Homeಸಿನಿಮಾಕ್ರೀಡೆನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತೀಯರ ಚಿನ್ನದ ಕನಸು ನನಸು ಮಾಡಿದ್ದ ನೀರಜ್ ಚೋಪ್ರಾ ಅವರ ಹೇಳಿಕೆಯನ್ನು ಬಳಸಿ ಹಲವು ಮಂದಿ ವಿವಾದ ಸೃಷ್ಠಿಸಿದ್ದರು. ಇದಕ್ಕೆ ನೀರಜ್ ಚೋಪ್ರಾ, ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಫೈನಲ್‌ ವೇಳೆ ನೀರಜ್ ಅವರು ಎಸೆಯಬೇಕಿದ್ದ ಜಾವೆಲಿನ್‌ ಪಾಕಿಸ್ತಾನದ ಅಥ್ಲೀಟ್‌ ಆರ್ಶದ್ ನದೀಮ್ ಬಳಿಯಿತ್ತು, ಅದನ್ನು ಕೇಳಿದಾಗ ಅವರು ವಾಪಸ್ ನೀಡಿದ್ದರು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ನೀರಜ್‌ ಚೋಪ್ರಾರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಆರ್ಶದ್ ಅವರ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೀರಜ್, ಕ್ರೀಡೆಯಲ್ಲಿ ಇದೊಂದು ಅತ್ಯಂತ ಸಹಜ ಪ್ರಕ್ರಿಯೆ. ನಾವೆಲ್ಲರೂ ಪ್ರೀತಿಯಿಂದ ಇರುತ್ತೇವೆ. ನಿಮ್ಮ ಕೊಳಕು ಅಜೆಂಡಾಗಳಿಗೆ ನಮ್ಮ ಹೆಸರು ಮತ್ತು ಹೇಳಿಕೆಯನ್ನು ಬಳಸದಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿರುವ ನೀರಜ್ ಚೋಪ್ರಾ ಅವರ ಹೇಳಿಕೆ ಹೀಗಿದೆ.

“ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದಿದ್ದಾರೆ.

ಜೊತೆಗೆ ನಿಮ್ಮ ಪ್ರಚಾರಕ್ಕಾಗಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವಂತೆ ಈ ವಿಚಾರವನ್ನು ಬಿಂಬಿಸಬೇಡಿ. ನಿಮ್ಮ ಅಜೆಂಡಾಗಳಿಗೆ ನನ್ನ ಹೆಸರು, ಹೇಳಿಕೆಯನ್ನು ಬಳಸದಿರಿ ಎಂದು  ನೀರಜ್ ಟ್ವೀಟ್ ಮೂಲಕ ವಿಡಿಯೋ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...