Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...