Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...