Homeಮುಖಪುಟಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡವಿಟ್ಟಿದ್ದರು. ಆಭರಣಗಳನ್ನು ಮಾರಿದ್ದರು. ಅಕ್ಕನ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು.

- Advertisement -
- Advertisement -

ದ್ವಿತೀಯ ಪಿಯುಸಿಯಲ್ಲಿ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ INSPIRE ವಿದ್ಯಾರ್ಥಿವೇತನ ಪಡೆದಿದ್ದ ವಿದ್ಯಾರ್ಥಿನಿ ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿವೇತನ ನೀಡದ ವಿಳಂಬ ಕಾರಣಕ್ಕೆ ನೇಣಿಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನ ಶಾದ್‌ನಗರದಲ್ಲಿ ನಡೆದಿದೆ.

ದೆಹಲಿಯ ಲೇಡಿ ಶ್ರೀರಾಮ್ ಕಾಲೇಜ್ ಫಾರ್ ವುಮೆನ್‌ನ ವಿದ್ಯಾರ್ಥಿನಿ ಐಶ್ವರ್ಯಾ ರೆಡ್ಡಿ, ಗಣಿತಶಾಸ್ತ್ರದಲ್ಲಿ ತನ್ನ ಎರಡನೇ ವರ್ಷದ ಬಿಎಸ್ಸಿ (ಆನರ್ಸ್) ವ್ಯಾಸಂಗ ಮಾಡುತ್ತಿದ್ದರು. ಮಾರ್ಚ್‌ನಿಂದ ಆಕೆಗೆ ಯಾವುದೇ ವಿದ್ಯಾರ್ಥಿವೇತನದ ಹಣವು ದೊರೆತಿರಲಿಲ್ಲ.

ಕೊರೊನಾದಿಂದ ಲಾಕ್‌ಡೌನ್ ಹೇರಿದಾಗಿನಿಂದ ದರ್ಜಿ ಕೆಲಸ ಮಾಡುತ್ತಿದ್ದ ಆಕೆಯ ತಾಯಿ ಮತ್ತು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ತಂದೆ ತುಂಬಾ ಕಷ್ಟಪಡುತ್ತಿದ್ದರು. ವಿದ್ಯಾರ್ಥಿವೇತನದ ಹಣ ಇನ್ನೂ ಆಕೆಗೆ ದೊರೆಯದೇ ಬಾಕಿ ಉಳಿದಿದ್ದ ಕಾರಣ ಆಕೆಯ ಪೋಷಕರು ಮಗಳ ಶಿಕ್ಷಣಕ್ಕಾಗಿ ತಮ್ಮ ಮನೆಯನ್ನು ಅಡವಿಟ್ಟಿದ್ದಾರೆ.

ಮಗಳ ವಿದ್ಯಾಭ್ಯಾಸಕ್ಕಾಗಿ ಕುಟುಂಬವು ತಮ್ಮ ಮನೆಯನ್ನು 2 ಲಕ್ಷ ರೂ.ಗೆ ಅಡಮಾನ ಇಟ್ಟಿತ್ತು, ಚಿನ್ನದ ಆಭರಣಗಳನ್ನು ಮಾರಿದ್ದರು. ಅಕ್ಕ ಐಶ್ವರ್ಯಾ ಶಿಕ್ಷಣಕ್ಕಾಗಿ ಕಿರಿಯ ಸಹೋದರನನ್ನು ಶಾಲೆಯಿಂದ ಬಿಡಿಸಿದ್ದರು. ಆಕೆಯ ಹಾಸ್ಟೆಲ್ ವಸತಿ ಸೌಕರ್ಯಗಳಿಗೆ ಹಣ ವ್ಯವಸ್ಥೆ ಮಾಡಲು ಮತ್ತು ಅವಳನ್ನು ದೆಹಲಿಗೆ ವಾಪಸ್ ಕಳುಹಿಸಲು ರೈಲು ಟಿಕೆಟ್‌ಗಳಿಗೆ ಸಹ ಕುಟುಂಬವು ಹೆಣಗಾಡುತ್ತಿತ್ತು. ಈ ಎಲ್ಲಾ ಘಟನೆಗಳು 19 ವರ್ಷದ ಯುವತಿ ಐಶ್ವರ್ಯಾರನ್ನ ತೀವ್ರ ಒತ್ತಡಕ್ಕೆ ಸಿಲುಕಿಸಿದ್ದವು.

ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

“ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಕಾರಣದಿಂದಾಗಿ ನನ್ನ ಕುಟುಂಬವು ಸಾಕಷ್ಟು ಖರ್ಚುಗಳನ್ನು ಭರಿಸಬೇಕಾಗಿದೆ. ನಾನು ಅವರಿಗೆ ಹೊರೆಯಾಗಿದ್ದೇನೆ, ನನ್ನ ಶಿಕ್ಷಣ ಅವರಿಗೆ ಹೊರೆಯಾಗಿದೆ. ನಾನು ಶಿಕ್ಷಣವಿಲ್ಲದೆ ಬದುಕಲು ಸಾಧ್ಯವಿಲ್ಲ. ನಾನು ಈ ಬಗ್ಗೆ ಹಲವು ದಿನಗಳಿಂದ ಯೋಚಿಸುತ್ತಿದ್ದೇನೆ. ಸಾವು ಮಾತ್ರ ನನಗೆ ಸರಿಯಾಗಿದೆ ಎಂದು ನಾನು ಭಾವಿಸಿದೆ” ಎಂದು ಐಶ್ವರ್ಯಾ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಜೊತೆಗೆ “ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಕನಿಷ್ಠ ಒಂದು ವರ್ಷದವರೆಗೆ ಬಿಡುಗಡೆ ಮಾಡಲಾಗಿದೆಯೆಂದು ನೋಡಿ. ಎಲ್ಲರೂ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ಒಳ್ಳೆಯ ಮಗಳಲ್ಲ” ಎಂದು ಬರೆದಿದ್ದಾರೆ.

ಮೃತ ವಿದ್ಯಾರ್ಥಿನಿ ಐಶ್ವರ್ಯಾ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದರು ಎಂದು ಆಕೆಯ ಕುಟುಂಬ ತಿಳಿಸಿದೆ. ಎರಡು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಅವರು ಸಿದ್ಧತೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಮೊಹರಂ ಮೆರವಣಿಗೆಯಲ್ಲಿ ಹಿಂಸಾಚಾರ: ಕಣ್ಣು ಕಳೆದುಕೊಂಡ ವಿದ್ಯಾರ್ಥಿಗಳು

ನವೆಂಬರ್ 2 ರಂದು ತೆಲಂಗಾಣ ಮೂಲದ 19 ವರ್ಷದ ಯುವತಿ ಹೈದರಾಬಾದ್‌ನ ಶಾದ್‌ನಗರದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವರ ಸಾವು ದೆಹಲಿ ವಿಶ್ವವಿದ್ಯಾಲಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ.

ಸಚಿವಾಲಯ ಮತ್ತು ಕಾಲೇಜು ಆಡಳಿತಕ್ಕೆ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದರೂ ಸಹ ಸಚಿವಾಲಯದಿಂದ ವಿದ್ಯಾರ್ಥಿವೇತನ ನೀಡಲು ವಿಳಂಬವಾಗಿದೆ. ಮಾರ್ಚ್‌ನಿಂದ ವಿದ್ಯಾರ್ಥಿನಿ ತನ್ನ ವಿದ್ಯಾರ್ಥಿವೇತನ ಹಣವನ್ನು ಸ್ವೀಕರಿಸಿಲ್ಲ ಎಂದು ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಐಶ್ವರ್ಯಾ ಅವರು ವಿದ್ಯಾಭ್ಯಾಸ ಮುಂದುವರೆಸಲು ನಡೆಸಿದ ಹೋರಾಟಗಳ ಬಗ್ಗೆ ಎಲ್ಎಸ್ಆರ್ ವಿದ್ಯಾರ್ಥಿಗಳ ಒಕ್ಕೂಟದ ಸಮಿತಿಯು ಕಾಲೇಜು ಆಡಳಿತಕ್ಕೆ ಇಮೇಲ್‌ಗಳನ್ನು ಕಳುಹಿಸಿತ್ತು. ಐಶ್ವರ್ಯಾ ಲ್ಯಾಪ್‌ಟಾಪ್ ಹೊಂದಿರಲಿಲ್ಲ, ಇಂಟರ್‌ನೆಟ್ ಸಂಪರ್ಕ ಕೂಡ ಆಕೆಗೆ ದುಬಾರಿಯಾಗಿತ್ತು. ಆಕೆಯ ಮೊಬೈಲ್ ಡಾಟಾ ಪ್ಯಾಕ್‌ಗಳು ಕೂಡ ಮೊದಲೇ ಆರ್ಥಿಕ ಸಮಸ್ಯೆಗಳಿದ್ದ ಕುಟುಂಬಕ್ಕೆ ಮತ್ತಷ್ಟು ಹೊರೆಯಾಗುತ್ತಿದ್ದವು ಎಂದು ಕಾಲೇಜು ಕಮಿಟಿ ತಿಳಿಸಿದೆ.

ಸಮಗ್ರ ಶಿಕ್ಷಣ ಸಮಿತಿ ನಡೆಸಿದ ಸಮೀಕ್ಷೆಯಲ್ಲೂ ಐಶ್ವರ್ಯಾ ತನ್ನ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಇಂಟರ್‌ನೆಟ್ ಸಂಪರ್ಕ ತೊಂದರೆಯಿಂದಾಗಿ ಪ್ರತಿದಿನ ನಡೆಸಲಾಗುವ ಐದು ರಿಂದ ಎಂಟು ಗಂಟೆಗಳ ಆನ್‌ಲೈನ್‌ ತರಗತಿಗಳಲ್ಲಿ ಆಕೆ ಕೇವಲ ಮೂರು ಗಂಟೆಗಳಿಗಿಂತ ಕಡಿಮೆ ತರಗತಿಗಳಿಗೆ ಹಾಜರಾಗಬಹುದಿತ್ತು. ಅಗತ್ಯವಿರುವ ಎಲ್ಲ ಅಧ್ಯಯನ ಸಾಮಗ್ರಿಗಳನ್ನು ತಾನು ಸ್ವೀಕರಿಸಿಲ್ಲ ಎಂದು ಸಮಿತಿಗೆ ಆಕೆ ತಿಳಿಸಿದ್ದಳು.

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ: ಬೆಂಗಳೂರು ವಿವಿಯ 40,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಸ್!

ವಿದ್ಯಾರ್ಥಿನಿ ಐಶ್ವರ್ಯಾ ಮೆರಿಟ್ ಅರ್ಹತೆಯ ಮೇರೆಗೆ ದೆಹಲಿಯ ಎಲ್‌ಎಸ್‌ಆರ್‌ನಲ್ಲಿ ಸೀಟು ಪಡೆದಿದ್ದು, ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಾಲೇಜು ಆಡಳಿತವು ಎರಡನೇ ವರ್ಷಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳನ್ನು ನವೆಂಬರ್ 10 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿತ್ತು. ಇದು ಆಕೆಗೆ ಮತ್ತಷ್ಟು ಕಷ್ಟಕರವಾಗಿದೆ. ಐಶ್ವರ್ಯಾಗೆ ನವೆಂಬರ್ 7 ರೊಳಗೆ ಹಾಸ್ಟೆಲ್ ಖಾಲಿ ಮಾಡುವಂತೆ ಹಾಸ್ಟೆಲ್ ವಾರ್ಡನ್ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಿದ್ಯಾರ್ಥಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಉದ್ದೇಶಪೂರ್ವಕವಾಗಿ ನೋಟು ರದ್ದತಿ ಮತ್ತು ಲಾಕ್ ಡೌನ್ ಮೂಲಕ ಬಿಜೆಪಿ ಸರ್ಕಾರ ಅಸಂಖ್ಯಾತ ಕುಟುಂಬಗಳನ್ನು ನಾಶಪಡಿಸಿದೆ” ಇದು ಸತ್ಯ! ಇದೇ ಸತ್ಯ !! ಎಂದು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...