Homeಸಿನಿಮಾಕ್ರೀಡೆನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತೀಯರ ಚಿನ್ನದ ಕನಸು ನನಸು ಮಾಡಿದ್ದ ನೀರಜ್ ಚೋಪ್ರಾ ಅವರ ಹೇಳಿಕೆಯನ್ನು ಬಳಸಿ ಹಲವು ಮಂದಿ ವಿವಾದ ಸೃಷ್ಠಿಸಿದ್ದರು. ಇದಕ್ಕೆ ನೀರಜ್ ಚೋಪ್ರಾ, ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಫೈನಲ್‌ ವೇಳೆ ನೀರಜ್ ಅವರು ಎಸೆಯಬೇಕಿದ್ದ ಜಾವೆಲಿನ್‌ ಪಾಕಿಸ್ತಾನದ ಅಥ್ಲೀಟ್‌ ಆರ್ಶದ್ ನದೀಮ್ ಬಳಿಯಿತ್ತು, ಅದನ್ನು ಕೇಳಿದಾಗ ಅವರು ವಾಪಸ್ ನೀಡಿದ್ದರು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ನೀರಜ್‌ ಚೋಪ್ರಾರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಆರ್ಶದ್ ಅವರ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೀರಜ್, ಕ್ರೀಡೆಯಲ್ಲಿ ಇದೊಂದು ಅತ್ಯಂತ ಸಹಜ ಪ್ರಕ್ರಿಯೆ. ನಾವೆಲ್ಲರೂ ಪ್ರೀತಿಯಿಂದ ಇರುತ್ತೇವೆ. ನಿಮ್ಮ ಕೊಳಕು ಅಜೆಂಡಾಗಳಿಗೆ ನಮ್ಮ ಹೆಸರು ಮತ್ತು ಹೇಳಿಕೆಯನ್ನು ಬಳಸದಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿರುವ ನೀರಜ್ ಚೋಪ್ರಾ ಅವರ ಹೇಳಿಕೆ ಹೀಗಿದೆ.

“ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದಿದ್ದಾರೆ.

ಜೊತೆಗೆ ನಿಮ್ಮ ಪ್ರಚಾರಕ್ಕಾಗಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವಂತೆ ಈ ವಿಚಾರವನ್ನು ಬಿಂಬಿಸಬೇಡಿ. ನಿಮ್ಮ ಅಜೆಂಡಾಗಳಿಗೆ ನನ್ನ ಹೆಸರು, ಹೇಳಿಕೆಯನ್ನು ಬಳಸದಿರಿ ಎಂದು  ನೀರಜ್ ಟ್ವೀಟ್ ಮೂಲಕ ವಿಡಿಯೋ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...