Homeಮುಖಪುಟಚರ್ಚ್‌ಗಳಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ ದ್ವೇಷವನ್ನು ಹುಟ್ಟಿಸುವುದರ ಜೊತೆಗೆ ಅದನ್ನು ಮತವಾಗಿ ಪರಿವರ್ತನೆಗೊಳಿಸುವುದು ಹಿಡನ್‌ ಅಜೆಂಡಾವಾಗಿತ್ತು. ಆದರೆ ಇದಕ್ಕೆ ಕ್ರಿಶ್ಚಿಯನ್‌ ಸಮುದಾಯ ಸೊಪ್ಪು ಹಾಕಿಲ್ಲ. ಇದೀಗ ಸ್ವತಃ ಸಿರೋ ಮಲಬಾರ್ ಚರ್ಚ್‌ನ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಹೇಳಿಕೆಯೊಂದನ್ನು ನೀಡಿದ್ದು, ಕೋಮು ಅಜೆಂಡಾಗಳ ಸಾಧನೆಗೆ ಕ್ರಿಶ್ಚಿಯನ್‌ ಮಹಿಳೆಯರನ್ನು ಬಳಕೆ ಮಾಡಬೇಡಿ ಎಂದು ಖಾರವಾಗಿ ಸಂದೇಶವನ್ನು ನೀಡಿದ್ದಾರೆ.

ದೇಶದ ಹಲವು ಕಡೆಗಳಲ್ಲಿ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ನರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಬ್ಬಾಳಿಕೆ ನಡೆಸುತ್ತಿದ್ದಾಗ ಮೌನವನ್ನು ಕಾಯ್ದುಕೊಂಡಿದ್ದ ಪ್ರಧಾನಿ ಮೋದಿ, ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಅದಾದ ಬಳಿಕ ಸಿರೋ ಮಲಬಾರ್ ಚರ್ಚ್ ಇಡುಕ್ಕಿ ಧರ್ಮಪ್ರಾಂತ್ಯದದಲ್ಲಿ ವಿವಾದಿತ ಸುಳ್ಳು ಪ್ರತಿಪಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನ ನಡೆದಿದೆ. ಕ್ರೈಸ್ತ ಮಹಿಳೆಯರಿಗೆ ಈ ಕೋಮುವಾದಿ ಅಜೆಂಡಾ ಹೊಂದಿರುವ ಸಿನಿಮಾ ಪ್ರದರ್ಶಿಸುವ ಮೂಲಕ ಅವರಲ್ಲಿ ಧ್ರವೀಕರಣ ಮನಸ್ಥತಿ ಉಂಟು ಮಾಡುವ ತಂತ್ರದ ಭಾಗ ಎಂದು ಆರೋಪಿಸಲಾಗಿದೆ.

ಕಣ್ಣೂರು ಜಿಲ್ಲೆಯ ಚೆಂಪೇರಿಯಲ್ಲಿ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ, ಕ್ರಿಶ್ಚಿಯನ್ನರಲ್ಲಿ ವಿಭಜನೆ ಮತ್ತು ಕೋಮುವಾದವನ್ನು ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಾರೆ. ಯುವಕರು “ಸಂಕುಚಿತ ಮನೋಭಾವ” ಹೊಂದಿರಬಾರದು. ಲವ್ ಜಿಹಾದ್‌ನಿಂದ ಮಹಿಳೆಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಗಳನ್ನು ಟೀಕಿಸಿದ ಅವರು, ಮುಸ್ಲಿಂ ಪುರುಷರು ಇತರ ಧರ್ಮಗಳ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎನ್ನುವುದು ಇಸ್ಲಾಮೋಫೋಬಿಕ್ ಪಿತೂರಿ ಸಿದ್ಧಾಂತ ಎಂದು ಹೇಳಿದ್ದಾರೆ.

ಕೆಲವರು ನಮ್ಮ ಹೆಣ್ಣುಮಕ್ಕಳ ರಕ್ಷಕರೆಂದು ಹೇಳುತ್ತಿದ್ದಾರೆ. ಆತ್ಮೀಯ ಯುವತಿಯರೇ, ನಾನು ನಿಮಗೆ ಹೇಳಲೇಬೇಕು, ಇಲ್ಲಿನ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಇದ್ದಾರೆ. ಹಾಗಾಗಿ ಪ್ರೀತಿಯ ಹೆಸರಿನಲ್ಲಿ ಯಾರೂ ಅವರನ್ನು ವಂಚಿಸಲು ಸಾಧ್ಯವಿಲ್ಲ. ನಾವು ಪ್ರೀತಿಯ ಕಥೆಯನ್ನು ಮಾತ್ರ ಹೇಳಬೇಕಾಗಿದೆ, ಕ್ರಿಶ್ಚಿಯನ್ನರಿಗೆ ಹಂಚಿಕೊಳ್ಳಲು ಒಂದೇ ಒಂದು ಕಥೆಯಿದೆ, ಅದು ಯೇಸುವಿನ ಕಥೆ, ನಮ್ಮ ನಡುವೆ ವಿಭಜನೆ ಮತ್ತು ಕೋಮುವಾದವನ್ನು ಬಿತ್ತಲು ಅನೇಕ ಜನರು ಇದ್ದಾರೆ ಎಂದು ನಾವು ಅರಿತುಕೊಳ್ಳಬೇಕು. ಯುವಕರು ಕ್ರೈಸ್ತನ ಮಿತಿಯಿಲ್ಲದ ಪ್ರೀತಿ ಮತ್ತು ಮಿತಿಯಿಲ್ಲದ ಮಾನವೀಯತೆಯ ವೈಭವವನ್ನು ಎಂದಿಗೂ ಮರೆಯಬಾರದು. ಯುವಕರು ಸಂಕುಚಿತವಾದರೆ, ಇಡೀ ದೇಶವು ಸಂಕುಚಿತತೆಯ ಕತ್ತಲೆಯಲ್ಲಿ ಬೀಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸಿರೋ ಮಲಬಾರ್ ಚರ್ಚ್‌ನ ಇಡುಕ್ಕಿ ಧರ್ಮಪ್ರಾಂತ್ಯವು ಕೇರಳ ಸ್ಟೋರಿಯನ್ನು ಪ್ರದರ್ಶಿಸುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು, ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಸುದೀಪ್ತೋ ಸೇನ್ ನಿರ್ದೇಶನದ ಕೇರಳ ಸ್ಟೋರಿ ಬಲಪಂಥೀಯ ಅಜೆಂಡಾವನ್ನು ಹೊಂದಿದ್ದು, ಅದರಲ್ಲಿ ಲವ್‌ ಜಿಹಾದ್‌, ಮತಾಂತರದ ಬಗ್ಗೆ ಸುಳ್ಳು ಪ್ರತಿಪಾದನೆಯನ್ನು ಮಾಡಲಾಗಿದೆ.

ತಲಶ್ಶೇರಿ ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕೆಲವು ಚರ್ಚ್‌ಗಳಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಪ್ರಚಾರ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು. ವಿವಾದದ ನಂತರ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಚಲನಚಿತ್ರಗಳನ್ನು ಪ್ರದರ್ಶಿಸುವುದನ್ನು ತಡೆಯುವುದಾಗಿ ಧರ್ಮಪ್ರಾಂತ್ಯ ಮಾಧ್ಯಮಗಳಿಗೆ ತಿಳಿಸಿದೆ. ಯಾವುದೇ ಕೋಮುವಾದಿಗಳು ನಮ್ಮ ಮಹಿಳೆಯರ ಹೆಸರು ಹೇಳಿ ಇಲ್ಲಿ ಕೋಮುವಾದ ಮಾಡುವ ಅಗತ್ಯವಿಲ್ಲ. ನಾವು ಇದನ್ನು ಇನ್ನು ಮುಂದೆ ಅನುಮತಿಸುವುದಿಲ್ಲ. ನಮ್ಮ ಯುವತಿಯರನ್ನು ಹೇಗೆ ರಕ್ಷಿಸಬೇಕು ಎಂದು ನಮ್ಮ ಸಮುದಾಯಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಚ್‌ಬಿಷಪ್ ಅವರು ಕೇರಳದ ಸಂಘಪರಿವಾರದ ಪರ ಕ್ರಿಶ್ಚಿಯನ್ ಸಂಘಟನೆಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ಮತ್ತು ಅಲಯನ್ಸ್ ಫಾರ್ ಸೋಶಿಯಲ್ ಆಕ್ಷನ್ (ಸಿಎಎಸ್‌ಎ)ನನ್ನು ಉದ್ದೇಶಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...