Homeಮುಖಪುಟಚರ್ಚ್‌ಗಳಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

- Advertisement -
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ ದ್ವೇಷವನ್ನು ಹುಟ್ಟಿಸುವುದರ ಜೊತೆಗೆ ಅದನ್ನು ಮತವಾಗಿ ಪರಿವರ್ತನೆಗೊಳಿಸುವುದು ಹಿಡನ್‌ ಅಜೆಂಡಾವಾಗಿತ್ತು. ಆದರೆ ಇದಕ್ಕೆ ಕ್ರಿಶ್ಚಿಯನ್‌ ಸಮುದಾಯ ಸೊಪ್ಪು ಹಾಕಿಲ್ಲ. ಇದೀಗ ಸ್ವತಃ ಸಿರೋ ಮಲಬಾರ್ ಚರ್ಚ್‌ನ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ ಹೇಳಿಕೆಯೊಂದನ್ನು ನೀಡಿದ್ದು, ಕೋಮು ಅಜೆಂಡಾಗಳ ಸಾಧನೆಗೆ ಕ್ರಿಶ್ಚಿಯನ್‌ ಮಹಿಳೆಯರನ್ನು ಬಳಕೆ ಮಾಡಬೇಡಿ ಎಂದು ಖಾರವಾಗಿ ಸಂದೇಶವನ್ನು ನೀಡಿದ್ದಾರೆ.

ದೇಶದ ಹಲವು ಕಡೆಗಳಲ್ಲಿ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ನರ ಮೇಲೆ ಸಂಘಪರಿವಾರದ ಕಾರ್ಯಕರ್ತರು ದಬ್ಬಾಳಿಕೆ ನಡೆಸುತ್ತಿದ್ದಾಗ ಮೌನವನ್ನು ಕಾಯ್ದುಕೊಂಡಿದ್ದ ಪ್ರಧಾನಿ ಮೋದಿ, ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಪಾದ್ರಿಗಳನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಅದಾದ ಬಳಿಕ ಸಿರೋ ಮಲಬಾರ್ ಚರ್ಚ್ ಇಡುಕ್ಕಿ ಧರ್ಮಪ್ರಾಂತ್ಯದದಲ್ಲಿ ವಿವಾದಿತ ಸುಳ್ಳು ಪ್ರತಿಪಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಪ್ರದರ್ಶನ ನಡೆದಿದೆ. ಕ್ರೈಸ್ತ ಮಹಿಳೆಯರಿಗೆ ಈ ಕೋಮುವಾದಿ ಅಜೆಂಡಾ ಹೊಂದಿರುವ ಸಿನಿಮಾ ಪ್ರದರ್ಶಿಸುವ ಮೂಲಕ ಅವರಲ್ಲಿ ಧ್ರವೀಕರಣ ಮನಸ್ಥತಿ ಉಂಟು ಮಾಡುವ ತಂತ್ರದ ಭಾಗ ಎಂದು ಆರೋಪಿಸಲಾಗಿದೆ.

ಕಣ್ಣೂರು ಜಿಲ್ಲೆಯ ಚೆಂಪೇರಿಯಲ್ಲಿ ಕೇರಳ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ಕೆಸಿವೈಎಂ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಆರ್ಚ್‌ಬಿಷಪ್ ಮಾರ್ ಜೋಸೆಫ್ ಪಂಪ್ಲಾನಿ, ಕ್ರಿಶ್ಚಿಯನ್ನರಲ್ಲಿ ವಿಭಜನೆ ಮತ್ತು ಕೋಮುವಾದವನ್ನು ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಾರೆ. ಯುವಕರು “ಸಂಕುಚಿತ ಮನೋಭಾವ” ಹೊಂದಿರಬಾರದು. ಲವ್ ಜಿಹಾದ್‌ನಿಂದ ಮಹಿಳೆಯರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ಸಂಸ್ಥೆಗಳನ್ನು ಟೀಕಿಸಿದ ಅವರು, ಮುಸ್ಲಿಂ ಪುರುಷರು ಇತರ ಧರ್ಮಗಳ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುತ್ತಾರೆ ಎನ್ನುವುದು ಇಸ್ಲಾಮೋಫೋಬಿಕ್ ಪಿತೂರಿ ಸಿದ್ಧಾಂತ ಎಂದು ಹೇಳಿದ್ದಾರೆ.

ಕೆಲವರು ನಮ್ಮ ಹೆಣ್ಣುಮಕ್ಕಳ ರಕ್ಷಕರೆಂದು ಹೇಳುತ್ತಿದ್ದಾರೆ. ಆತ್ಮೀಯ ಯುವತಿಯರೇ, ನಾನು ನಿಮಗೆ ಹೇಳಲೇಬೇಕು, ಇಲ್ಲಿನ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಇದ್ದಾರೆ. ಹಾಗಾಗಿ ಪ್ರೀತಿಯ ಹೆಸರಿನಲ್ಲಿ ಯಾರೂ ಅವರನ್ನು ವಂಚಿಸಲು ಸಾಧ್ಯವಿಲ್ಲ. ನಾವು ಪ್ರೀತಿಯ ಕಥೆಯನ್ನು ಮಾತ್ರ ಹೇಳಬೇಕಾಗಿದೆ, ಕ್ರಿಶ್ಚಿಯನ್ನರಿಗೆ ಹಂಚಿಕೊಳ್ಳಲು ಒಂದೇ ಒಂದು ಕಥೆಯಿದೆ, ಅದು ಯೇಸುವಿನ ಕಥೆ, ನಮ್ಮ ನಡುವೆ ವಿಭಜನೆ ಮತ್ತು ಕೋಮುವಾದವನ್ನು ಬಿತ್ತಲು ಅನೇಕ ಜನರು ಇದ್ದಾರೆ ಎಂದು ನಾವು ಅರಿತುಕೊಳ್ಳಬೇಕು. ಯುವಕರು ಕ್ರೈಸ್ತನ ಮಿತಿಯಿಲ್ಲದ ಪ್ರೀತಿ ಮತ್ತು ಮಿತಿಯಿಲ್ಲದ ಮಾನವೀಯತೆಯ ವೈಭವವನ್ನು ಎಂದಿಗೂ ಮರೆಯಬಾರದು. ಯುವಕರು ಸಂಕುಚಿತವಾದರೆ, ಇಡೀ ದೇಶವು ಸಂಕುಚಿತತೆಯ ಕತ್ತಲೆಯಲ್ಲಿ ಬೀಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಸಿರೋ ಮಲಬಾರ್ ಚರ್ಚ್‌ನ ಇಡುಕ್ಕಿ ಧರ್ಮಪ್ರಾಂತ್ಯವು ಕೇರಳ ಸ್ಟೋರಿಯನ್ನು ಪ್ರದರ್ಶಿಸುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು, ಇದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಅವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಸುದೀಪ್ತೋ ಸೇನ್ ನಿರ್ದೇಶನದ ಕೇರಳ ಸ್ಟೋರಿ ಬಲಪಂಥೀಯ ಅಜೆಂಡಾವನ್ನು ಹೊಂದಿದ್ದು, ಅದರಲ್ಲಿ ಲವ್‌ ಜಿಹಾದ್‌, ಮತಾಂತರದ ಬಗ್ಗೆ ಸುಳ್ಳು ಪ್ರತಿಪಾದನೆಯನ್ನು ಮಾಡಲಾಗಿದೆ.

ತಲಶ್ಶೇರಿ ಧರ್ಮಪ್ರಾಂತ್ಯದ ಅಧೀನದಲ್ಲಿರುವ ಕೆಲವು ಚರ್ಚ್‌ಗಳಲ್ಲಿ ಸುದೀಪ್ತೋ ಸೇನ್ ನಿರ್ದೇಶನದ ಪ್ರಚಾರ ಚಲನಚಿತ್ರವನ್ನು ಸಹ ಪ್ರದರ್ಶಿಸಲಾಯಿತು. ವಿವಾದದ ನಂತರ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೆ ಚಲನಚಿತ್ರಗಳನ್ನು ಪ್ರದರ್ಶಿಸುವುದನ್ನು ತಡೆಯುವುದಾಗಿ ಧರ್ಮಪ್ರಾಂತ್ಯ ಮಾಧ್ಯಮಗಳಿಗೆ ತಿಳಿಸಿದೆ. ಯಾವುದೇ ಕೋಮುವಾದಿಗಳು ನಮ್ಮ ಮಹಿಳೆಯರ ಹೆಸರು ಹೇಳಿ ಇಲ್ಲಿ ಕೋಮುವಾದ ಮಾಡುವ ಅಗತ್ಯವಿಲ್ಲ. ನಾವು ಇದನ್ನು ಇನ್ನು ಮುಂದೆ ಅನುಮತಿಸುವುದಿಲ್ಲ. ನಮ್ಮ ಯುವತಿಯರನ್ನು ಹೇಗೆ ರಕ್ಷಿಸಬೇಕು ಎಂದು ನಮ್ಮ ಸಮುದಾಯಕ್ಕೆ ತಿಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಚ್‌ಬಿಷಪ್ ಅವರು ಕೇರಳದ ಸಂಘಪರಿವಾರದ ಪರ ಕ್ರಿಶ್ಚಿಯನ್ ಸಂಘಟನೆಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ಮತ್ತು ಅಲಯನ್ಸ್ ಫಾರ್ ಸೋಶಿಯಲ್ ಆಕ್ಷನ್ (ಸಿಎಎಸ್‌ಎ)ನನ್ನು ಉದ್ದೇಶಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...