Homeಸಿನಿಮಾಕ್ರೀಡೆನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ- ನೀರಜ್ ಚೋಪ್ರಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಭಾರತೀಯರ ಚಿನ್ನದ ಕನಸು ನನಸು ಮಾಡಿದ್ದ ನೀರಜ್ ಚೋಪ್ರಾ ಅವರ ಹೇಳಿಕೆಯನ್ನು ಬಳಸಿ ಹಲವು ಮಂದಿ ವಿವಾದ ಸೃಷ್ಠಿಸಿದ್ದರು. ಇದಕ್ಕೆ ನೀರಜ್ ಚೋಪ್ರಾ, ನಿಮ್ಮ ಕೊಳಕು ಅಜೆಂಡಾಗಳಿಗೆ ನನ್ನ ಹೇಳಿಕೆ ಬಳಸಬೇಡಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಫೈನಲ್‌ ವೇಳೆ ನೀರಜ್ ಅವರು ಎಸೆಯಬೇಕಿದ್ದ ಜಾವೆಲಿನ್‌ ಪಾಕಿಸ್ತಾನದ ಅಥ್ಲೀಟ್‌ ಆರ್ಶದ್ ನದೀಮ್ ಬಳಿಯಿತ್ತು, ಅದನ್ನು ಕೇಳಿದಾಗ ಅವರು ವಾಪಸ್ ನೀಡಿದ್ದರು ಎಂದು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ನೀರಜ್‌ ಚೋಪ್ರಾರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಆರ್ಶದ್ ಅವರ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಹೀಯಾಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೀರಜ್, ಕ್ರೀಡೆಯಲ್ಲಿ ಇದೊಂದು ಅತ್ಯಂತ ಸಹಜ ಪ್ರಕ್ರಿಯೆ. ನಾವೆಲ್ಲರೂ ಪ್ರೀತಿಯಿಂದ ಇರುತ್ತೇವೆ. ನಿಮ್ಮ ಕೊಳಕು ಅಜೆಂಡಾಗಳಿಗೆ ನಮ್ಮ ಹೆಸರು ಮತ್ತು ಹೇಳಿಕೆಯನ್ನು ಬಳಸದಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುರು ಕಾಶೀನಾಥ್ ನಾಯ್ಕ್‌ ಮನೆಗೆ ನೀರಜ್ ಚೋಪ್ರಾ ಭೇಟಿ: ಕೋಚ್ ಅಲ್ಲ ಎಂದಿದ್ದವರ ಬಾಯಿ ಬಂದ್!

ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿರುವ ನೀರಜ್ ಚೋಪ್ರಾ ಅವರ ಹೇಳಿಕೆ ಹೀಗಿದೆ.

“ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದಿದ್ದಾರೆ.

ಜೊತೆಗೆ ನಿಮ್ಮ ಪ್ರಚಾರಕ್ಕಾಗಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವಂತೆ ಈ ವಿಚಾರವನ್ನು ಬಿಂಬಿಸಬೇಡಿ. ನಿಮ್ಮ ಅಜೆಂಡಾಗಳಿಗೆ ನನ್ನ ಹೆಸರು, ಹೇಳಿಕೆಯನ್ನು ಬಳಸದಿರಿ ಎಂದು  ನೀರಜ್ ಟ್ವೀಟ್ ಮೂಲಕ ವಿಡಿಯೋ ಸಂದೇಶ ನೀಡಿದ್ದಾರೆ.


ಇದನ್ನೂ ಓದಿ: ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...