Homeಮುಖಪುಟಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

- Advertisement -
- Advertisement -

ನಾನು ಮೊನ್ನೆ ನಮ್ಮ ಪ್ರಧಾನಿಗಳ ಭಾಷಣ ಕೇಳಿದೆ. ಪ್ರಧಾನಿಗಳು ಮೊದಲ ಬಾರಿ ಮತಚಲಾಯಿಸುವವರನ್ನು ಉದ್ದೇಶಿಸಿ ನಮ್ಮ ದೇಶದ ಸೈನಿಕರ ಮೇಲೆ ಫುಲ್ವಾಮಾದಲ್ಲಿ ಆದ ಹಲ್ಲೆಯನ್ನು ನೆನಪಿಸಿಕೊಳ್ಳಿ, ಅದರ ನಂತರ ಆದ ಬಾಲಾಕೋಟ್‍ನಲ್ಲಿ ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ನೆನಪಿಸಿಕೊಳ್ಳಿ, ನೀವು ಮತಚಲಾಯಿಸುವಾಗ ಹುತಾತ್ಮರಾದ ಸೈನಿಕರನ್ನು, ಸರ್ಜಿಕಲ್ ಸ್ಟ್ರೈಕ್ ಮಾಡಿದ ಶೂರಯೋಧರನ್ನು ಗಮನದಲ್ಲಿಟ್ಟುಕೊಂಡು ಮತಚಲಾಯಿಸಿ ಎಂದು ಯುವಜನತೆಗೆ ಅಪೀಲ್ ಮಾಡಿದರು.

ಕೇಳಿ ತುಂಬಾ ದುಃಖವಾಯಿತು. ನನ್ನ ಪ್ರಶ್ನೆ, ಇಂದು ರಾಜಕೀಯ ಮಾಡಲು, ಚುನಾವಣೆಗಳಲ್ಲಿ ಗೆಲ್ಲಲು, ಹುತಾತ್ಮರಾದ ಸೈನಿಕರನ್ನು, ಧೈರ್ಯ ತೋರಿದ ಶೂರಯೋಧರನ್ನು ಬಳಸಿಕೊಳ್ಳಬೇಕೇ? ಚುನಾವಣೆಗಳಲ್ಲಿ ಗೆಲ್ಲಲು ನಮ್ಮ ಯೋಧರನ್ನು ಬಳಸಿಕೊಳ್ಳುವುದು ತಪ್ಪಲ್ಲವೇ? ಪ್ರಧಾನಿಗಳು ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಹುತಾತ್ಮರಾದ 40 ಸೈನಿಕರನ್ನು ಉಳಿಸಲು ನೀವು ಏನು ಮಾಡಿದಿರಿ? ನಮ್ಮ ಗೂಢಚರ್ಯೆಯ ಸಂಸ್ಥೆಗಳು ಇದರ ಜವಾಬ್ದಾರಿ ಹೊರಬೇಕಲ್ಲವೇ? ಹೌದು ನೀವು ಏರ್‍ಸ್ಟ್ರೀಕ್ ಮಾಡಿಸಿದಿರಿ, ಆದರೆ ಅದನ್ನು ನಮ್ಮ 40 ಸೈನಿಕರು ಹತರಾಗುವುದಕ್ಕಿಂತ ಮುಂಚೆ ಯಾಕೆ ಮಾಡಲಾಗಲಿಲ್ಲ. ಇಂಟೆಲಿಜೆನ್ಸ್‍ದಿಂದ ಮಾಹಿತಿ ಪಡೆದು ಫುಲ್ವಾಮಾ ಹಲ್ಲೆ ಆಗದಂತೆ ಅದಕ್ಕಿಂತ ಮುಂಚೆಯೇ ಸರ್ಜಿಕಲ್ ಸ್ಟ್ರೈಕ್ ಮಾಡಬಹುದಿತ್ತಲ್ಲ? ಯಾಕೆ ಮಾಡಲಿಲ್ಲ? ನಿಮಗೆ ಇದೊಂದು ವಿಕ್ಟರಿ ಆಗಿ ಕಾಣಿಸುತ್ತಿದೆ ಆದರೆ ನನಗೆ ಇದು ಒಂದು ದೊಡ್ಡ ವೈಫಲ್ಯವೆಂದೇ ಕಾಣಿಸುತ್ತಿದೆ. 40 ಜನರು ಹುತಾತ್ಮರಾಗುವುದು ಸಣ್ಣ ಮಾತಲ್ಲ. ಇದು ದೇಶಕ್ಕೆ ಒಂದು ದೊಡ್ಡ ಆಘಾತ. ಒಂದೇ ಕ್ಷಣದಲ್ಲಿ ಎಷ್ಟೋ ಮಕ್ಕಳು ಅನಾಥರಾದರು, ಎಷ್ಟೋ ತಂದೆತಾಯಿಗಳು ತಮ್ಮ ಮಕ್ಕಳನ್ನು ಕಳೆದುಕೊಂಡರು, ಈಗ ನೀವು ಹೇಳುತ್ತಿರುವುದೇನು? ಮೊದಲ ಬಾರಿ ಮತಚಲಾಯಿಸುವವರು ಅವರ ಹೆಸರಿನಲ್ಲಿ ಮತ ಚಲಾಯಿಸಬೇಕೆಂದು? ಇದಕ್ಕಿಂತ ದುಃಖಕರ ಮತ್ತೇನಿದೆ ದೇಶಕ್ಕೆ?

ವಿಡಿಯೋ ನೋಡಿ

ನಾನು ಮೊದಲ ಬಾರಿ ಮತಚಲಾಯಿಸುವವರಿಗೆ ಮತ್ತು ಇತರರಿಗೆ ವಿನಂತಿ ಮಾಡುತ್ತಿದ್ದೇನೆ. ನೀವು ನಿಮ್ಮ ಮತವನ್ನು ನಮ್ಮ ಸೈನಿಕರ ಸುರಕ್ಷತೆಯ ಜವಾಬ್ದಾರಿ ತೆಗೆದುಕೊಳ್ಳುವ, ಅದನ್ನು ಖಾತ್ರಿಪಡಿಸುವ ರಾಜಕಾರಿಣಿಗಳಿಗೆ ಮತ ನೀಡಿ. ನಮ್ಮ ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ನೀಡಬೇಡಿ. ಜೈ ಹಿಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...