Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...