Homeಮುಖಪುಟಚರ್ಚ್‌ಗಳಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ ದ್ವೇಷವನ್ನು ಹುಟ್ಟಿಸುವುದರ ಜೊತೆಗೆ ಅದನ್ನು ಮತವಾಗಿ ಪರಿವರ್ತನೆಗೊಳಿಸುವುದು ಹಿಡನ್‌ ಅಜೆಂಡಾವಾಗಿತ್ತು. ಆದರೆ ಇದಕ್ಕೆ ಕ್ರಿಶ್ಚಿಯನ್‌ ಸಮುದಾಯ ಸೊಪ್ಪು ಹಾಕಿಲ್ಲ. ಇದೀಗ ಸ್ವತಃ ಸಿರೋ ಮಲಬಾರ್ ಚರ್ಚ್‌ನ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಹೇಳಿಕೆಯೊಂದನ್ನು ನೀಡಿದ್ದು, ಕೋಮು ಅಜೆಂಡಾಗಳ ಸಾಧನೆಗೆ ಕ್ರಿಶ್ಚಿಯನ್‌ ಮಹಿಳೆಯರನ್ನು ಬಳಕೆ ಮಾಡಬೇಡಿ ಎಂದು ಖಾರವಾಗಿ ಸಂದೇಶವನ್ನು ನೀಡಿದ್ದಾರೆ.

ದೇಶದ ಹಲವು ಕಡೆಗಳಲ್ಲಿ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ನರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಬ್ಬಾಳಿಕೆ ನಡೆಸುತ್ತಿದ್ದಾಗ ಮೌನವನ್ನು ಕಾಯ್ದುಕೊಂಡಿದ್ದ ಪ್ರಧಾನಿ ಮೋದಿ, ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಅದಾದ ಬಳಿಕ ಸಿರೋ ಮಲಬಾರ್ ಚರ್ಚ್ ಇಡುಕ್ಕಿ ಧರ್ಮಪ್ರಾಂತ್ಯದದಲ್ಲಿ ವಿವಾದಿತ ಸುಳ್ಳು ಪ್ರತಿಪಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನ ನಡೆದಿದೆ. ಕ್ರೈಸ್ತ ಮಹಿಳೆಯರಿಗೆ ಈ ಕೋಮುವಾದಿ ಅಜೆಂಡಾ ಹೊಂದಿರುವ ಸಿನಿಮಾ ಪ್ರದರ್ಶಿಸುವ ಮೂಲಕ ಅವರಲ್ಲಿ ಧ್ರವೀಕರಣ ಮನಸ್ಥತಿ ಉಂಟು ಮಾಡುವ ತಂತ್ರದ ಭಾಗ ಎಂದು ಆರೋಪಿಸಲಾಗಿದೆ.

ಕಣ್ಣೂರು ಜಿಲ್ಲೆಯ ಚೆಂಪೇರಿಯಲ್ಲಿ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ, ಕ್ರಿಶ್ಚಿಯನ್ನರಲ್ಲಿ ವಿಭಜನೆ ಮತ್ತು ಕೋಮುವಾದವನ್ನು ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಾರೆ. ಯುವಕರು “ಸಂಕುಚಿತ ಮನೋಭಾವ” ಹೊಂದಿರಬಾರದು. ಲವ್ ಜಿಹಾದ್‌ನಿಂದ ಮಹಿಳೆಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಗಳನ್ನು ಟೀಕಿಸಿದ ಅವರು, ಮುಸ್ಲಿಂ ಪುರುಷರು ಇತರ ಧರ್ಮಗಳ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎನ್ನುವುದು ಇಸ್ಲಾಮೋಫೋಬಿಕ್ ಪಿತೂರಿ ಸಿದ್ಧಾಂತ ಎಂದು ಹೇಳಿದ್ದಾರೆ.

ಕೆಲವರು ನಮ್ಮ ಹೆಣ್ಣುಮಕ್ಕಳ ರಕ್ಷಕರೆಂದು ಹೇಳುತ್ತಿದ್ದಾರೆ. ಆತ್ಮೀಯ ಯುವತಿಯರೇ, ನಾನು ನಿಮಗೆ ಹೇಳಲೇಬೇಕು, ಇಲ್ಲಿನ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಇದ್ದಾರೆ. ಹಾಗಾಗಿ ಪ್ರೀತಿಯ ಹೆಸರಿನಲ್ಲಿ ಯಾರೂ ಅವರನ್ನು ವಂಚಿಸಲು ಸಾಧ್ಯವಿಲ್ಲ. ನಾವು ಪ್ರೀತಿಯ ಕಥೆಯನ್ನು ಮಾತ್ರ ಹೇಳಬೇಕಾಗಿದೆ, ಕ್ರಿಶ್ಚಿಯನ್ನರಿಗೆ ಹಂಚಿಕೊಳ್ಳಲು ಒಂದೇ ಒಂದು ಕಥೆಯಿದೆ, ಅದು ಯೇಸುವಿನ ಕಥೆ, ನಮ್ಮ ನಡುವೆ ವಿಭಜನೆ ಮತ್ತು ಕೋಮುವಾದವನ್ನು ಬಿತ್ತಲು ಅನೇಕ ಜನರು ಇದ್ದಾರೆ ಎಂದು ನಾವು ಅರಿತುಕೊಳ್ಳಬೇಕು. ಯುವಕರು ಕ್ರೈಸ್ತನ ಮಿತಿಯಿಲ್ಲದ ಪ್ರೀತಿ ಮತ್ತು ಮಿತಿಯಿಲ್ಲದ ಮಾನವೀಯತೆಯ ವೈಭವವನ್ನು ಎಂದಿಗೂ ಮರೆಯಬಾರದು. ಯುವಕರು ಸಂಕುಚಿತವಾದರೆ, ಇಡೀ ದೇಶವು ಸಂಕುಚಿತತೆಯ ಕತ್ತಲೆಯಲ್ಲಿ ಬೀಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸಿರೋ ಮಲಬಾರ್ ಚರ್ಚ್‌ನ ಇಡುಕ್ಕಿ ಧರ್ಮಪ್ರಾಂತ್ಯವು ಕೇರಳ ಸ್ಟೋರಿಯನ್ನು ಪ್ರದರ್ಶಿಸುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು, ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಸುದೀಪ್ತೋ ಸೇನ್ ನಿರ್ದೇಶನದ ಕೇರಳ ಸ್ಟೋರಿ ಬಲಪಂಥೀಯ ಅಜೆಂಡಾವನ್ನು ಹೊಂದಿದ್ದು, ಅದರಲ್ಲಿ ಲವ್‌ ಜಿಹಾದ್‌, ಮತಾಂತರದ ಬಗ್ಗೆ ಸುಳ್ಳು ಪ್ರತಿಪಾದನೆಯನ್ನು ಮಾಡಲಾಗಿದೆ.

ತಲಶ್ಶೇರಿ ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕೆಲವು ಚರ್ಚ್‌ಗಳಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಪ್ರಚಾರ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು. ವಿವಾದದ ನಂತರ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಚಲನಚಿತ್ರಗಳನ್ನು ಪ್ರದರ್ಶಿಸುವುದನ್ನು ತಡೆಯುವುದಾಗಿ ಧರ್ಮಪ್ರಾಂತ್ಯ ಮಾಧ್ಯಮಗಳಿಗೆ ತಿಳಿಸಿದೆ. ಯಾವುದೇ ಕೋಮುವಾದಿಗಳು ನಮ್ಮ ಮಹಿಳೆಯರ ಹೆಸರು ಹೇಳಿ ಇಲ್ಲಿ ಕೋಮುವಾದ ಮಾಡುವ ಅಗತ್ಯವಿಲ್ಲ. ನಾವು ಇದನ್ನು ಇನ್ನು ಮುಂದೆ ಅನುಮತಿಸುವುದಿಲ್ಲ. ನಮ್ಮ ಯುವತಿಯರನ್ನು ಹೇಗೆ ರಕ್ಷಿಸಬೇಕು ಎಂದು ನಮ್ಮ ಸಮುದಾಯಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಚ್‌ಬಿಷಪ್ ಅವರು ಕೇರಳದ ಸಂಘಪರಿವಾರದ ಪರ ಕ್ರಿಶ್ಚಿಯನ್ ಸಂಘಟನೆಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ಮತ್ತು ಅಲಯನ್ಸ್ ಫಾರ್ ಸೋಶಿಯಲ್ ಆಕ್ಷನ್ (ಸಿಎಎಸ್‌ಎ)ನನ್ನು ಉದ್ದೇಶಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...