ಕಳೆದ 48 ಗಂಟೆಗಳ ಅವಧಿಯಲ್ಲಿ ಎರಡು ಹೊಸ ಪ್ರಕರಣಗಳಲ್ಲಿ ಕರೋನಾ ವೈರೆಸ್ ಪತ್ತೆಯಾದ “ಭಯಪಡುವ ಅಗತ್ಯವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು “ಭಯಪಡುವ ಅಗತ್ಯವಿಲ್ಲ. ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ, ಸ್ವರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಣ್ಣ ಮತ್ತು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಮುಂಜಾಗ್ರತ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.
There is no need to panic. We need to work together, take small yet important measures to ensure self-protection. pic.twitter.com/sRRPQlMdtr
— Narendra Modi (@narendramodi) March 3, 2020
COVID-19 ಕೊರೊನಾ ವೈರಸ್ನ ಸನ್ನದ್ಧತೆಯ ಬಗ್ಗೆ ವ್ಯಾಪಕ ವಿಮರ್ಶೆ ನಡೆಸಿದೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಇನ್ನೊಂದೆಡೆ ಕರೋನಾ ವೈರಸ್ ಕುರಿತು ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮನವಿ ಮಾಡಿದ್ದಾರೆ.
ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜುಗೊಂಡಿದೆ. ನಾಗರಿಕರೂ ಸಹ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ವೈರಸ್ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿರುವ ಮುಖ್ಯಮಂತ್ರಿಗಳು, ವೈರಸ್ ಕುರಿತ ಊಹಾಪೋಹಗಳಿಂದ ಭಯಭೀತರಾಗಬಾರದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.