Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...