Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...