Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...