Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...