಡೆದಿದೆ. ಕ್ರೈಸ್ತ ಮಹಿಳೆಯರಿಗೆ ಈ ಕೋಮುವಾದಿ ಅಜೆಂಡಾ ಹೊಂದಿರುವ ಸಿನಿಮಾ ಪ್ರದರ್ಶಿಸುವ ಮೂಲಕ ಅವರಲ್ಲಿ ಧ್ರವೀಕರಣ ಮನಸ್ಥತಿ ಉಂಟು ಮಾಡುವ ತಂತ್ರದ ಭಾಗ ಎಂದು ಆರೋಪಿಸಲಾಗಿದೆ.

ಕಣ್ಣೂರು ಜಿಲ್ಲೆಯ ಚೆಂಪೇರಿಯಲ್ಲಿ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ, ಕ್ರಿಶ್ಚಿಯನ್ನರಲ್ಲಿ ವಿಭಜನೆ ಮತ್ತು ಕೋಮುವಾದವನ್ನು ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಾರೆ. ಯುವಕರು “ಸಂಕುಚಿತ ಮನೋಭಾವ” ಹೊಂದಿರಬಾರದು. ಲವ್ ಜಿಹಾದ್‌ನಿಂದ ಮಹಿಳೆಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಗಳನ್ನು ಟೀಕಿಸಿದ ಅವರು, ಮುಸ್ಲಿಂ ಪುರುಷರು ಇತರ ಧರ್ಮಗಳ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎನ್ನುವುದು ಇಸ್ಲಾಮೋಫೋಬಿಕ್ ಪಿತೂರಿ ಸಿದ್ಧಾಂತ ಎಂದು ಹೇಳಿದ್ದಾರೆ.

ಕೆಲವರು ನಮ್ಮ ಹೆಣ್ಣುಮಕ್ಕಳ ರಕ್ಷಕರೆಂದು ಹೇಳುತ್ತಿದ್ದಾರೆ. ಆತ್ಮೀಯ ಯುವತಿಯರೇ, ನಾನು ನಿಮಗೆ ಹೇಳಲೇಬೇಕು, ಇಲ್ಲಿನ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಇದ್ದಾರೆ. ಹಾಗಾಗಿ ಪ್ರೀತಿಯ ಹೆಸರಿನಲ್ಲಿ ಯಾರೂ ಅವರನ್ನು ವಂಚಿಸಲು ಸಾಧ್ಯವಿಲ್ಲ. ನಾವು ಪ್ರೀತಿಯ ಕಥೆಯನ್ನು ಮಾತ್ರ ಹೇಳಬೇಕಾಗಿದೆ, ಕ್ರಿಶ್ಚಿಯನ್ನರಿಗೆ ಹಂಚಿಕೊಳ್ಳಲು ಒಂದೇ ಒಂದು ಕಥೆಯಿದೆ, ಅದು ಯೇಸುವಿನ ಕಥೆ, ನಮ್ಮ ನಡುವೆ ವಿಭಜನೆ ಮತ್ತು ಕೋಮುವಾದವನ್ನು ಬಿತ್ತಲು ಅನೇಕ ಜನರು ಇದ್ದಾರೆ ಎಂದು ನಾವು ಅರಿತುಕೊಳ್ಳಬೇಕು. ಯುವಕರು ಕ್ರೈಸ್ತನ ಮಿತಿಯಿಲ್ಲದ ಪ್ರೀತಿ ಮತ್ತು ಮಿತಿಯಿಲ್ಲದ ಮಾನವೀಯತೆಯ ವೈಭವವನ್ನು ಎಂದಿಗೂ ಮರೆಯಬಾರದು. ಯುವಕರು ಸಂಕುಚಿತವಾದರೆ, ಇಡೀ ದೇಶವು ಸಂಕುಚಿತತೆಯ ಕತ್ತಲೆಯಲ್ಲಿ ಬೀಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸಿರೋ ಮಲಬಾರ್ ಚರ್ಚ್‌ನ ಇಡುಕ್ಕಿ ಧರ್ಮಪ್ರಾಂತ್ಯವು ಕೇರಳ ಸ್ಟೋರಿಯನ್ನು ಪ್ರದರ್ಶಿಸುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು, ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಸುದೀಪ್ತೋ ಸೇನ್ ನಿರ್ದೇಶನದ ಕೇರಳ ಸ್ಟೋರಿ ಬಲಪಂಥೀಯ ಅಜೆಂಡಾವನ್ನು ಹೊಂದಿದ್ದು, ಅದರಲ್ಲಿ ಲವ್‌ ಜಿಹಾದ್‌, ಮತಾಂತರದ ಬಗ್ಗೆ ಸುಳ್ಳು ಪ್ರತಿಪಾದನೆಯನ್ನು ಮಾಡಲಾಗಿದೆ.

ತಲಶ್ಶೇರಿ ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕೆಲವು ಚರ್ಚ್‌ಗಳಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಪ್ರಚಾರ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು. ವಿವಾದದ ನಂತರ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಚಲನಚಿತ್ರಗಳನ್ನು ಪ್ರದರ್ಶಿಸುವುದನ್ನು ತಡೆಯುವುದಾಗಿ ಧರ್ಮಪ್ರಾಂತ್ಯ ಮಾಧ್ಯಮಗಳಿಗೆ ತಿಳಿಸಿದೆ. ಯಾವುದೇ ಕೋಮುವಾದಿಗಳು ನಮ್ಮ ಮಹಿಳೆಯರ ಹೆಸರು ಹೇಳಿ ಇಲ್ಲಿ ಕೋಮುವಾದ ಮಾಡುವ ಅಗತ್ಯವಿಲ್ಲ. ನಾವು ಇದನ್ನು ಇನ್ನು ಮುಂದೆ ಅನುಮತಿಸುವುದಿಲ್ಲ. ನಮ್ಮ ಯುವತಿಯರನ್ನು ಹೇಗೆ ರಕ್ಷಿಸಬೇಕು ಎಂದು ನಮ್ಮ ಸಮುದಾಯಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಚ್‌ಬಿಷಪ್ ಅವರು ಕೇರಳದ ಸಂಘಪರಿವಾರದ ಪರ ಕ್ರಿಶ್ಚಿಯನ್ ಸಂಘಟನೆಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ಮತ್ತು ಅಲಯನ್ಸ್ ಫಾರ್ ಸೋಶಿಯಲ್ ಆಕ್ಷನ್ (ಸಿಎಎಸ್‌ಎ)ನನ್ನು ಉದ್ದೇಶಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...