Homeಮುಖಪುಟಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ಮತ ನೀಡಬೇಡಿ.- ಹುತಾತ್ಮ ಯೋಧನ ಪತ್ನಿ

- Advertisement -
- Advertisement -

ನಾನು ಮೊನ್ನೆ ನಮ್ಮ ಪ್ರಧಾನಿಗಳ ಭಾಷಣ ಕೇಳಿದೆ. ಪ್ರಧಾನಿಗಳು ಮೊದಲ ಬಾರಿ ಮತಚಲಾಯಿಸುವವರನ್ನು ಉದ್ದೇಶಿಸಿ ನಮ್ಮ ದೇಶದ ಸೈನಿಕರ ಮೇಲೆ ಫುಲ್ವಾಮಾದಲ್ಲಿ ಆದ ಹಲ್ಲೆಯನ್ನು ನೆನಪಿಸಿಕೊಳ್ಳಿ, ಅದರ ನಂತರ ಆದ ಬಾಲಾಕೋಟ್‍ನಲ್ಲಿ ಭಾರತೀಯ ಸೈನ್ಯ ಮಾಡಿದ ಸರ್ಜಿಕಲ್ ಸ್ಟ್ರೈಕ್ ನೆನಪಿಸಿಕೊಳ್ಳಿ, ನೀವು ಮತಚಲಾಯಿಸುವಾಗ ಹುತಾತ್ಮರಾದ ಸೈನಿಕರನ್ನು, ಸರ್ಜಿಕಲ್ ಸ್ಟ್ರೈಕ್ ಮಾಡಿದ ಶೂರಯೋಧರನ್ನು ಗಮನದಲ್ಲಿಟ್ಟುಕೊಂಡು ಮತಚಲಾಯಿಸಿ ಎಂದು ಯುವಜನತೆಗೆ ಅಪೀಲ್ ಮಾಡಿದರು.

ಕೇಳಿ ತುಂಬಾ ದುಃಖವಾಯಿತು. ನನ್ನ ಪ್ರಶ್ನೆ, ಇಂದು ರಾಜಕೀಯ ಮಾಡಲು, ಚುನಾವಣೆಗಳಲ್ಲಿ ಗೆಲ್ಲಲು, ಹುತಾತ್ಮರಾದ ಸೈನಿಕರನ್ನು, ಧೈರ್ಯ ತೋರಿದ ಶೂರಯೋಧರನ್ನು ಬಳಸಿಕೊಳ್ಳಬೇಕೇ? ಚುನಾವಣೆಗಳಲ್ಲಿ ಗೆಲ್ಲಲು ನಮ್ಮ ಯೋಧರನ್ನು ಬಳಸಿಕೊಳ್ಳುವುದು ತಪ್ಪಲ್ಲವೇ? ಪ್ರಧಾನಿಗಳು ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಹುತಾತ್ಮರಾದ 40 ಸೈನಿಕರನ್ನು ಉಳಿಸಲು ನೀವು ಏನು ಮಾಡಿದಿರಿ? ನಮ್ಮ ಗೂಢಚರ್ಯೆಯ ಸಂಸ್ಥೆಗಳು ಇದರ ಜವಾಬ್ದಾರಿ ಹೊರಬೇಕಲ್ಲವೇ? ಹೌದು ನೀವು ಏರ್‍ಸ್ಟ್ರೀಕ್ ಮಾಡಿಸಿದಿರಿ, ಆದರೆ ಅದನ್ನು ನಮ್ಮ 40 ಸೈನಿಕರು ಹತರಾಗುವುದಕ್ಕಿಂತ ಮುಂಚೆ ಯಾಕೆ ಮಾಡಲಾಗಲಿಲ್ಲ. ಇಂಟೆಲಿಜೆನ್ಸ್‍ದಿಂದ ಮಾಹಿತಿ ಪಡೆದು ಫುಲ್ವಾಮಾ ಹಲ್ಲೆ ಆಗದಂತೆ ಅದಕ್ಕಿಂತ ಮುಂಚೆಯೇ ಸರ್ಜಿಕಲ್ ಸ್ಟ್ರೈಕ್ ಮಾಡಬಹುದಿತ್ತಲ್ಲ? ಯಾಕೆ ಮಾಡಲಿಲ್ಲ? ನಿಮಗೆ ಇದೊಂದು ವಿಕ್ಟರಿ ಆಗಿ ಕಾಣಿಸುತ್ತಿದೆ ಆದರೆ ನನಗೆ ಇದು ಒಂದು ದೊಡ್ಡ ವೈಫಲ್ಯವೆಂದೇ ಕಾಣಿಸುತ್ತಿದೆ. 40 ಜನರು ಹುತಾತ್ಮರಾಗುವುದು ಸಣ್ಣ ಮಾತಲ್ಲ. ಇದು ದೇಶಕ್ಕೆ ಒಂದು ದೊಡ್ಡ ಆಘಾತ. ಒಂದೇ ಕ್ಷಣದಲ್ಲಿ ಎಷ್ಟೋ ಮಕ್ಕಳು ಅನಾಥರಾದರು, ಎಷ್ಟೋ ತಂದೆತಾಯಿಗಳು ತಮ್ಮ ಮಕ್ಕಳನ್ನು ಕಳೆದುಕೊಂಡರು, ಈಗ ನೀವು ಹೇಳುತ್ತಿರುವುದೇನು? ಮೊದಲ ಬಾರಿ ಮತಚಲಾಯಿಸುವವರು ಅವರ ಹೆಸರಿನಲ್ಲಿ ಮತ ಚಲಾಯಿಸಬೇಕೆಂದು? ಇದಕ್ಕಿಂತ ದುಃಖಕರ ಮತ್ತೇನಿದೆ ದೇಶಕ್ಕೆ?

ವಿಡಿಯೋ ನೋಡಿ

ನಾನು ಮೊದಲ ಬಾರಿ ಮತಚಲಾಯಿಸುವವರಿಗೆ ಮತ್ತು ಇತರರಿಗೆ ವಿನಂತಿ ಮಾಡುತ್ತಿದ್ದೇನೆ. ನೀವು ನಿಮ್ಮ ಮತವನ್ನು ನಮ್ಮ ಸೈನಿಕರ ಸುರಕ್ಷತೆಯ ಜವಾಬ್ದಾರಿ ತೆಗೆದುಕೊಳ್ಳುವ, ಅದನ್ನು ಖಾತ್ರಿಪಡಿಸುವ ರಾಜಕಾರಿಣಿಗಳಿಗೆ ಮತ ನೀಡಿ. ನಮ್ಮ ಸೈನಿಕರ ಬಲಿಕೊಟ್ಟು ಅವರ ಹೆಸರಿನಲ್ಲಿ ವೋಟು ಕೇಳುವವರಿಗೆ ನೀಡಬೇಡಿ. ಜೈ ಹಿಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...