Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...